ಕೇರಳದಿಂದ ದ.ಕ. ಪ್ರವೇಶ: ಬಿಗಿ ತಪಾಸಣೆ
ಒಮಿಕ್ರಾನ್ ಆತಂಕ: ಕರಾವಳಿಯಲ್ಲಿಯೂ ಕಟ್ಟೆಚ್ಚರ
Team Udayavani, Nov 29, 2021, 6:44 AM IST
ಮಂಗಳೂರು: ವಿದೇಶದಲ್ಲಿ ರೂಪಾಂತರಿ ಕೊರೊನಾ ವೈರಸ್ “ಒಮಿಕ್ರಾನ್’ ಪತ್ತೆ ಮತ್ತು ಕೊರೊನಾ 3ನೇ ಅಲೆ ಆತಂಕದ ಹಿನ್ನೆಲೆಯಲ್ಲಿ ಕೇರಳ ಭಾಗದಿಂದ ದಕ್ಷಿಣ ಕನ್ನಡ ಜಿಲ್ಲೆ ಪ್ರವೇಶ ವೇಳೆ ತಪಾಸಣೆ ಬಿಗಿಗೊಳಿಸಲಾಗಿದೆ ಎಂದು ಡಿಸಿ ಡಾ| ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.
ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇರಳದಿಂದ ಬರುವ ವಿದ್ಯಾರ್ಥಿಗಳಲ್ಲಿ ಪಾಸಿಟಿವಿಟಿ ದರ ಶೇ. 8ರಷ್ಟು ವರದಿಯಾಗುತ್ತಿದೆ. ಅದಕ್ಕಾಗಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವಂತೆ ಸಿಎಂ ಶನಿವಾರ ಸೂಚನೆ ನೀಡಿದ್ದರು. ಅದರಂತೆ ಎಲ್ಲ ಗಡಿಗಳಲ್ಲಿಯೂ ಸ್ಥಳೀಯ ಪೊಲೀಸ್ ಠಾಣಾ ಸಿಬಂದಿ ಹಾಗೂ ಇತರ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ನಿಯೋಜಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.
ನೆಗೆಟಿವ್ ವರದಿ ಕಡ್ಡಾಯ
ದ.ಕ. ಜಿಲ್ಲೆಯಿಂದ ಕೇರಳ ಭಾಗಕ್ಕೆ ಬಸ್ ಸಂಚಾರ ಸದ್ಯಕ್ಕೆ ಮುಂದುವರಿಯಲಿದೆ. ಆದರೆ ಎರಡೂ ಕಡೆಗಳಲ್ಲಿಯೂ ಆರ್ಟಿಪಿಸಿಆರ್ ನೆಗೆಟಿವ್ ವರದಿ ಹೊಂದಿರುವುದನ್ನು ಕಡ್ಡಾಯಗೊಳಿಸಲಾಗಿದೆ. ಕೇರಳದಲ್ಲಿ ಪಾಸಿಟಿವಿಟಿ ದರ ಹೆಚ್ಚಿದ್ದರೂ ಕಾಸರಗೋಡಿನಲ್ಲಿ ಕಡಿಮೆ ಇದೆ. ಕಾಸರಗೋಡಿನ ಸುಮಾರು ಶೇ. 40ರಷ್ಟು ಮಂದಿ ದ.ಕ. ಜಿಲ್ಲೆ ಯನ್ನು ವಿವಿಧ ಕಾರಣಗಳಿಂದ ಅವಲಂಬಿಸಿ ದ್ದಾರೆ. ಗಡಿ ಭಾಗಗಳಲ್ಲಿ ವಾಹನಗಳ ತಪಾಸಣೆ ನಡೆಸಲಾಗುತ್ತಿದೆ. ಅದಲ್ಲದೆ ಕಳೆದ 15 ದಿನಗಳಿಂದ ಕೇರಳದಿಂದ ಬಂದ ವಿದ್ಯಾರ್ಥಿಗಳನ್ನು ಸಾಮೂಹಿಕವಾಗಿ ಸ್ಕ್ರೀನಿಂಗ್ ಮಾಡಲು ಸೂಚಿಸಲಾಗಿದೆ ಎಂದರು.
ಜಿಲ್ಲಾಡಳಿತಕ್ಕೆ ಪಟ್ಟಿ
ದಕ್ಷಿಣ ಆಫ್ರಿಕಾದಿಂದ ಇಲ್ಲಿಗೆ ಬಂದವರ ಪಟ್ಟಿಯನ್ನು ಅಂತಾ ರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಜಿಲ್ಲಾಡಳಿತಕ್ಕೆ ಕಳುಹಿಸುವುದಾಗಿ ತಿಳಿಸಿದ್ದಾರೆ. ಈಗಾಗಲೇ ಬಂದವರನ್ನು ಮತ್ತೊಮ್ಮೆತಪಾಸಣೆಗೊಳಪಡಿಸುವ ಬಗ್ಗೆಯೂ ಚರ್ಚೆ ನಡೆದಿದೆ. ಕಳೆದ 15 ದಿನಗಳಿಂದೀಚೆಗೆ ಬಂದವರ ಪಟ್ಟಿಯನ್ನು ಕಳುಹಿಸುವುದಾಗಿ ತಿಳಿಸಿದ್ದಾರೆ. ಮಂಗಳೂರಿಗೆ ದುಬಾೖಯಿಂದ ಬರುವವರು ಹೆಚ್ಚು. ಹಾಗೆ ಬರುವವರಲ್ಲಿ ದಕ್ಷಿಣ ಆಫ್ರಿಕಾದಿಂದ ಬಂದಿದ್ದರೆ ಅವರನ್ನು ತಪಾಸಣೆ ಮಾಡುವ ವ್ಯವಸ್ಥೆಯೂ ವಿಮಾನ ನಿಲ್ದಾಣದಲ್ಲಿ ಈಗಾಗಲೇ ಇದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ:ಕೋವಿಡ್ ನ ಹೊಸ ರೂಪಾಂತರಿ ತಡೆಗೆ ಜಿಲ್ಲೆಯಲ್ಲಿ ಸಕಲ ಮುಂಜಾಗ್ರತಾ ಕ್ರಮ :ಉಡುಪಿ ಜಿಲ್ಲಾಧಿಕಾರಿ
ಆರೋಗ್ಯ ಇಲಾಖೆಯಿಂದ ಸಭೆ
ವಿದೇಶದಲ್ಲಿ ರೂಪಾಂತರಿ ಕೊರೊನಾ ವೈರಸ್ ಒಮಿಕ್ರಾನ್ ಪತ್ತೆಯಾಗಿರುವ ಕಾರಣಕ್ಕೆ ಜಿಲ್ಲೆಯಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆಯ ಬಗ್ಗೆ ರವಿವಾರ ಆರೋಗ್ಯ ಇಲಾಖೆ ಅಧಿಕಾರಿಗಳು ಸಭೆ ನಡೆಸಿದರು.
ಉಳ್ಳಾಲ; ತಪಾಸಣೆ ಆರಂಭ
ಉಳ್ಳಾಲ: ಗಡಿಭಾಗದ ಉಳ್ಳಾಲ ಮತ್ತು ಕೊಣಾಜೆ ಠಾಣಾ ವ್ಯಾಪ್ತಿಯಲ್ಲಿ ಒಟ್ಟು ಏಳು ಕಡೆ ಪೊಲೀಸ್ ಔಟ್ಪೋಸ್ಟ್ ಹಾಕಿ ತಪಾಸಣೆ ಆರಂಭಿಸಲಾಗಿದೆ.
ತಲಪಾಡಿ ಮತ್ತು ದೇವಿಪುರದಲ್ಲಿ ತಪಾಸಣೆ ಆರಂಭಿಸಿದ್ದು, ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನೆತ್ತಿಲಪದವು, ತೌಡುಗೋಳಿ, ನಾರ್ಯ, ಮುದುಂಗಾರುಕಟ್ಟೆ, ನಂದರಪಡು³ವಿನಲ್ಲಿ ಪೊಲೀಸ್ ಔಟ್ ಪೋಸ್ಟ್ಗಳನ್ನು ಹಾಕಿದ್ದು, ಪೊಲೀಸರು ತಪಾಸಣೆಯಲ್ಲಿ ತೊಡಗಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ