ದೋಳ್ಪಾಡಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಯತ್ನ: ಆರೋಪಿಗೆ ಕಠಿಣ ಶಿಕ್ಷೆಗೆ ಮನವಿ
Team Udayavani, Dec 16, 2019, 5:53 PM IST
ಕಾಣಿಯೂರು : ಕಡಬ ತಾಲೂಕಿನ ದೋಳ್ಪಾಡಿ ಗ್ರಾಮದ ಸರಕಾರಿ ಶಾಲೆಯ ಐದನೇ ತರಗತಿಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಯತ್ನ ನಡೆದಿದೆ. ಈ ಬಗ್ಗೆ ಒರ್ವನನ್ನು ಪೋಲೀಸರು ಬಂಧಿಸಿದ್ದಾರೆ.
ಡಿ.14 ರಂದು ವಿದ್ಯಾರ್ಥಿನಿ ಶಾಲೆಯಿಂದ ಮನೆಗೆ ಹೋಗುತಿದ್ದ ವೇಳೆ ಆರೋಪಿ ವಿದ್ಯಾರ್ಥಿನಿಯನ್ನು ಪಕ್ಕದ ಪೊದೆಗೆ ತಳೆದು ಅತ್ಯಾಚಾರಕ್ಕೆ ಯತ್ನಿಸಿದ್ದು ಕೂಗಿಕೊಂಡಾಗ ಕೊಲೆಗೈಯಲು ಯತ್ನಿಸಿದ ಎಂದು ತಿಳಿದುಬಂದಿದೆ.
ಶಾಲೆಯಿಂದ ಅದೇ ದಾರಿಯಲ್ಲಿ ಮಕ್ಕಳ ಗುಂಪೊಂದು ಬರುತ್ತಿರುವುದನ್ನು ಕಂಡು ಆರೋಪಿ ವಿದ್ಯಾರ್ಥಿನಿಯನ್ನು ಬಿಟ್ಟು ಪರಾರಿಯಾಗಿದ್ದಾನೆ.
ಕಡಬ ಠಾಣೆಗೆ ದೂರು ನೀಡಲಾಗಿದ್ದು, ಆರೋಪಿ ಶಿವರಾಮ್ ಎನ್ನುವವನ ಬಂಧನವಾಗಿದೆ ಎಂದು ಕಡಬ ಪೋಲೀಸರು ತಿಳಿಸಿದ್ದಾರೆ.
ಊರಿನವರಿಂದ ಮನವಿ: ದೇಶದಲ್ಲೆಡೆ ದಿನ ನಿತ್ಯ ಕೇಳಿ ಬರುತ್ತಿರುವ ಅತ್ಯಾಚಾರ ಪ್ರಕರಣಗಳು ಗ್ರಾಮೀಣ ಭಾಗಕ್ಕೂ ಕಾಲಿಟ್ಟಿದೆ. ದೋಳ್ಪಾಡಿ ಶಾಲೆಯ ವಿದ್ಯಾರ್ಥಿನಿಯನ್ನು ಹಾಡುಹಗಲೇ ನಡುರಸ್ತೆಯಲ್ಲಿ ಅತ್ಯಾಚಾರ ಯತ್ನಿಸಿದ ಆರೋಪಿ ಎಷ್ಟೇ ಪ್ರಭಾವಿತನಾದರು ಆತನಿಗೆ ಕಠಿಣ ಶಿಕ್ಷೆ ನೀಡಬೇಕೆಂದು ದೋಳ್ಪಾಡಿಯ ಗ್ರಾಮಸ್ಥರು ಹಾಗೂ ಹಲವು ಸಂಘಟನೆಗಳ ಪ್ರಮುಖರು ಪುತ್ತೂರು ಡಿವೈಎಸ್ಪಿ ದಿನಕರ್ ಶೆಟ್ಟಿ, ಕಡಬ ಠಾಣೆಗೆ ಮನವಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
MUST WATCH
ಹೊಸ ಸೇರ್ಪಡೆ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!