ದ.ಕ.: ವಾರದಲ್ಲಿ ಎರಡು ದರೋಡೆ: ದುರ್ಬಲ ಗಸ್ತು: ಜನರಲ್ಲಿ ಆತಂಕ


Team Udayavani, Dec 26, 2020, 5:58 AM IST

ದ.ಕ.: ವಾರದಲ್ಲಿ ಎರಡು ದರೋಡೆ: ದುರ್ಬಲ ಗಸ್ತು: ಜನರಲ್ಲಿ ಆತಂಕ

ಸಾಂದರ್ಭಿಕ ಚಿತ್ರ

ಮಂಗಳೂರು: ದಕ್ಷಿಣ ಕನ್ನಡದ ಗ್ರಾಮೀಣ ಪ್ರದೇಶಗಳಲ್ಲಿ ವಾರದ ಅವಧಿಯಲ್ಲಿ ಎರಡು ದರೋಡೆ, ಸುಲಿಗೆ ಪ್ರಕರಣಗಳು ನಡೆದಿರುವುದು ಜನರಲ್ಲಿ ಆತಂಕ ಹೆಚ್ಚಿಸಿದೆ. ಪೊಲೀಸರ ಗಸ್ತು ದುರ್ಬಲಗೊಂಡಿರುವುದು ದುಷ್ಕರ್ಮಿಗಳಿಗೆ ವರದಾನವಾಗುತ್ತಿದೆ.

ನಗರ ಪ್ರದೇಶದಲ್ಲಿ ಸರ ಸುಲಿಗೆಯಂಥ ಪ್ರಕರಣಗಳು ಆತಂಕ ಮೂಡಿಸುತ್ತಿದ್ದರೆ, ಗ್ರಾಮೀಣ ಪ್ರದೇಶಗಳಲ್ಲಿ ಒಂಟಿ ಮನೆಗಳನ್ನೇ ಗುರಿಯಾಗಿಸಿಕೊಂಡ ದುಷ್ಕೃತ್ಯ ಗ್ರಾಮೀಣ ಜನರ ನಿದ್ದೆಗೆಡಿಸಿದೆ. ಡಿ. 21 ರಂದು ಸೌತಡ್ಕದಲ್ಲಿ ದರೋಡೆ ನಡೆದಿತ್ತು. ಡಿ. 25ರಂದು ವಿಟ್ಲದಲ್ಲಿ ಅಂಥದ್ದೇ ಸುಲಿಗೆ ಜರಗಿದೆ.

ರಾತ್ರಿ ಗಸ್ತು ದುರ್ಬಲ
ಹಲವು ತಿಂಗಳುಗಳಿಂದ ರಾತ್ರಿ ಗಸ್ತು ಕಾರ್ಯ ನಾಮ್‌ ಕೆ ವಾಸ್ತೇ ಎನ್ನುವಂತೆ ನಡೆಯುತ್ತಿದ್ದು, ಸಂಪೂರ್ಣ ದುರ್ಬಲಗೊಂಡಿದೆ ಎಂಬ ಅಭಿಪ್ರಾಯ ಗ್ರಾಮೀಣ ವಲಯದಲ್ಲಿ ಕೇಳಿಬರುತ್ತಿದೆ. ನಗರ ಪ್ರದೇಶದಲ್ಲೂ ಪರಿಸ್ಥಿತಿ ಭಿನ್ನ ವಾಗಿಲ್ಲ. ಇದರೊಂದಿಗೆ ಲಾಕ್‌ಡೌನ್‌ ಅನುಷ್ಠಾನ ಸೇರಿ ದಂತೆ ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದ ಹಲವು ಕಾರ್ಯ ಗಳಲ್ಲಿ ಪೊಲೀಸರು ತೊಡಗಿದ್ದಾರೆ. ಒಂದು ತಿಂಗಳಿಂದ ಗ್ರಾ.ಪಂ. ಚುನಾವಣೆಯ ಭದ್ರತೆಯ ಹೊಣೆಯನ್ನು ನಿಭಾಯಿಸಬೇಕಿದೆ. ಇವೆಲ್ಲ ಕಾರಣಗಳಿಂದ ಕಾನೂನು ಸುವ್ಯವಸ್ಥೆ ಕಾರ್ಯಕ್ಕೆ ಪೊಲೀಸರು ಸಿಗದಂತಾಗಿದೆ. ಈ ಕೊರತೆ ಮನಗಂಡೇ ದರೋಡೆಕೋರರು, ಕಳ್ಳರು ದುಷ್ಕೃತ್ಯದಲ್ಲಿ ತೊಡಗಿದ್ದಾರೆ ಎಂಬುದು ಸಾರ್ವಜನಿಕರ ವಿಶ್ಲೇಷಣೆ.

ಪೊಲೀಸರು ಜಿಲ್ಲೆಯ ಗ್ರಾಮಾಂತರವೂ ಸೇರಿದಂತೆ ವಿವಿಧ ಭಾಗಗಳಲ್ಲಿ ನಿರಂತರವಾಗಿ ಗಸ್ತು ನಡೆಸುವ ರೂಢಿ ಕಡಿಮೆಯಾಗುತ್ತಿದೆ. ರಾತ್ರಿ ವೇಳೆ ಪೊಲೀಸರು ಕೆಲವು ಮುಖ್ಯ ರಸ್ತೆ, ಹೆದ್ದಾರಿ ಬದಿಗಳಲ್ಲಿ ಕಾಣಸಿಗುತ್ತಾರೆ. ಉಳಿದಂತೆ ಪೊಲೀಸರ ರೌಂಡ್ಸ್‌ ತೀರಾ ಕಡಿಮೆಯಾಗಿದೆ ಎಂಬ ಆಕ್ಷೇಪ ಗ್ರಾಮೀಣ ಪ್ರದೇಶದವರದ್ದು.

ಗಸ್ತು ಹೆಚ್ಚಳಕ್ಕೆ ಕ್ರಮ
ವಿವಿಧ ಕರ್ತವ್ಯಗಳ ನಡುವೆಯೂ ಪೊಲೀಸರು ರೌಂಡ್ಸ್‌ ಹಾಕುತ್ತಿದ್ದಾರೆ. ವಿಶೇಷ ತಂಡಗಳು ಕೂಡ ಹಲವೆಡೆ ಗಸ್ತು ನಡೆಸುತ್ತಿದ್ದು, ಇನ್ನಷ್ಟು ತೀವ್ರಗೊಳಿಸಲಾಗುವುದು. ಕೆಲವು ಪ್ರಕರಣಗಳಲ್ಲಿ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದೇವೆ. ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕೆಲಸ ಕೂಡ ನಡೆಯುತ್ತಿದೆ.
-ಬಿ.ಎಂ. ಲಕ್ಷ್ಮೀಪ್ರಸಾದ್‌, ಎಸ್‌ಪಿ, ದ.ಕ.

ಟಾಪ್ ನ್ಯೂಸ್

13

Tollywood: ʼಫ್ಯಾಮಿಲಿ ಸ್ಟಾರ್‌ʼ ಸೋಲಿನ ಬಳಿಕ ಹೊಸ ಸಿನಿಮಾ ಅನೌನ್ಸ್‌ ಮಾಡಿದ ದೇವರಕೊಂಡ

11-

Love and Care: ಪ್ರೀತಿ ಹಿಂದಿರುಗಿಸಲು ಅಂಜಿಕೆಯೇಕೆ…

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

9-uv-fusion-2

Eurasian hoopoe: ಚಂದ್ರ ಮಕುಟದ ಸ್ವಪ್ನ ಸುಂದರಿ…..

8-uv-fusion

Letter to Son: ಪ್ರೀತಿಯ ಕಂದನಿಗೆ

7-uv-fusion

Election: ಮತದಾನ ಮಾಡಿ ಪ್ರಜಾಪ್ರಭುತ್ವ ಹಬ್ಬ ಆಚರಿಸೋಣ

6-uv-fusion

Election: ಚುನಾವಣ ಕ್ಷೇತ್ರದಲ್ಲಿ ಮಾಧ್ಯಮಗಳ ಪಾತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13

Tollywood: ʼಫ್ಯಾಮಿಲಿ ಸ್ಟಾರ್‌ʼ ಸೋಲಿನ ಬಳಿಕ ಹೊಸ ಸಿನಿಮಾ ಅನೌನ್ಸ್‌ ಮಾಡಿದ ದೇವರಕೊಂಡ

ಹುನಗುಂದ: ಸಾಮೂಹಿಕ ವಿವಾಹದಿಂದ ದುಂದುವೆಚ್ಚಕ್ಕೆ ಕಡಿವಾಣ

ಹುನಗುಂದ: ಸಾಮೂಹಿಕ ವಿವಾಹದಿಂದ ದುಂದುವೆಚ್ಚಕ್ಕೆ ಕಡಿವಾಣ

11-

Love and Care: ಪ್ರೀತಿ ಹಿಂದಿರುಗಿಸಲು ಅಂಜಿಕೆಯೇಕೆ…

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

9-uv-fusion-2

Eurasian hoopoe: ಚಂದ್ರ ಮಕುಟದ ಸ್ವಪ್ನ ಸುಂದರಿ…..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.