ಮಾತೃಭಾಷೆಯಲ್ಲಿ ಸಂವಹನಕ್ಕೆ ಕೀಳರಿಮೆ ಬೇಡ
Team Udayavani, Nov 25, 2018, 6:00 AM IST
ಮಂಗಳೂರು: ಮಾತೃಭಾಷೆಯಲ್ಲಿ ಮಾತನಾಡಲು ಯಾವುದೇ ಕೀಳರಿಮೆ ಇರಬಾರದು. ಆದರೆ ಇತ್ತೀಚಿನ ದಿನಗಳಲ್ಲಿ ಆಂಗ್ಲ ಭಾಷಾ ವ್ಯಾಮೋಹಕ್ಕೆ ಸಿಲುಕಿ ಮಾತೃ ಭಾಷೆಗೆ ಮನ್ನಣೆ ಕಡಿಮೆಯಾಗುತ್ತಿದೆ ಎಂದು ವಿಧಾನಪರಿಷತ್ ಸದಸ್ಯ ಐವನ್ ಡಿ’ಸೋಜಾ ಹೇಳಿದರು.
ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಆಶ್ರಯದಲ್ಲಿ ಬ್ಯಾರಿ ಕಲಾರಂಗ ಮಂಗಳೂರು ಸಹಯೋಗದಲ್ಲಿ ನಗರದ ಪುರಭವನದಲ್ಲಿ ಶನಿವಾರ ನಡೆದ ಬ್ಯಾರಿ ಭಾಷಾ ಕಲಾವಿದರ ಸಮಾವೇಶ “ಬ್ಯಾರಿ ಒಪ್ಪನೆ-ಕೋಲ್ಕಲಿ ಪಂತ’ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ಮಾತೃಭಾಷೆ ಮಾತನಾಡಲು ಹಿಂಜರಿದರೆ ಸಮಾಜದಲ್ಲಿ ಒಂದು ಹೆಜ್ಜೆ ಹಿಂದೆ ಇಟ್ಟಂತೆ. ಬ್ಯಾರಿ ಭಾಷೆಯನ್ನು ಕರಾವಳಿ ಮಾತ್ರವಲ್ಲದೆ ಮಲೆನಾಡು, ಚಿಕ್ಕಮಗಳೂರು ಸೇರಿದಂತೆ ಬೆಂಗಳೂರಿನ ಕೆಲ ಪ್ರದೇಶಗಳಲ್ಲೂ ಮಾತನಾಡುತ್ತಾರೆ. ಬ್ಯಾರಿ ಭಾಷೆಯ ಕಲೆ, ಸಂಸ್ಕೃತಿ ಉಳಿಯಬೇಕಿದೆ. ಬ್ಯಾರಿ ಸಾಹಿತ್ಯಕ್ಕೆ ಮತ್ತಷ್ಟು ಮನ್ನಣೆ ಸಿಗಬೇಕಿದೆ ಎಂದರು.
ಮಂಗಳೂರು ಮಹಾನಗರ ಪಾಲಿಕೆ ಉಪಮೇಯರ್ ಮೊಹಮ್ಮದ್ ಕುಂಜತ್ತಬೈಲ್ ಮಾತನಾಡಿ, ಬ್ಯಾರಿ ಭಾಷೆ ಉಳಿಸುವ ನಿಟ್ಟಿನಲ್ಲಿ ಸಾಧನೆಗಳ ದಾಖಲೀಕರಣ ಅಗತ್ಯ ಎಂದರು.
ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಕರಂಬಾರ್ ಮಹಮದ್, ಮನಪಾ ಆಯುಕ್ತ ಮೊಹಮ್ಮದ್ ನಝೀರ್, ವಾರ್ತಾಧಿಕಾರಿ ಬಿ.ಎ. ಖಾದರ್ ಷಾ, ಕಾರ್ಪೊರೇಟರ್ ಅಬ್ದುಲ್ ರವೂಫ್, ಅಬ್ದುಲ್ ಅಜೀಜ್ ಬೈಕಂಪಾಡಿ, ಹುಸೈನ್ ಕಾಟಿಪಳ್ಳ, ಯು.ಎಚ್. ಖಾಲಿದ್ ಉಜಿರೆ, ಅಬ್ದುಲ್ ರೆಹಮಾನ್, ಹಸನಬ್ಬ ಮೂಡಬಿದಿರೆ, ಬಶೀರ್ ಅಹ್ಮದ್, ಬಶೀರ್ ಬೈಕಂಪಾಡಿ ಸೇರಿದಂತೆ ಮತ್ತಿತರರು ಇದ್ದರು.
ಬ್ಯಾರಿ ಭವನ ನಿರ್ಮಾಣಕ್ಕೆ ಮನವಿ
ಮಂಗಳೂರಿನಲ್ಲಿ ಬ್ಯಾರಿ ಭವನ ನಿರ್ಮಾಣಕ್ಕೆ ವಿಶೇಷ ಅನುದಾನ ಮಂಜೂರು ಮಾಡಬೇಕು ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಕರಂಬಾರ್ ಮಹಮದ್ ಅವರು ವಿಧಾನಪರಿಷತ್ ಸದಸ್ಯ ಐವನ್ ಡಿ’ಸೋಜಾ ಅವರಿಗೆ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಐವನ್, ಬ್ಯಾರಿ ಭವನ ನಿರ್ಮಾಣದ ಬಗ್ಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಬಳಿ ಚರ್ಚಿಸಿ, ಅನುದಾನ ಬಿಡುಗಡೆಗೆ ಮನವಿ ಮಾಡುತ್ತೇನೆ. ಮುಂಬರುವ ಅಧಿವೇಶನದಲ್ಲಿ ಈ ಬಗ್ಗೆ ಗಮನಸೆಳೆಯುತ್ತೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ