ಕೋವಿಡ್ 19 ಸೋಂಕಿಗೆ ಭಯ ಪಡದೆ ಚಿಕಿತ್ಸೆಗೆ ಬನ್ನಿ: ಜಿಲ್ಲಾಧಿಕಾರಿ ಸಿಂಧೂ

ಸಾಮಾನ್ಯ ಶೀತ-ಜ್ವರವನ್ನೂ ನಿರ್ಲಕ್ಷಿಸದಿರಿ: ತಜ್ಞರ ತಂಡದ ಸಲಹೆ

Team Udayavani, Jul 12, 2020, 6:32 AM IST

ಕೋವಿಡ್ 19 ಸೋಂಕಿಗೆ ಭಯ ಪಡದೆ ಚಿಕಿತ್ಸೆಗೆ ಬನ್ನಿ: ಜಿಲ್ಲಾಧಿಕಾರಿ ಸಿಂಧೂ

ಮಂಗಳೂರು: ಕೋವಿಡ್ 19 ಸೋಂಕಿನ ಲಕ್ಷಣ ಇರುವವರು ತಪಾಸಣೆಗೆ ಹಾಗೂ ಸೋಂಕು ದೃಢಪಟ್ಟರೆ ಆಸ್ಪತ್ರೆಗಳಿಗೆ ಬಂದು ಚಿಕಿತ್ಸೆ ಪಡಕೊಳ್ಳಲು ಯಾವುದೇ ರೀತಿಯಿಂದಲೂ ಆತಂಕ ಪಡಬಾರದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್‌ ಧೈರ್ಯ ತುಂಬಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ತಜ್ಞ ವೈದ್ಯರ ತಂಡದ ಜತೆ ಸಭೆ ಬಳಿಕ ಪತ್ರಿಕಾಗೋಷ್ಠಿ ನಡೆಸಿದ ಅವರು, ಕೋವಿಡ್‌ ಆಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಸೋಂಕಿತರ ಚಿಕಿತ್ಸೆಗೆ ವಿಶೇಷ ನಿಗಾ ವಹಿಸಲಾಗುತ್ತದೆ. ಯಾರೂ ಗಾಬರಿಗೊಳ್ಳುವ ಅಗತ್ಯವಿಲ್ಲ ಎಂದರು.

ಸಾವಿಗೆ ಕೋವಿಡ್ 19 ಮಾತ್ರ ಕಾರಣವಲ್ಲ
ನಗರ ವ್ಯಾಪ್ತಿಯ ಆರೋಗ್ಯ ಕೇಂದ್ರಗಳು, ತಾಲೂಕು ಆಸ್ಪತ್ರೆ, ವೆನ್ಲಾಕ್‌ ಆಸ್ಪತ್ರೆ, ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಫೀವರ್‌ ಕ್ಲಿನಿಕ್‌ಗಳಲ್ಲಿ ತಪಾಸಣೆ ಮಾಡಿಸಿಕೊಳ್ಳಬಹುದು. ಕೋವಿಡ್ 19ನಿಂದಾಗಿ ಜಿಲ್ಲೆಯಲ್ಲಿ ಸಂಭವಿಸಿರುವ ಒಟ್ಟು ಸಾವಿನ ಪ್ರಕರಣಗಳ ಪೈಕಿ 35 ಪ್ರಕರಣಗಳ ಬಗ್ಗೆ ವೈದ್ಯರ ತಂಡ ಕೂಲಂಕಷ ಪರಿಶೀಲನೆ ನಡೆಸಿದೆ. ಅದರಲ್ಲಿ 26 ಮಂದಿ ದೀರ್ಘ‌ಕಾಲದ ಗಂಭೀರ ಕಾಯಿಲೆಗಳಿಂದ ಬಳಲುತ್ತಿದ್ದವರು.

ನಾಲ್ವರು ಬೇರೆ ಕಾರಣಗಳಿಂದ ಮೃತಪಟ್ಟಿದ್ದು ಸ್ಪಷ್ಟವಾಗಿದ್ದು, ತಪಾಸಣೆ ಮಾಡುವಾಗ ಕೋವಿಡ್ 19 ಕೂಡ ಇತ್ತು. ನಾಲ್ವರು ನ್ಯುಮೋನಿಯಾದಿಂದ ಮೃತಪಟ್ಟವರು. ಒಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಿಲ್ಲೆಯಲ್ಲಿ ಮೃತಪಟ್ಟವರಲ್ಲಿ 9 ಮಂದಿ 50 ವರ್ಷಕ್ಕಿಂತ ಕಡಿಮೆ ವಯಸ್ಸಿನವರು, 11 ಮಂದಿ 60ರಿಂದ 70 ವರ್ಷದವರು, 5 ಮಂದಿ 70ಕ್ಕಿಂತ ಹೆಚ್ಚು ವರ್ಷ ವಯಸ್ಸಿನವರು. 13 ಮಂದಿ ತಜ್ಞರ ತಂಡವು ಕೋವಿಡ್ 19ನಿಂದಾಗಿರುವ ಸಾವಿನ ಪ್ರಕರಣಗಳ ಅಧ್ಯಯನ ನಡೆಸುತ್ತಿದೆ ಎಂದು ಸಿಂಧೂ ಬಿ. ರೂಪೇಶ್‌ ತಿಳಿಸಿದರು.

ಚಿಕಿತ್ಸೆ ನಿರಾಕರಿಸಿದರೆ ಕ್ರಮ
ಯಾವುದೇ ಕಾಯಿಲೆಗಳ ಚಿಕಿತ್ಸೆಗೆ ನಿರಾಕರಿಸಿದರೆ ಅಂತಹ ಆಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಕೋವಿಡ್ 19 ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳು ಸರಕಾರ ನಿಗದಿಪಡಿಸಿದಕ್ಕಿಂತ ಹೆಚ್ಚಿನ ದರ ವಸೂಲಿ ಮಾಡಿದರೆ ಅಂತಹ ಆಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಖಾಸಗಿ ಆ್ಯಂಬುಲೆನ್ಸ್‌ ನಿರ್ವಹಣೆಗೆ ತಂಡ
ಜಿಲ್ಲೆಯಲ್ಲಿ 108 ಆರೋಗ್ಯ ಕವಚ ಆ್ಯಂಬುಲೆನ್ಸ್‌ಗಳು 28 ಇವೆ. 10ನ್ನು ಕೋವಿಡ್‌ ರೋಗಿಗಳಿಗಾಗಿ ಮೀಸಲಿಡಲಾಗಿದೆ. ಮೃತದೇಹಗಳನ್ನು ಸಾಗಿಸಲು ಕೂಡ ಅಗತ್ಯವಿರುವಷ್ಟು ಆ್ಯಂಬುಲೆನ್ಸ್‌ಗಳನ್ನು ಮೀಸಲಿರಿಸಲಾಗಿದೆ. ಒಂದು ಮೃತದೇಹ ಸಾಗಿಸುವಾಗ 2 ಆ್ಯಂಬುಲೆನ್ಸ್‌ ಬಳಕೆ ಮಾಡಲಾಗುತ್ತಿದೆ. ಅಲ್ಲದೆ ಖಾಸಗಿ ಆ್ಯಂಬುಲೆನ್ಸ್‌ಗಳನ್ನು ಕೂಡ ಜಿಲ್ಲಾಡಳಿತದ ತಂಡದಿಂದಲೇ ನಿರ್ವಹಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅಪರ ಜಿಲ್ಲಾಧಿಕಾರಿ ರೂಪಾ ತಿಳಿಸಿದರು.

ಪ್ರಭಾರ ಡಿಎಚ್‌ಒ ಡಾ| ರತ್ನಾಕರ್‌, ತಜ್ಞರ ಸಮಿತಿಯ ಸದಸ್ಯರಾದ ವೆನ್ಲಾಕ್‌ ಅಧೀಕ್ಷಕ ಡಾ| ಸದಾಶಿವ, ಡಾ| ಶರತ್‌ಬಾಬು, ಡಾ| ಮುರಲೀಧರ, ಡಾ| ಹಂಸರಾಜ ಆಳ್ವ, ಡಾ| ಸುದೀಪ್‌ ರೈ, ಡಾ| ಚಕ್ರಪಾಣಿ, ಡಾ| ತಾಜುದ್ದೀನ್‌ ಉಪಸ್ಥಿತರಿದ್ದರು.

ಮಳೆಗಾಲ ಕೋವಿಡ್ 19ಗೆ ಪೂರಕವೆಂದು ದೃಢವಾಗಿಲ್ಲ
ಮಳೆಗಾಲದಲ್ಲಿ ಕೋವಿಡ್ 19 ಸೋಂಕು ಹೆಚ್ಚಿನ ಪ್ರಮಾಣದಲ್ಲಿ ಹರಡುತ್ತದೆ ಎಂಬುದು ದೃಢಪಟ್ಟಿಲ್ಲ. ಆದರೆ ಮಳೆಗಾಲದಲ್ಲಿ ಹೆಚ್ಚಿನವರು ಮನೆಯೊಳಗೆ ಇರುವುದರಿಂದ ಒಬ್ಬರಿಂದ ಇನ್ನೊಬ್ಬರಿಗೆ ಹರಡುವ ಸಾಧ್ಯತೆ ಹೆಚ್ಚಾಗಬಹುದು. ಮೃತದೇಹದಲ್ಲಿರುವ ವೈರಸ್‌ ಸಜೀವ ವ್ಯಕ್ತಿಯಲ್ಲಿರುವಷ್ಟು ಸಕ್ರಿಯವಾಗಿ ಇರುವುದಿಲ್ಲ. ಆದರೆ ಮೃತದೇಹದಿಂದ ಹೊರಗೆ ಬರುವ ದ್ರವದಿಂದ ಅಪಾಯವಿರುತ್ತದೆ ಎಂದು ತಜ್ಞರ ತಂಡದ ಡಾ| ಮುರಲೀಧರ ಅವರು ತಿಳಿಸಿದರು.

ವೆಂಟಿಲೇಟರ್‌ ಹಾಕಲು ಬಿಡಲಿಲ್ಲ
ಮೃತರಲ್ಲಿ ಓರ್ವರಿಗೆ ರೋಗ ಲಕ್ಷಣ ಕಂಡುಬಂದು 7 ದಿನಗಳಾಗಿದ್ದವು. ಖಾಸಗಿ ಆಸ್ಪತ್ರೆಯಿಂದ ವೆನ್ಲಾಕ್‌ಗೆ ತಡವಾಗಿ ಕರೆತರಲಾಗಿತ್ತು. ಅವರ ತೂಕ 150 ಕೆಜಿ ಇತ್ತು. ವೆಂಟಿಲೇಟರ್‌ ಅಳವಡಿಕೆ ಕೂಡ ಕಷ್ಟವಾಯಿತು. ಇನ್ನೊಂದು ಪ್ರಕರಣದಲ್ಲಿ 60 ವರ್ಷದ ವ್ಯಕ್ತಿಗೆ ವೆಂಟಿಲೇಟರ್‌ ಹಾಕುವುದಕ್ಕೆ ಮನೆಯವರು ಬಿಡಲಿಲ್ಲ ಎಂದು ವೆನ್ಲಾಕ್‌ ವೈದ್ಯಕೀಯ ಅಧೀಕ್ಷಕ ಡಾ| ಸದಾಶಿವ ತಿಳಿಸಿದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.