ನಾಯಿ, ಬೆಕ್ಕು ನಾಪತ್ತೆ; ಮನೆ ಮಾಲಕರಿಂದ ದೂರು


Team Udayavani, Jun 3, 2018, 10:34 AM IST

3-june-4.jpg

ಮಹಾನಗರ: ಮಂಗಳವಾರ ಸುರಿದ ಭಾರೀ ಮಳೆಯಿಂದ ಮನೆಯ ಒಳಗೆ ನೀರು ನುಗ್ಗಿ ವಸ್ತುಗಳು ಹಾಳಾಗಿವೆ. ಟಿವಿ, ಫ್ರಿಜ್ಜ್, ವಾಶಿಂಗ್‌ ಮಿಷಿನ್‌ ಕೈ ಕೊಟ್ಟಿದೆ. ಬಟ್ಟೆ, ಮನೆಯ ಕೀ ಕಳೆದು ಹೋಗಿದೆ.. ಹೀಗೆ ನೂರಾರು ಸಮಸ್ಯೆಯ ಬಗ್ಗೆ ಪತ್ರಿಕೆಗಳಲ್ಲಿ ಇತರ ಮಾಧ್ಯಮಗಳ ಮೂಲಕ ಕೇಳಿದ್ದೇವೆ. ಆದರೆ ಯಾರಿಗೂ ಅರಿಯದ ಭಾವನಾತ್ಮಕವಾಗಿ ಬೆಸೆದಿರುವ ದೂರುಗಳು ಮಾತ್ರ ದಾಖಲಾಗುತ್ತಿರುವುದು ನಗರದ ಎನಿಮಲ್‌ ಕೇರ್‌ ಟ್ರಸ್ಟ್‌ನಲ್ಲಿ…!

ಮಳೆಯ ಅವಾಂತರದಿಂದ ಮನೆಯ ಸದಸ್ಯರಂತಿದ್ದ ನಾಯಿ, ಬೆಕ್ಕುಗಳು ನಾಪತ್ತೆ ಯಾಗಿವೆ. ಅವನ್ನು ಹುಡುಕಿ ಕೊಡಿ ಎಂದು ಮನೆ ಮಾಲಕರು ತಮ್ಮ ಸ್ನೇಹಿತರು, ಸಾಮಾಜಿಕ ಜಾಲತಾಣ ಸೇರಿದಂತೆ ವಿವಿಧ ಮಾಧ್ಯಮಗಳ ಮೂಲಕ ಮನವಿ ಮಾಡಿ ಕೊಳ್ಳುತ್ತಿದ್ದಾರೆ. ಅದಕ್ಕಿಂತಲೂ ಮಿಗಿಲಾಗಿ ಶಕ್ತಿನಗರದ ಎನಿಮಲ್‌ ಕೇರ್‌ ಟ್ರಸ್ಟ್‌ ನಲ್ಲಿ ತಮ್ಮ ಸಾಕುಪ್ರಾಣಿಗಳನ್ನು ಹುಡುಕಿ ಕೊಡಿ ಎಂದು ಮನವಿ ಮಾಡುತ್ತಿದ್ದಾರೆ. ಅದರ ಹುಡುಕಾಟದಲ್ಲಿ ಟ್ರಸ್ಟ್‌ನ ಸಿಬಂದಿ ತೊಡಗಿದ್ದಾರೆ.

ಮಳೆಯಿಂದ ನಗರದಲ್ಲಿ ಉಂಟಾದ ಹಾನಿ ಸಮಯದಲ್ಲಿ ಮನೆ ಮಂದಿ ಮನೆ ಸದಸ್ಯರ ಕ್ಷೇಮದ ಬಗ್ಗೆ ಹೆಚ್ಚು ಮುತುವರ್ಜಿ ವಹಿಸುತ್ತಾರೆ. ಈ ಭಯದ ವಾತಾವರಣದ ಮಧ್ಯೆ ಮನೆಯಲ್ಲಿದ್ದ ನಾಯಿ, ಬೆಕ್ಕು ಹಾಗೂ ಇತರ ಸಾಕುಪ್ರಾಣಿಗಳು ಭಯಗೊಂಡು ಓಡಿಹೋಗಿರುವುದು ಅಥವಾ ನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವುದನ್ನು ಯಾರೂ ಗಮನಿಸಿರುವುದಿಲ್ಲ. ವರುಣನ ಆರ್ಭಟ ಶಾಂತಗೊಂಡ ಬಳಿಕ ಮನೆಯ ಸಾಕುಪ್ರಾಣಿಗಳ ಕಡೆ ಗಮನಹರಿಸುತ್ತಾರೆ. ಅದು ನಾಪತ್ತೆಯಾಗಿರುವುದನ್ನು ಗಮನಿಸಿ ಮರುಗುತ್ತಾರೆ. ಅದರಲ್ಲೂ ಸಾಕುಪ್ರಾಣಿಗಳನ್ನು ಮನೆಮಂದಿಯಂತೆ ಪ್ರೀತಿಸುತ್ತಿರುವವರು ಸಾಮಾಜಿಕ ಜಾಲ ತಾಣಗಳಲ್ಲಿ ನಾಯಿಯ ಫೋಟೋ ಜತೆಗೆ ಮಾಹಿತಿಯನ್ನು ನೀಡಿ ಕಾಣಸಿಕ್ಕರೆ ಸಂಪರ್ಕಿಸಿ ಎಂಬ ಸಂದೇಶವನ್ನು ರವಾನಿಸುತ್ತಿದ್ದಾರೆ.

ಟ್ರಸ್ಟ್‌ಗೆ ಒಂಬತ್ತು ದೂರು
ಭಾರೀ ಮಳೆಯ ಬಳಿಕ ನಾಪತ್ತೆಯಾದ ಸಾಕುಪ್ರಾಣಿಗಳನ್ನು ಹುಡುಕಿಕೊಡುವಂತೆ ಟ್ರಸ್ಟ್‌ಗೆ ಒಂಬತ್ತು ದೂರುಗಳು ಬಂದಿವೆ. ಅದರಲ್ಲಿ ಆರು ನಾಯಿ ಹಾಗೂ ಮೂರು ಬೆಕ್ಕಗಳು ಸೇರಿಕೊಂಡಿವೆ. ಟ್ರಸ್ಟ್‌ ನ ಸಿಬಂದಿ ಹುಡುಕಾಟದ ಬಳಿಕ ಐದು ನಾಯಿ ಹಾಗೂ 2 ಬೆಕ್ಕು ಸಿಕ್ಕಿವೆ.ಅದನ್ನು ಮಾಲಕರಿಗೆ ನೀಡಲಾಗಿದೆ . ಬಾಕಿ ಇರುವ ಪ್ರಾಣಿಗಳನ್ನು ಆದಷ್ಟು ಬೇಗ ಹುಡುಕಲು ಪ್ರಯತ್ನ ಮಾಡುತ್ತಿದ್ದೇವೆ ಎಂದು ಟ್ರಸ್ಟ್‌ನ ಸಿಬಂದಿ ಉದಯವಾಣಿಗೆ ತಿಳಿಸಿದ್ದಾರೆ.

ಅಪಘಾತಗಳ ಪ್ರಮಾಣ ಹೆಚ್ಚಾಗಿದೆ
ನೆರೆಯ ಕಾರಣದಿಂದ ಒಂದು ಪ್ರದೇಶದಿಂದ ಇನ್ನೊಂದು ಪ್ರದೇಶಕ್ಕೆ ಹೋದ ಪ್ರಾಣಿಗಳಿಗೆ ಅಲ್ಲಿನ ರಸ್ತೆಯ ಬಗ್ಗೆ ತಿಳಿಯದೆ ಇರುವುದರಿಂದ ಅದು ವಾಹನಗಳ ಅಡಿಗೆ ಬಿದ್ದು ಸಾವನ್ನಪ್ಪುವುದು ಹಾಗೂ ಗಾಯಗಳಾಗುತ್ತಿರುವ ಪ್ರಕರಣಗಳ ಸಂಖ್ಯೆ ಹೆಚ್ಚಾಗಿವೆ. ಇಂತಹ ಘಟನೆಗಳಿಗೆ ಸಂಬಂಧಿಸಿ ಟ್ರಸ್ಟ್‌ಗೆ 20 ಪ್ರಕರಣಗಳು ಬಂದಿವೆ. ಅದರಲ್ಲಿ 10 ನಾಯಿಗಳು ಸಾವನ್ನಪ್ಪಿದ್ದು, ಇನ್ನೂ 10 ಪ್ರಾಣಿಗಳು ಗಾಯಗೊಂಡು ಚಿಕಿತ್ಸೆ ಪಡೆಯುತ್ತಿವೆ.

ವಾಹನ ಸವಾರರು ಎಚ್ಚರ ವಹಿಸಿ
ನೆರೆಗೆ ದಾರಿ ತಪ್ಪಿ ರಸ್ತೆಗಳಲ್ಲಿ ಅಡ್ಡಾಡುತ್ತಿರುವ ಪ್ರಾಣಿಗಳ ಬಗ್ಗೆ ವಾಹನ ಸವಾರರು ಎಚ್ಚರ ವಹಿಸಬೇಕು. ಗಾಡಿಯನ್ನು ನಿಧಾನವಾಗಿ ಚಲಾಯಿಸಿದರೆ ಪ್ರಾಣಿಗಳನ್ನು ರಕ್ಷಿಸಬಹುದು. ಅದು ಮಾತ್ರವಲ್ಲದೆ ಯಾವುದೇ ಸಮಯದಲ್ಲೂ ವಾಹನದಡಿಗೆ ಬೀಳುವ ಪ್ರಾಣಿಗಳ ರಕ್ಷಣೆಗಾಗಿ ಹೆಚ್ಚು ಪ್ರಾಶಸ್ತ್ಯವನ್ನು ಎಲ್ಲರೂ ನೀಡಬೇಕು.
– ತೌಸಿಫ್‌,
ಟ್ರಸ್ಟ್‌ನ ರಕ್ಷಣಾ ಉಸ್ತುವಾರಿ

 ವಿಶೇಷ ವರದಿ

ಟಾಪ್ ನ್ಯೂಸ್

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.