ದ.ಕ. ಅಭಿವೃದ್ಧಿಗೆ ಮೂಲಸೌಕರ್ಯ ಕಾರ್ಯಪಡೆ


Team Udayavani, Dec 8, 2017, 12:19 PM IST

0712mlr21.jpg

ಮಂಗಳೂರು: ದ.ಕ ಜಿಲ್ಲೆಯ ಎಲ್ಲ ವಿಭಾಗಗಳ ಅಭಿವೃದ್ಧಿ ಕುರಿತಂತೆ ವಿವಿಧ ಇಲಾಖಾಧಿಕಾರಿಗಳ ನೇತೃತ್ವದಲ್ಲಿ “ಮೂಲಸೌಕರ್ಯ ಕಾರ್ಯಪಡೆ’ ರಚಿಸಲಾಗಿದೆ. ಈ ಮೂಲಕ ಎಲ್ಲ ಕಾಮಗಾರಿಗಳನ್ನು ಪರಿಶೀಲಿಸಿ ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ದ.ಕ. ಜಿಲ್ಲಾಧಿಕಾರಿ ಶಶಿಕುಮಾರ್‌ ಸೆಂಥಿಲ್‌ ಹೇಳಿದರು.

“ದ.ಕ. ಜಿಲ್ಲೆಯ ಅಭಿವೃದ್ಧಿ ಕುರಿತಂತೆ ಇರುವ ಸಮಸ್ಯೆ ಹಾಗೂ ಸವಾಲು’ ಎಂಬ ವಿಚಾರದಲ್ಲಿ ಮಂಗಳೂರಿನ ಕೆನರಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಆಶ್ರಯದಲ್ಲಿ ಗುರುವಾರ ಆಯೋಜಿಸಲಾದ ಜಿಲ್ಲಾಧಿಕಾರಿಗಳ ಜತೆ ಸಂವಾದದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಯಾವುದೇ ಯೋಜನೆ, ಕಾಮಗಾರಿ ನಡೆಸುವ ಹಂತದಲ್ಲಿ
ಯಾವುದಾದರೂ ಒಂದು ಇಲಾಖೆಯಿಂದ ಸಮಸ್ಯೆ ಅಥವಾ ನಿರಾಕರಣೆ ಎದುರಾಗಿ ಕಾಮಗಾರಿ ವಿಳಂಬಿಸುವುದು ರೂಢಿ ಎಂಬಂತಾಗಿದೆ.

ಇಲಾಖೆಗಳ ನಡುವೆ ಸಮನ್ವಯ ಇಲ್ಲ. ಒಂದು ಇಲಾಖೆಯಿಂದ ಸಮ್ಮತಿ ದೊರೆತರೆ ಇನ್ನೊಂದು ಇಲಾಖೆ
ಕಾಮಗಾರಿ ಮುಂದುವರಿಕೆಗೆ ಅಡಚಣೆ ಒಡ್ಡುತ್ತದೆ. ಈ ಮೂಲಕ ಸಾರ್ವಜನಿಕರಿಗೆ ಅತ್ಯಂತ ಅಗತ್ಯವಾದ
ಯೋಜನೆಯೊಂದು ನಿಧಾನವಾಗಿ ಮೂಲೆಗುಂಪಾಗುವ ಪರಿಸ್ಥಿತಿ ಇದೆ. ಇದನ್ನು ಮೊದಲು ಸರಿಪಡಿಸಬೇಕಿದೆ.

ಹೀಗಾಗಿ ಒಂದು ಯೋಜನೆ ಕೈಗೊಳ್ಳುವ ಹಂತದಲ್ಲಿ ಅದು ಒಳಗೊಳ್ಳುವ ಎಲ್ಲ ಇಲಾಖೆಗಳನ್ನು ಒಗ್ಗೂಡಿಸಿ
“ಮೂಲಸೌಕರ್ಯ ಕಾರ್ಯಪಡೆ’ ರಚಿಸಲಾಗಿದೆ. ಈ ಮೂಲಕ ಎಲ್ಲ ಇಲಾಖೆಗಳನ್ನು ಒಂದೇ ವೇದಿಕೆಯಲ್ಲಿ ತಂದು ಕಾಮಗಾರಿಗೆ ವೇಗ ನೀಡುವ ಉದ್ದೇಶ ಇರಿಸಿಕೊಳ್ಳಲಾಗಿದೆ ಎಂದರು.

ಮಂಗಳೂರು ನಗರ ಬೆಳೆಯುತ್ತಿದ್ದು, ಇಲ್ಲಿ ಇನ್ನಷ್ಟು ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಭೂಮಿಯ ಆವಶ್ಯಕತೆಯಿದೆ. ಆದರೆ, ಮಂಗಳೂರು ವ್ಯಾಪ್ತಿಯಲ್ಲಿ ಸರಕಾರಿ ಭೂಮಿಯ ಕೊರತೆ ಕಂಡುಬರುತ್ತಿದೆ. ಈ ಹಿನ್ನೆಲೆಯಲ್ಲಿ ಸರಕಾರಿ ಭೂಮಿಯನ್ನು ಗುರುತಿಸಲು ಉದ್ದೇಶಿಸಲಾಗಿದೆ. ಜತೆಗೆ ಖಾಸಗಿ ಭೂಮಿಯನ್ನು ಪಡೆದು ಕಾಯ್ದಿಡುವ ಕ್ರಮ ಕೈಗೊಳ್ಳಲು ಯೋಜಿಸಲಾಗಿದೆ ಎಂದರು.

ಟೆಂಡರ್‌ ಹಂತದಲ್ಲಿ ಸ್ಮಾರ್ಟ್‌ಸಿಟಿ ಮಂಗಳೂರು ಸ್ಮಾರ್ಟ್‌ಸಿಟಿ ಯೋಜನೆಯ ಮೊದಲ ಹಂತದ ಕ್ರಮಗಳನ್ನು ಈಗಾಗಲೇ ಕೈಗೊಳ್ಳಲಾಗಿದೆ. ಕೆಲವು ಯೋಜನೆಗಳಿಗೆ ಟೆಂಡರ್‌ ಪ್ರಕ್ರಿಯೆ ನಡೆದಿದೆ. ಈ ಮೂಲಕ ಕೆಲವೇ ದಿನಗಳಲ್ಲಿ ಯೋಜನೆಯು ಅನುಷ್ಠಾನವಾಗಲಿದೆ. ಆದರೆ ಅದರ ಫಲಿತಾಂಶ ತತ್‌ ಕ್ಷಣವೇ ನಮಗೆ ದೊರೆಯದು. ಭವಿಷ್ಯದ ಮಂಗಳೂರಿನ ದೃಷ್ಟಿಯಲ್ಲಿ ಇದೊಂದು ಆಮೂಲಾಗ್ರ ಬದಲಾವಣೆ ಎನಿಸಲಿದ್ದು, ಸಿಂಗಾಪುರ ಮಾದರಿಯಲ್ಲಿ ಮಂಗಳೂರನ್ನು ಕಟ್ಟುವ ಪ್ರಕ್ರಿಯೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಅವರು ಯೋಜನೆ ಬಗ್ಗೆ ವಿವರಗಳನ್ನು ನೀಡಿದರು. ಕೆನರಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷರಾದ ವತಿಕಾ ಪೈ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ಪ್ರಮುಖರಾದ ಪಿ.ಬಿ.ಅಬ್ದುಲ್‌ ಹಮೀದ್‌, ಪ್ರಶಾಂತ್‌ ಸಿ.ಜಿ, ಇಸಾಕ್‌ ವಾಸ್‌ ಉಪಸ್ಥಿತರಿದ್ದರು. 

ಟ್ರಾಫಿಕ್‌: ಬದಲಿ ವ್ಯವಸ್ಥೆಗೆ ಚಿಂತನೆ ನಗರದಲ್ಲಿ ಟ್ರಾಪೀಕ್‌ ಸಮಸ್ಯೆ ಬಿಗಡಾಯಿಸುತ್ತಿರುವ ಹಿನ್ನೆಲೆಯಲ್ಲಿ ಪರ್ಯಾಯ ಸಂಚಾರ ನಿಯಂತ್ರಣ ವ್ಯವಸ್ಥೆಗಳ ಬಗ್ಗೆ ಯೋಚಿಸಬೇಕಿದೆ. ಮಂಗಳೂರಿನ ಮೂಲ ಚೆಲುವಿಗೆ ಧಕ್ಕೆ ಆಗದಂತೆ, ಮೋನೋ ರೈಲು ಸೇರಿದಂತೆ ಬದಲಿ ಪೂರಕ ಸಂಚಾರ ವ್ಯವಸ್ಥೆಗಳನ್ನು ರೂಪಿಸಲು ಮುಂದಾಗಬೇಕು. ಈ ಹಿನ್ನೆಲೆಯಲ್ಲಿ ಹೊಸ ಯೋಜನೆಗಳನ್ನು ಪರಿಚಯಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ
ಶಶಿಕುಮಾರ್‌ ಸೆಂಥಿಲ್‌ ಹೇಳಿದರು.  

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.