ದ.ಕ., ಉಡುಪಿ: 59 ಸಾವಿರ ಮಂದಿಗೆ ಲಸಿಕೆ ವಿತರಣೆ
Team Udayavani, Jan 11, 2021, 8:30 AM IST
ಮಂಗಳೂರು/ಉಡುಪಿ : ಕೋವಿಡ್ ಲಸಿಕೆ ಶೀಘ್ರದಲ್ಲೇ ಕರಾವಳಿ ಜಿಲ್ಲೆಗಳಿಗೆ ಲಭ್ಯವಾಗಲಿದ್ದು, ಮೊನಲ ಹಂತದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 40 ಸಾವಿರ ಮಂದಿ ಮತ್ತು ಉಡುಪಿ ಜಿಲ್ಲೆಯಲ್ಲಿ 19 ಸಾವಿರ ಮಂದಿ ಆರೋಗ್ಯ ಕಾರ್ಯಕರ್ತರಿಗೆ ವಿತರಿಸಲು ತೀರ್ಮಾನಿಸಲಾಗಿದೆ.
ದ.ಕ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಕೋವಿಡ್- 19 ಲಸಿಕೆ ವಿತರಣೆ ಕುರಿತಂತೆ ಮೈಕ್ರೋ ಪ್ಲ್ಯಾನಿಂಗ್ ಕುರಿತು ಸಭೆ ರವಿವಾರವೂ ಮುಂದುವರಿಯಿತು. ತಾಲೂಕು ಆರೋಗ್ಯಾಧಿಕಾರಿಗಳು, ಖಾಸಗಿ ಆಸ್ಪತ್ರೆಯ ಮುಖ್ಯಸ್ಥರು, ಆರೋಗ್ಯ ಇಲಾಖೆಯ ವೈದ್ಯರ ತಂಡ ಭಾಗವಹಿಸಿತ್ತು. ಲಸಿಕೆಗಳ ಸಾಗಾಟ, ಲಸಿಕೆಗಳ ಬಾಕ್ಸ್ಗಳನ್ನು ಜೋಪಾನ ಮಾಡುವುದು ಇದರ ಜತೆಗೆ ರೆಫ್ರಿಜರೇಟರ್ ವ್ಯವಸ್ಥೆಯ ಲಭ್ಯತೆ ಪರೀಕ್ಷೆ, ಸಿಬಂದಿ ಕಾರ್ಯ ನಿರ್ವಹಣೆ, ಲಸಿಕೆ ನೀಡಿದ ಬಳಿಕ ಇದರ ವರದಿಯನ್ನು ತಾಲೂಕು ಮಟ್ಟದಿಂದ ಜಿಲ್ಲಾ ಮಟ್ಟಕ್ಕೆ ಈ ಬಳಿಕ ಆರೋಗ್ಯ ಇಲಾಖೆಗೆ ತಲುಪಿಸುವ ವಿಚಾರದ ಕುರಿತು ಚರ್ಚೆ ನಡೆಯಿತು.
ಇಂದು ವರದಿ ಸಲ್ಲಿಕೆ :
ಈ ಕುರಿತು ತಾಲೂಕು ಆರೋಗ್ಯ ಇಲಾಖೆಯು ಸೋಮವಾರ ಸಂಜೆಯೊಳಗೆ ಜಿಲ್ಲಾ ಆರೋಗ್ಯ ಇಲಾಖೆಗೆ ವರದಿ ನೀಡಬೇಕು. ಜಿಲ್ಲಾ ಆರೋಗ್ಯ ಇಲಾಖೆಯು ಸಂಜೆ ರಾಜ್ಯ ಆರೋಗ್ಯ ಇಲಾಖೆಗೆ ವರದಿ ನೀಡಬೇಕು. ಈ ವರದಿಯಂತೆ ರಾಜ್ಯ ಸರಕಾರದ ಸೂಚನೆಯ ಮೇರೆಗೆ ಜಿಲ್ಲೆಗೆ ಲಸಿಕೆ ಹಂಚಿಕೆ ಕಾರ್ಯ ನಡೆಯಲಿದೆ.
3 ಹಂತಗಳಲ್ಲಿ ವಿತರಣೆ :
ಒಟ್ಟು ಮೂರು ಹಂತ ಗಳಲ್ಲಿ ಲಸಿಕೆ ವಿತರಣೆ ನಡೆಯಲಿದೆ. ಆರಂಭದಲ್ಲಿ ಆರೋಗ್ಯ ಇಲಾಖೆ ಸಿಬಂದಿಗೆ ಈ ಬಳಿಕ ಫ್ರಂಟ್ ವಾರಿಯರ್ಗಳಿಗೆ ಅನಂತರ ರೋಗಿ ಗಳಿಗೆ ಹಾಗೂ 50 ವರ್ಷ ದಾಟಿದವರಿಗೆ ಕೋವಿಡ್ ಲಸಿಕೆಯನ್ನು ನೀಡುವ ಕುರಿತು ಈ ಮೈಕ್ರೋ ಪ್ಲ್ಯಾನಿಂಗ್ ಯೋಜನೆಯಲ್ಲಿ ಚರ್ಚೆ ನಡೆಯಿತು. ದ.ಕ. ಜಿಲ್ಲೆಯಲ್ಲಿ ಈಗಾಗಲೇ 40 ಸಾವಿರ ಮಂದಿಗೆ ಮೊದಲ ಹಂತದಲ್ಲಿ ಕೋವಿಡ್ ಲಸಿಕೆ ನೀಡುವ ಕಾರ್ಯವಾಗಲಿದೆ.
ಸದ್ಯದಲ್ಲೇ ಲಸಿಕೆ :
ರಾಜ್ಯಕ್ಕೆ ಶೀಘ್ರದಲ್ಲಿಯೇ ಲಸಿಕೆ ಬರುವ ಸಾಧ್ಯತೆ ಇದೆ. ಕೇಂದ್ರದಿಂದ ವಿಮಾನದ ಮುಖೇನ ಬೆಂಗಳೂರಿಗೆ ಮತ್ತು ಹುಬ್ಬಳ್ಳಿಗೆ ಲಸಿಕೆ ಬರಲಿದೆ. ಬೆಂಗಳೂರಿಗೆ ಬಂದ ಲಸಿಕೆಯು ಅಗತ್ಯಕ್ಕೆ ಅನುಸಾರವಾಗಿ ವಿಶೇಷ ವಾಹನದ ಮೂಲಕ ದ.ಕ. ಜಿಲ್ಲಾ ಆರೋಗ್ಯ ಕೇಂದ್ರಕ್ಕೆ ಬರಲಿದೆ. ಕೋವ್ಯಾಕ್ಸಿನ್ ಮತ್ತು ಕೋವಿಶೀಲ್ಡ್ ಈ ಎರಡೂ ಲಸಿಕೆಯಲ್ಲಿ ಯಾವ ಲಸಿಕೆ ಜಿಲ್ಲೆಗೆ ಬರಲಿದೆ ಎಂಬ ಬಗ್ಗೆ ಇನ್ನಷ್ಟೇ ನಿರ್ಧಾರ ಆಗಬೇಕಿದೆ.
ಜ. 16ರಂದು ಪ್ರಥಮ ಹಂತದಲ್ಲಿ ಎಂಟು ಕೇಂದ್ರಗಳಲ್ಲಿ ಲಸಿಕೆ ನೀಡಲಾಗುವುದು, ಬಳಿಕ ವಿವಿಧ ಹಂತಗಳಲ್ಲಿ ಲಸಿಕೆ ನೀಡಲಾಗುವುದು.-ಡಾ| ಸುಧೀರ್ಚಂದ್ರ ಸೂಡ, ಉಡುಪಿ ಜಿಲ್ಲಾ ಆರೋಗ್ಯಾಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
MUST WATCH
ಹೊಸ ಸೇರ್ಪಡೆ
Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…