ಜೀವ ಬೆದರಿಕೆಗೆ ಹೆದರಲಾರೆ: ಮಿಥುನ್ ರೈ
Team Udayavani, May 28, 2019, 6:10 AM IST
ಮಂಗಳೂರು: ಬೆದರಿಕೆಗೆ ಹೆದರುವುದಿಲ್ಲ ಎಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಅವರು ತನಗೆ ಜೀವ ಬೆದರಿಕೆ ಹಾಕಿದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ಮಾಧ್ಯಮದ ಜತೆ ಮಾತನಾಡಿದ ಅವರು, ಬಿಜೆಪಿ ಅಧಿಕಾರಕ್ಕೆ ಬಂದದಿನದಿಂದಲೇ ಜಿಲ್ಲೆಯಲ್ಲಿ ಮತೀಯವಾದಿಗಳು ಅಟ್ಟಹಾಸ ಆರಂಭಿಸಿದ್ದಾರೆ. ಇದು ಅಲ್ಪಸಂಖ್ಯಾಕರು ಇರಬಹುದು ಅಥವಾ ಬಹುಸಂಖ್ಯಾಕರೇ ಇರಬಹುದು. ಅಂತಹ ಯಾವುದೇ ಶಕ್ತಿಗಳು ಜಿಲ್ಲೆಯ ಶಾಂತಿ, ಸಾಮರಸ್ಯಕ್ಕೆ ಧಕ್ಕೆ ತಂದಾಗ ಯುವ ಕಾಂಗ್ರೆಸ್ ಧ್ವನಿಎತ್ತಿದೆ; ಮುಂಬರುವ ದಿನಗಳಲ್ಲಿಯೂ ಧ್ವನಿ ಎತ್ತ್ತಲಿದೆ ಎಂದಿದ್ದಾರೆ.
ಜಿಲ್ಲೆಯ ಏಕತೆ, ಸಾಮರಸ್ಯಕ್ಕಾಗಿ ನಾನು ಬಲಿದಾನಕ್ಕೆ ಸಿದ್ಧ. ಅದರಿಂದ ಜಿಲ್ಲೆಯಲ್ಲಿ ಸಾಮರಸ್ಯ ಮಗದೊಮ್ಮೆ ಮೂಡಿ ಬರುವುದಿದ್ದರೆ ನಾನು ತಯಾರಾಗಿದ್ದೇನೆ ಎಂದು ವಿವರಿಸಿದರು. ಕೆಲವು ಜನ ಪುಂಡುಪೋಕರಿಗಳು ಜೀವಬೆದರಿಕೆ ಹಾಕಿದ್ದಾರೆ. ಭಗವಂತ ನನಗೆ ಆಯುಷ್ಯ ಕೊಟ್ಟಲ್ಲಿವರೆಗೆ ನಾನುಬದುಕಿರುತ್ತೇನೆ. ನನ್ನ ಹುಟ್ಟು, ಸಾವು ಭಗವಂತ ನಿರ್ಧರಿಸಿದ್ದಾನೆ ಎಂದು ಹೇಳಿದರು.
ಗೆದ್ದರೆ ಬಜರಂಗದಳವನ್ನು ನಿಷೇಧಿಸುತ್ತೇನೆ ಎಂಬ ಹೇಳಿಕೆಗೆ ಈ ಜೀವ ಬೆದರಿಕೆ ಹಾಕಿರುವ ಸಾಧ್ಯತೆ ಇಲ್ಲ. ನನ್ನ ನೈಜ ಹಿಂದುತ್ವವನ್ನು ಸಹಿಸದ ಮಂದಿ ಬೆದರಿಕೆ ಹಾಕಿರಬಹುದು. ನನಗೆ ಈಗಾಗಲೇ ಪೊಲೀಸ್ ಭದ್ರತೆ ಇದೆ. ಬೆದರಿಕೆ ಹಾಕಿರುವವರಿಗೆ ಕದ್ರಿ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಕಚೇರಿಯ ವಿಳಾಸ ನೀಡುತ್ತೇನೆ. ಇಡೀ ದಿನ ನಾನು ಅಲ್ಲಿರುತ್ತೇನೆ. ನಾನು 365 ದಿನವೂ ಮಂಗಳೂರಿನಲ್ಲಿಯೇ ಇರುತ್ತೇನೆ ಎಂದು ಮಿಥುನ್ ರೈ ಪ್ರತಿಕ್ರಿಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
ಮತದಾರರ ಚೀಟಿಯಲ್ಲಿ ಕ್ಯುಆರ್ ಕೋಡ್! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ
Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ