ಪ್ರಾಥಮಿಕ ಆರೋಗ್ಯ ಕೇಂದ್ರ : ಕಾಡಲಿದೆ ವೈದ್ಯರ ಕೊರತೆ


Team Udayavani, May 29, 2018, 4:10 AM IST

samudaya-bhavan-28-5.jpg

ವಿಟ್ಲ: ಸರಕಾರದ ನಿಯಮಾನುಸಾರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 50 ಸಾವಿರ ರೂ., ಸಮುದಾಯ ಆರೋಗ್ಯ ಕೇಂದ್ರಕ್ಕೆ 3 ಲಕ್ಷ ರೂ., ತಾ| ಆರೋಗ್ಯ ಕೇಂದ್ರಕ್ಕೆ 10 ಲಕ್ಷ ರೂ.ಗಳ ಅನುದಾನ ಔಷಧಕ್ಕೆ ಲಭ್ಯವಾಗುತ್ತದೆ. ಆದುದರಿಂದ ಎಲ್ಲ ಆಸ್ಪತ್ರೆಗಳಲ್ಲೂ ಔಷಧಕ್ಕೆ ಕೊರತೆ ಉಂಟಾಗುವುದಿಲ್ಲ. ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೂ ಈ ಅನುದಾನ ಲಭ್ಯವಾಗಿದೆ. ಆದುದರಿಂದ ಔಷಧಕ್ಕೆೆ ಕೊರತೆ ಇಲ್ಲ. ವಾಸ್ತವವಾಗಿ ಇಲಾಖೆ ಜೀವರಕ್ಷಕ ಆವಶ್ಯಕತೆಗೆ ಬೇಕಾದ ಔಷಧಕ್ಕೆೆ ಕೊರತೆ ಇಲ್ಲದಂತೆ ಮುನ್ನೆಚ್ಚರಿಕೆ ವಹಿಸಿದೆ. ಆದರೆ ಇನ್ನು ವೈದ್ಯರ ಕೊರತೆ ಕಾಡಲಿದೆ.

ಇನ್ನು ವೈದ್ಯರ ಸಮಸ್ಯೆ ಕಾಡಲಿದೆ
ಮೇ ತಿಂಗಳ ಕೊನೆಗೆ ವಿಟ್ಲ ಆಸುಪಾಸಿನಲ್ಲಿ ವೈದ್ಯರ ಸಮಸ್ಯೆ ಆರಂಭವಾಗಲಿದೆ. ಕನ್ಯಾನ ಆಸ್ಪತ್ರೆಯ ಡಾ| ಶ್ವೇತಾ, ಅಡ್ಯನಡ್ಕ ಆಸ್ಪತ್ರೆಯ ಡಾ| ಸುಬೋಧ್‌ ಕುಮಾರ್‌ ರೈ, ಪುಣಚ ಆಸ್ಪತ್ರೆಯ ಡಾ| ಯದುರಾಜ್‌ ಅವರು ಉನ್ನತ ವ್ಯಾಸಂಗಕ್ಕಾಗಿ ತೆರಳಲಿದ್ದಾರೆ. ವಿಟ್ಲ ಸಮುದಾಯ ಆಸ್ಪತ್ರೆಯ ವೈದ್ಯಾಧಿಕಾರಿ ಡಾ| ಜಮೀರಾಬಾನು ಅವರು ಒಂದು ವರ್ಷ ಹಿಂದೆಯೇ ಉನ್ನತ ವ್ಯಾಸಂಗಕ್ಕಾಗಿ ತೆರಳಿದ್ದಾರೆ. ಇಂದಿನ ತನಕ ಆ ಹುದ್ದೆ ಭರ್ತಿಯಾಗಿಲ್ಲ. ಈ ರೀತಿ ಹುದ್ದೆ ಭರ್ತಿಯಾಗದೇ ಇದ್ದಲ್ಲಿ ಕನ್ಯಾನ, ಅಡ್ಯನಡ್ಕ, ಪುಣಚ ಆಸ್ಪತ್ರೆಗಳು ವೈದ್ಯರಿಲ್ಲದೇ ಅನಾಥವಾಗಲಿವೆ. ಇದು ಈ ಹಳ್ಳಿಭಾಗದ ರೋಗಿಗಳಿಗೆ ಭಾರೀ ಸಮಸ್ಯೆಯನ್ನುಂಟುಮಾಡಲಿದೆ.

ಮಳೆಗಾಲಕ್ಕೇನು ಕ್ರಮ?
ವಿಟ್ಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಯಾವುದೇ ರೋಗ ಆರಂಭವಾಗದಂತೆ ಮತ್ತು ಹರಡದಂತೆ ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ರೋಗದ ಬಗ್ಗೆ ಮುನ್ನೆಚ್ಚರಿಕೆ ವಹಿಸಲು ಸೂಕ್ತ ಮಾಹಿತಿ ಪತ್ರ ನೀಡಿ ಸಾರ್ವಜನಿಕರನ್ನು ಎಚ್ಚರಿಸಲಾಗುತ್ತಿದೆ. ಆಶಾ ಕಾರ್ಯಕರ್ತೆಯರು ಹಾಗೂ ANMಗಳು ಪ್ರಚಾರ ಕಾರ್ಯವನ್ನು ಮಾಡಿದ್ದಾರೆ ಮತ್ತು ಎಲ್ಲ ಮನೆಗಳಿಗೂ ಎಚ್ಚರಿಕೆ ನೀಡಿದ್ದಾರೆ. ತಗ್ಗು ಪ್ರದೇಶದಲ್ಲಿ ಮತ್ತು ಟಯರ್‌, ತೆಂಗಿನ ಗೆರಟೆ ಇನ್ನಿತರ ಕಡೆಗಳಲ್ಲಿ ನೀರು ನಿಲ್ಲದಂತೆ ಎಚ್ಚರ ವಹಿಸಲಾಗಿದೆ. ವಿವಿಧ ರೀತಿಯಲ್ಲಿ ಸಂದೇಶ ನೀಡಲಾಗಿದೆ.

ನಿಫಾ ಮುನ್ನೆಚ್ಚರಿಕೆ
ಕೇರಳದಲ್ಲಿರುವ ನಿಫಾ ರೋಗವು ಕರ್ನಾಟಕಕ್ಕೆ ಪ್ರವೇಶಿಸದಂತೆಯೂ ಜಾಗರೂಕತೆ ವಹಿಸಲಾಗಿದೆ. ಸಾರ್ವಜನಿಕರಿಗೆ ಈ ಬಗ್ಗೆಯೂ ಮಾಹಿತಿ ನೀಡಲಾಗಿದೆ. ಯಾವ ರೀತಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂಬ ಬಗ್ಗೆ ತಿಳಿವಳಿಕೆ ನೀಡಲಾಗಿದೆ. ಬಂದ ರೋಗಿಗಳ ಜ್ವರದ ಬಗ್ಗೆ ಕೂಲಂಕಷವಾಗಿ ಪರೀಕ್ಷಿಸಿ, ಅಗತ್ಯವಿದ್ದಲ್ಲಿ ಹೆಚ್ಚಿನ ಪರೀಕ್ಷೆಗೆ ತಾಲೂಕು, ಜಿಲ್ಲಾ ಮಟ್ಟಕ್ಕೆ ಕಳುಹಿಸಿಕೊಡಲಾಗುತ್ತದೆ. ವಿಟ್ಲ ಆಸುಪಾಸಿನಲ್ಲಿ ಇಂತಹ ಯಾವುದೇ ದೂರುಗಳು ಸದ್ಯಕ್ಕೆ ದಾಖಲಾಗಿಲ್ಲ.

ವಿಟ್ಲ ಸಮುದಾಯ ಆಸ್ಪತ್ರೆ: ವೈದ್ಯರು ಬೇಕು
ವಿಟ್ಲ ಸಮುದಾಯ ಆಸ್ಪತ್ರೆಗೆ ಮಕ್ಕಳ ತಜ್ಞರು ಹಾಗೂ ಪ್ರಸೂತಿ ತಜ್ಞರ ಒಂದೊಂದು ಹುದ್ದೆ ಖಾಲಿ ಇದೆ. ಸ್ಟಾಫ್‌ ನರ್ಸ್‌ ಹುದ್ದೆಗಳು ಖಾಲಿ ಇವೆ. ಉಳಿದಂತೆ ಹಿರಿಯ ವೈದ್ಯಾಧಿಕಾರಿ, ಮಹಿಳಾ ವೈದ್ಯಾಧಿಕಾರಿ, ದಂತ ವೈದ್ಯರು, ಆಯುಷ್‌ ವೈದ್ಯರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಆಸ್ಪತ್ರೆಗೆ ಪ್ರತಿದಿನವೂ 250ಕ್ಕೂ ಅಧಿಕ ರೋಗಿಗಳು ಆಗಮಿಸಿ, ಚಿಕಿತ್ಸೆ ಪಡೆಯುತ್ತಿದ್ದಾರೆ. ರಕ್ಷ ಪರೀಕ್ಷೆ, ಕೊಲೆಸ್ಟ್ರಾಲ್‌ ಇನ್ನಿತರ ಪರೀಕ್ಷೆಗಳೂ ನಡೆಯುತ್ತವೆ. ಫಿಸಿಯೋಥೆರಪಿ ವ್ಯವಸ್ಥೆಯೂ ಇದೆ. ಸುಸಜ್ಜಿತ ಆಸ್ಪತ್ರೆಯ ಸುತ್ತ ಸುಂದರ ವನಗಿಡಗಳಿವೆ.

30 ಲಕ್ಷ ರೂ. ನಿರ್ವಹಣೆ ವೆಚ್ಚ
ಮೂಲ ಸೌಕರ್ಯಗಳನ್ನು ಕಲ್ಪಿಸಲು ಒಂದು ವರ್ಷದ ಹಿಂದಿನಿಂದ ಆಸ್ಪತ್ರೆ ನಿರ್ವಹಣೆಗಾಗಿ ಒಟ್ಟು 30 ಲಕ್ಷ ರೂ. ಅನುದಾನ ಆಸ್ಪತ್ರೆಗೆ ಬಂದಿದೆ. ಪ್ರಥಮವಾಗಿ 5 ಲಕ್ಷ ರೂ. ಬಂದಿದ್ದು, ಎರಡನೇ ಬಾರಿಯ ಅನುದಾನದಲ್ಲಿ 25 ಲಕ್ಷ ರೂ. ಸೇರಿ ಒಟ್ಟು 30 ಲಕ್ಷ ರೂ. ವೆಚ್ಚದಲ್ಲಿ ಚಿಕ್ಕ ಸಭಾಂಗಣ ಅಥವಾ ಸ್ಟೋರ್‌ ರೂಮ್‌, 2 ವೆಸ್ಟರ್ನ್ ಶೌಚಾಲಯ, ಆಸ್ಪತ್ರೆಗೆ ಸುಣ್ಣ-ಬಣ್ಣ, ಮಾಡು ರಿಪೇರಿ ಮಾಡಲಾಗುತ್ತಿದೆ.  

ನೆರೆ ಬರುವ ಪ್ರದೇಶವಲ್ಲ
ವಿಟ್ಲ ಸಮುದಾಯ ಆಸ್ಪತ್ರೆ ಅಥವಾ ಇಲ್ಲಿನ ಸುತ್ತಮುತ್ತಲ ಪ್ರದೇಶಗಳು ಭಾರೀ ನೆರೆ ಏರುವ ಪ್ರದೇಶವಲ್ಲ. ನೆರೆ ಬರುವ ಕಡೆಗಳಲ್ಲಿ ಕೆಲವು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ. ಇಲ್ಲಿ ಅಂತಹ ಸಂಭವನೀಯತೆಗಳಿಲ್ಲ. ಆದುದರಿಂದ ಇತರ ಎಚ್ಚರಿಕೆಗಳ ಬಗ್ಗೆ ಗಮನಹರಿಸಲಾಗಿದೆ. ವಿಟ್ಲ ಆಸ್ಪತ್ರೆಯಲ್ಲಿ ಸುಸಜ್ಜಿತ ಆ್ಯಂಬುಲೆನ್ಸ್‌ ಸೌಲಭ್ಯವಿದೆ. ಜತೆಗೆ 108ರ ಸೌಲಭ್ಯವೂ ಇದೆ. ಯಾವುದೇ ತುರ್ತು ಸನ್ನಿವೇಶಗಳಲ್ಲಿ ಇವೆರಡೂ ರೋಗಿಗಳ ಜೀವರಕ್ಷಕ ಜವಾಬ್ದಾರಿಯನ್ನು ಹೊತ್ತುಕೊಳ್ಳುತ್ತವೆ.
– ಡಾ| ಪ್ರಶಾಂತ್‌ ಬಿ.ಎನ್‌. ಹಿರಿಯ ವೈದ್ಯಾಧಿಕಾರಿ

— ಉದಯಶಂಕರ್‌ ನೀರ್ಪಾಜೆ

ಟಾಪ್ ನ್ಯೂಸ್

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Venur: ನಾಯಿಯನ್ನು ಹೊತ್ತೊಯ್ದ ಚಿರತೆ! ವೈರಲ್ ಆಯ್ತು ಸಿಸಿಟಿವಿ ದೃಶ್ಯ

Venur: ನಾಯಿಯನ್ನು ಹೊತ್ತೊಯ್ದ ಚಿರತೆ! ವೈರಲ್ ಆಯ್ತು ಸಿಸಿಟಿವಿ ದೃಶ್ಯ

Uppinangady ಬೆಲೆಬಾಳುವ ಮರ ಕಡಿದು ಸಾಗಾಟ

Uppinangady ಬೆಲೆಬಾಳುವ ಮರ ಕಡಿದು ಸಾಗಾಟ

Padmaraj ಅವರಿಂದ ಕೋಮು ಸಾಮರಸ್ಯ ಮರು ಸ್ಥಾಪನೆ: ರಮಾನಾಥ ರೈ ವಿಶ್ವಾಸ

Padmaraj ಅವರಿಂದ ಕೋಮು ಸಾಮರಸ್ಯ ಮರು ಸ್ಥಾಪನೆ: ರಮಾನಾಥ ರೈ ವಿಶ್ವಾಸ

Belthangady ಲಾರಿ-ಆಮ್ನಿ ನಡುವೆ ಅಪಘಾತ: ಚಾಲಕನಿಗೆ ಗಾಯ

Belthangady ಲಾರಿ-ಆಮ್ನಿ ನಡುವೆ ಅಪಘಾತ: ಚಾಲಕನಿಗೆ ಗಾಯ

Puttur ಶ್ರೀಗಂಧ ದಾಸ್ತಾನು ಪತ್ತೆ: ಓರ್ವ ಸೆರೆ

Puttur ಶ್ರೀಗಂಧ ದಾಸ್ತಾನು ಪತ್ತೆ: ಓರ್ವ ಸೆರೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.