ದ.ಕ., ಉಡುಪಿ: ಕೋವಿಡ್ ದಿಂದ 13 ಮಕ್ಕಳು “ಅನಾಥ’!

ಬಿಟ್ಟು ಹೋದವರಿಗೆ ಪರಿಹಾರ ನೀಡಲು ಸಮಿತಿ

Team Udayavani, Jan 22, 2022, 7:20 AM IST

ದ.ಕ., ಉಡುಪಿ: ಕೋವಿಡ್ ದಿಂದ 13 ಮಕ್ಕಳು “ಅನಾಥ’!

ಮಂಗಳೂರು: ಕೊರೊನಾದಿಂದಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ 13 ಮಂದಿ ಮಕ್ಕಳು ಅನಾಥರಾಗಿದ್ದಾರೆ.

ತಂದೆ, ತಾಯಿ ಇಬ್ಬರನ್ನೂ ಕಳೆದುಕೊಂಡ ಮಕ್ಕಳಿದ್ದರೆ ಅವರನ್ನು ಅನಾಥರೆಂದು ಗುರುತಿಸಲು ಸರಕಾರ ಸೂಚಿಸಿತ್ತು. ಒಂದು ವೇಳೆ ಅಂಥ ಮಕ್ಕಳಿಲ್ಲದಿದ್ದರೆ ಈ ಹಿಂದೆಯೇ ಒಬ್ಬರನ್ನು ಕಳೆದು ಕೊಂಡಿದ್ದು ಕೊರೊನಾ
ದಿಂದ ಮತ್ತೂಬ್ಬ ರನ್ನೂ ಕಳೆದು ಕೊಂಡ 18 ವರ್ಷ ದೊಳಗಿನವರನ್ನು ಗುರು ತಿಸಲು ಸೂಚಿಸಲಾಗಿತ್ತು.

302 ಏಕಪೋಷಕ ಮಕ್ಕಳು
ಹೆತ್ತವರ ಪೈಕಿ ಒಬ್ಬರನ್ನಷ್ಟೇ ಕಳೆದು ಕೊಂಡಿ ರುವವರನ್ನು ಏಕಪೋಷಕ ಮಕ್ಕಳೆಂದು ಗುರುತಿಸ ಲಾಗುತ್ತದೆ. ದ.ಕ.ದಲ್ಲಿ 172, ಉಡುಪಿಯಲ್ಲಿ 130 ಮಂದಿ ಏಕಪೋಷಕ ಮಕ್ಕಳಿದ್ದಾರೆ. ಅವರಿಗೆ ಕೊರೊನಾ ಹಿನ್ನೆಲೆಯಲ್ಲಿ ವಿಶೇಷ ಯೋಜನೆ ಇಲ್ಲ. ಈ ಹಿಂದೆಯೇ ಜಾರಿಯಲ್ಲಿರುವ ಪ್ರಾಯೋಜಕತ್ವ ಯೋಜನೆಯಡಿ ಸಹಾಯಧನ ದೊರೆಯುತ್ತದೆ.

ಇತರ 1,213 ಕುಟುಂಬಗಳಿಗೆ ಪರಿಹಾರ
18 ವರ್ಷದೊಳಗಿನ ಮಕ್ಕಳನ್ನು ಹೊರತುಪಡಿಸಿ ಕೋವಿಡ್‌ನಿಂದ ಮೃತಪಟ್ಟ ಇತರರ ಕುಟುಂಬಗಳಿಗೂ ಪರಿಹಾರ ನೀಡಲಾಗುತ್ತಿದ್ದು ದ.ಕ. ದಲ್ಲಿ ಜ.14ರ ವರೆಗೆ 1,213 ಮಂದಿಗೆ ಪರಿಹಾರ ನೀಡಲಾಗಿದೆ. ಎಪಿಎಲ್‌ ಮತ್ತು ಬಿಪಿಎಲ್‌ ಕುಟುಂಬಗಳಿಗೆ ಎನ್‌ಡಿಎಫ್ ಮಾರ್ಗಸೂಚಿಯಂತೆ ಕೇಂದ್ರ ಸರಕಾರದಿಂದ 50,000 ರೂ., ಬಿಪಿಎಲ್‌ ಕುಟುಂಬ ಗಳಿಗೆ ಹೆಚ್ಚುವರಿಯಾಗಿ 1 ಲ.ರೂ. ನೀಡಲಾಗುತ್ತಿದೆ.

ತಪ್ಪಿ ಹೋದವರ ಹೊಣೆ ಸಮಿತಿಗೆ
ಕೊರೊನಾದಿಂದಲೇ ಮೃತಪಟ್ಟಿದ್ದರೂ ಪ್ರಮಾಣಪತ್ರ ದೊರೆಯದೇ ಇರುವವರು, ಬೇರೆ ಜಿಲ್ಲೆಗೆ ಚಿಕಿತ್ಸೆಗಾಗಿ ತೆರಳಿ ಅಲ್ಲಿ ಮೃತಪಟ್ಟಿರುವ ಪ್ರಕರಣಗಳು, ಆರೋಗ್ಯ ಇಲಾಖೆಯ ಪಟ್ಟಿಯಲ್ಲಿ ನಮೂದಾಗದೇ ಇರುವವರು ಸೇರಿದಂತೆ ವಿವಿಧ ಗೊಂದಲಗಳಿಂದಾಗಿ ಅನೇಕ ಕುಟುಂಬಕ್ಕೆ ಪರಿಹಾರ ಪಡೆಯಲು ಅಡ್ಡಿಯಾಗಿದೆ. ಜಿಲ್ಲಾ ಮಟ್ಟದಲ್ಲಿ ಅಪರ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಮಿತಿ ರಚಿಸಿ ಗೊಂದಲಗಳನ್ನು ನಿವಾರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ದ.ಕ., ಉಡುಪಿಯಲ್ಲಿ ಇಂತಹ 500ಕ್ಕೂ ಅಧಿಕ ಪ್ರಕರಣಗಳಿವೆ.

ಸೌಲಭ್ಯಗಳೇನು?
ಮುಖ್ಯಮಂತ್ರಿ ಬಾಲಸೇವಾ ಯೋಜನೆ ಮತ್ತು ಪಿಎಂ ಕೇರ್‌ ಯೋಜನೆಯಡಿ ಪ್ರತೀ ತಿಂಗಳು 3,500 ರೂ.ಗಳನ್ನು 18 ವರ್ಷದ ವರೆಗೆ ಮಕ್ಕಳ ಖಾತೆಗೆ ಜಮೆ ಮಾಡಲಾಗುತ್ತದೆ. ಎಸೆಸೆಲ್ಸಿ ಪೂರೈಸಿದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌, 21 ವರ್ಷ ತುಂಬಿದಾಗ 1 ಲ.ರೂ., 23 ವರ್ಷಗಳಾದಾಗ 10 ಲ.ರೂ. ನೀಡಲಾಗುತ್ತದೆ. ಉನ್ನತ ಶಿಕ್ಷಣಕ್ಕೂ ಸಹಾಯ ಒದಗಿಸಲಾಗುತ್ತದೆ.

ಅನಾಥರಿವರು
ದ.ಕ., ಉಡುಪಿಯಲ್ಲಿ ಎರಡನೇ ವರ್ಗಕ್ಕೆ ಸೇರಿದ ಮಕ್ಕಳನ್ನು ಅನಾಥರೆಂದು ಗುರುತಿಸಲಾಗಿದೆ. ದ.ಕ.ದಲ್ಲಿ 6 ವರ್ಷದ ಇಬ್ಬರು, 8 ಮತ್ತು 9 ವರ್ಷದ ತಲಾ ಒಬ್ಬರು ಹಾಗೂ 17 ವರ್ಷದ ಮೂವರು ಸೇರಿದಂತೆ 10 ಮಂದಿ ಅನಾಥರಿದ್ದಾರೆ. ಮೂವರು ಹೆಣ್ಣು, 7 ಗಂಡು ಮಕ್ಕಳು.

ಉಡುಪಿ ಜಿಲ್ಲೆಯಲ್ಲಿ 14 ವರ್ಷದ ಹುಡುಗಿ ಮತ್ತು ಹುಡುಗ ಹಾಗೂ 17 ವರ್ಷದ ಹುಡುಗಿಯನ್ನು ಗುರುತಿಸಲಾಗಿದೆ. ಬಹುತೇಕ ಎಲ್ಲರೂ ಸಂಬಂಧಿಕರ ಮನೆಯಲ್ಲಿದ್ದು ವಿದ್ಯಾಭ್ಯಾಸ ಮುಂದುವರಿಸುತ್ತಿದ್ದಾರೆ.

ಪಾಸಿಟಿವ್‌ ದಾಖಲೆಯೂ ಸಾಕು
ಮೃತಪಟ್ಟ ಪ್ರತಿಯೋರ್ವರ ಕುಟುಂಬಕ್ಕೂ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ. ಕೊರೊನಾದಿಂದ ಮೃತಪಟ್ಟಿರುವ ಬಗ್ಗೆ ಮರಣಪತ್ರ ಇಲ್ಲವೆಂಬ ಕಾರಣಕ್ಕೆ ಪರಿಹಾರ ವಂಚಿತರಾಗಿರುವವರು ಪಾಸಿಟಿವ್‌ ಆಗಿರುವ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಅರ್ಹರಿಗೆ ಪರಿಹಾರ ದೊರಕಿಸಿಕೊಡಲಾಗುವುದು.
– ಡಾ| ರಾಜೇಂದ್ರ ಕೆ.ವಿ. / ಕೂರ್ಮಾ ರಾವ್‌, ದ.ಕ., ಉಡುಪಿ ಜಿಲ್ಲಾಧಿಕಾರಿಗಳು

ಟಾಪ್ ನ್ಯೂಸ್

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.