ಕಲೆ ನಿಂತ ನೀರಾಗದಿರಲಿ: ಪಟ್ಲ ಸತೀಶ್ ಶೆಟ್ಟಿ
Team Udayavani, Feb 28, 2018, 2:29 PM IST
ಬೆಂದೂರ್ವೆಲ್ : ಯಕ್ಷಗಾನದಲ್ಲಿ ಗಾನ ಎಂಬ ಪದಕ್ಕೆ ಹೆಚ್ಚು ಮಹತ್ವ. ಗಾನ ಎಂದ ಮೇಲೆ ಸಂಗೀತ ಬೇಕು. ಕಲೆ ನಿಂತ ನೀರಾಗಬಾರದು. ಅದಕ್ಕಾಗಿ ಪ್ರಯೋಗಗಳು ನಡೆಯುತ್ತಲೇ ಇರಬೇಕು ಎಂದು ಭಾಗವತ ಪಟ್ಲ ಸತೀಶ್ ಶೆಟ್ಟಿ ಅಭಿಪ್ರಾಯಪಟ್ಟರು.
‘ಯಕ್ಷಗಾನ – ಪರಂಪರೆ ಮತ್ತು ಪ್ರಯೋಗ ಇತ್ತೀಚಿನ ಒಲವುಗಳು’ ವಿಷಯದ ಮೇಲೆ ಮಂಗಳೂರು ಸಂತ ಆ್ಯಗ್ನೆಸ್ ಕಾಲೇಜಿನಲ್ಲಿ ನಡೆದ ರಾಜ್ಯ ಮಟ್ಟದ ವಿಚಾರ ಸಂಕಿರಣದ ಸಮಾರೋಪದಲ್ಲಿ ಅವರು ಮಾತನಾಡಿದರು.
ವಿದ್ವಾಂಸರ ಸಂಖ್ಯೆ ಹೆಚ್ಚಳದಿಂದಲೋ, ಕಲಾವಿದರ ಅಜ್ಞಾನದಿಂದಲೋ ಯಕ್ಷಗಾನದ ಸರಿ- ತಪ್ಪುಗಳಲ್ಲಿ ಗೊಂದಲ ಏರ್ಪಟ್ಟಿವೆ. ಈ ಗೊಂದಲಗಳನ್ನು ನಿವಾರಿಸಲು ವಿದ್ವಾಂಸರು ಮತ್ತು ಕಲಾವಿದರು ಒಟ್ಟು ಸೇರಿ ಚರ್ಚಿಸಬೇಕು ಎಂದು ಅವರು ಹೇಳಿದರು.
ಮಂಗಳೂರು ವಿವಿ ಡಾ| ಪಿ. ದಯಾನಂದ ಪೈ ಮತ್ತು ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದ ಸಂಯೋಜಕ ಡಾ| ಧನಂಜಯ ಕುಂಬ್ಳೆ ಅಧ್ಯಕ್ಷತೆ ವಹಿಸಿದ್ದರು. ಸಂತ ಆ್ಯಗ್ನೆಸ್ ಕಾಲೇಜಿನ ಡಾ| ಸಂಪೂರ್ಣಾನಂದ ಬಳ್ಕೂರು ಸ್ವಾಗತಿಸಿದರು. ರಥಬೀದಿ ಸಪ್ರದ ಕಾಲೇಜಿನ ಡಾ| ಪ್ರಕಾಶಚಂದ್ರ ಶಿಶಿಲ ವಂದಿಸಿದರು. ಪವಿತ್ರಾ ಕೆ. ನಿರೂಪಿಸಿದರು.
ಸಂತ ಆ್ಯಗ್ನೆಸ್ ಕಾಲೇಜು, ಮಂಗಳೂರು ರಥಬೀದಿ ಸರಕಾರಿ ಕಾಲೇಜು, ಮಂಗಳೂರು ವಿಶ್ವವಿದ್ಯಾನಿಲಯದ ಡಾ| ಪಿ. ದಯಾನಂದ ಪೈ ಮತ್ತು ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರ ಮತ್ತು ಮಂಗಳೂರು ಆಕಾಶವಾಣಿ ಸಂಯುಕ್ತವಾಗಿ ಈ ವಿಚಾರಸಂಕಿರಣ ಏರ್ಪಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ