ದ.ಕ.: 21 ಸಾವಿರಕ್ಕೂ ಹೆಚ್ಚು ಯುವ ಮತದಾರರ ಸೇರ್ಪಡೆ
Team Udayavani, Jan 17, 2019, 12:30 AM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನವೆಂಬರ್ನಲ್ಲಿ ನಡೆದ ಮಿಂಚಿನ ನೋಂದಣಿ ಹಾಗೂ ವಿಶೇಷ ನೋಂದಣಿ ಸೇರಿದಂತೆ ಪರಿಷ್ಕೃತ ಮತದಾರರ ಪಟ್ಟಿಗೆ 21,292 ಯುವ ಮತದಾರರು ಸೇರ್ಪಡೆಗೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ಶಶಿಕಾಂತ ಸೆಂಥಿಲ್ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಎಲ್ಲ ಯುವ ಮತದಾರರಿಗೆ ಜ. 25ರಂದು ಪುರಭವನ ದಲ್ಲಿ ನಡೆಯಲಿರುವ ರಾಷ್ಟ್ರೀಯ ಮತದಾರರ ದಿನಾಚರಣೆ ಯಲ್ಲಿ ಗುರುತುಚೀಟಿ ನೀಡಲಾಗುವುದು ಎಂದರು.
ಅಂತಿಮ ಮತದಾರರ ಪಟ್ಟಿಯಂತೆ ಜಿಲ್ಲೆಯಲ್ಲಿ ಒಟ್ಟು 16,97,417 ಮತದಾರರಿದ್ದಾರೆ. ಈ ಪೈಕಿ 8,33,719 ಪುರುಷರು ಹಾಗೂ 8,63,698 ಮಹಿಳೆಯರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಒಟ್ಟು 16,98,868 ಮತದಾರರಿದ್ದು, 1,451 ಮತದಾರರು ಈ ಬಾರಿ ಕಡಿಮೆಯಾಗಿದ್ದಾರೆ ಎಂದರು.
ಮತದಾರರ ಸೇರ್ಪಡೆ ಹಾಗೂ ಕೈಬಿಡುವ ಪ್ರಕ್ರಿಯೆ ಮುಂದಿನ ಚುನಾವಣೆ ಘೋಷಣೆಯ ವರೆಗೆ ಮುಂದುವರಿಯಲಿದೆ. ಅರ್ಜಿ ಸಲ್ಲಿಸಲು ಅಥವಾ ಆಕ್ಷೇಪಣೆ ಸಲ್ಲಿಸಲು ಅವಕಾಶವಿರುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಉಡುಪಿ: 4,793 ಹೊಸ ಮತದಾರರು
ಉಡುಪಿ: ಜಿಲ್ಲೆಯಲ್ಲಿ ಹೆಸರು ಸೇರ್ಪಡೆಗೆ 10,273, ರದ್ದುಗೊಳಿಸಲು 7,099, ತಿದ್ದುಪಡಿಗಾಗಿ 3,374 ಜನರು, ವಿಧಾನಸಭಾ ವ್ಯಾಪ್ತಿಯಲ್ಲಿ ಬದಲಾವಣೆಗೆ 755 ಜನರು ಅರ್ಜಿ ಸಲ್ಲಿಸಿದ್ದಾರೆ. 4,793 ಯುವ ಮತದಾರರು ನೋಂದಣಿ ಆಗಿದ್ದಾರೆ. ಒಟ್ಟು ಜನಸಂಖ್ಯೆಯ ಶೇ.80.29 ಜನ ಮತದಾರರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಅಂತಿಮ ಮತದಾರರ ಪಟ್ಟಿಯನ್ನು ಎಲ್ಲ ಮತಗಟ್ಟೆಗಳಲ್ಲಿ ಮತ್ತು ಸಹಾಯಕ ಕಮಿಷನರ್, ತಾಲೂಕು ಕಚೇರಿಗಳಲ್ಲಿ ಮತ್ತು ಜಿಲ್ಲಾಧಿಕಾರಿ ಕಚೇರಿಯ ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದೆ.
ಬೈಂದೂರು ಕ್ಷೇತ್ರದಲ್ಲಿ ಒಟ್ಟು 2,22,542 ಮತದಾರರು, ಕುಂದಾಪುರದಲ್ಲಿ 2,00,101, ಉಡುಪಿಯಲ್ಲಿ 2,05,566 ಕಾಪುವಿನಲ್ಲಿ 1,81,178,ಕಾರ್ಕಳದಲ್ಲಿ 1,81,386 ಸೇರಿ ಜಿಲ್ಲೆಯಲ್ಲಿ ಒಟ್ಟು 9,90,773 ಮತದಾ ರರು ಇದ್ದಾರೆ. 16 ಮಂದಿ ತೃತೀಯ ಲಿಂಗಿಗಳಿದ್ದಾರೆಂದು ತಿಳಿಸಿದರು.
ಜ. 25ರಂದು ಪುರಭವನದಲ್ಲಿ ರಾಷ್ಟ್ರೀಯ ಮತದಾರರ ದಿನ ನಡೆಯಲಿದ್ದು, ಯುವ ಮತದಾರರ ಗುರುತು ಚೀಟಿ ವಿತರಿಸಲಾಗುವುದು.
ದೂರು ಸಲ್ಲಿಕೆಗೆ ಅವಕಾಶ
ಮತದಾರರ ಪಟ್ಟಿಯಲ್ಲಿನ ಗೊಂದಲ, ಆಕ್ಷೇಪಗಳ ಕುರಿತಂತೆ ವಿವಿಧ ಪಕ್ಷಗಳಿಗೆ ಸಂಬಂಧಿಸಿದ ಬೂತ್ ಮಟ್ಟದ ಏಜೆಂಟ್ಗಳ ಸಹಿತ ಸಾರ್ವಜನಿಕರು ಚುನಾವಣೆಗೆ ಮುಂಚಿತವಾಗಿ ದೂರು ನೀಡಿದಲ್ಲಿ ಪರಿಹರಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಮತದಾರರ ಸಹಾಯವಾಣಿ 1950 ವೆಬ್ಸೈಟ್ ceokarnataka.kar.nic.in
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ