ಆತುರದ ತೀರ್ಮಾನ ಬೇಡ: ಸುಳ್ಯದ ಮುಖಂಡರ ಜತೆ ಸಭೆ ನಡೆಸಿದ ಕೋಟ ಶ್ರೀನಿವಾಸ ಪೂಜಾರಿ

ಸುಳ್ಯಕ್ಕೆ ಮಾಡಿದ ಅವಮಾನ: ಜೆಡಿಎಸ್ ಖಂಡನೆ

Team Udayavani, Aug 20, 2019, 1:57 PM IST

ANGARA-MEE

ಬೆಂಗಳೂರು/ ಸುಳ್ಯ : ಶಾಸಕ ಎಸ್.ಅಂಗಾರ ಅವರಿಗೆ ಕೊನೆ ಕ್ಷಣದಲ್ಲಿ ಮಂತ್ರಿ ಪದವಿ ತಪ್ಪಿದ ಹಿನ್ನಲೆಯಲ್ಲಿ ರಾಜೀನಾಮೆಗೆ ಮುಂದಾದ ಸುಳ್ಯದ ಮುಖಂಡರೊಂದಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ಸಮಾಲೋಚನೆ ನಡೆಸಿದ್ದಾರೆ.

ಸುಳ್ಯ ಶಾಸಕ ಎಸ್. ಅಂಗಾರ‌ ಅವರ ಉಪಸ್ಥಿತಿಯಲ್ಲಿ ಮುಖಂಡರ ಸಭೆ ನಡೆಯಿತು.

ಸಭೆಯಲ್ಲಿ ಬಿಜೆಪಿ ಮುಖಂಡ ಎ.ವಿ.ತೀರ್ಥರಾಮ ಅಭಿಪ್ರಾಯ ಮಂಡಿಸಿ ನಿನ್ನೆ ರಾತ್ರಿಯವರೆಗೂ ಮಂತ್ರಿಸ್ಥಾನ ಖಚಿತವಾದರೂ ಇಂದು ಬೆಳಿಗ್ಗೆ ತಪ್ಪುವ ಮೂಲಕ ಸುಳ್ಯ ಕ್ಷೇತ್ರಕ್ಕೆ ಅನ್ಯಾಯ ಮಾಡಲಾಗಿದೆ. ಇದನ್ನು ಪ್ರತಿಭಟಿಸಿ ನಾವು ನಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡುವುದಾಗಿ ಹೇಳಿದರು. ಉಳಿದ ಮುಖಂಡರು ಕೂಡಾ ಇದೇ ಅಭಿಪ್ರಾಯ ವ್ಯಕ್ತಪಡಿಸಿದರು.

ಬಳಿಕ ಮಾತನಾಡಿದ ಕೋಟ ಶ್ರೀನಿವಾಸ ಪೂಜಾರಿಯವರು ಯಾವುದೇ ಆತುರದ ನಿರ್ಧಾರ ಕೈಗೊಳ್ಳಬೇಡಿ, ನಿಮ್ಮ ನೋವು ನಮಗೆ ಅರ್ಥವಾಗುತ್ತದೆ. ಬುಧವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಭೇಟಿಗೆ ಸಮಯ ನಿಗದಿಯಾಗಿದೆ. ಅಲ್ಲಿಯವರೆಗೆ ಕಾದು ನೋಡೋಣ ಎಂದು ಹೇಳಿದರು.

ಗುರುವಾರ ಜಿಲ್ಲಾಮಟ್ಟದಲ್ಲಿ ಶಾಸಕರು ಹಾಗೂ ಸಂಸದರ ಸಭೆ ಕರೆದು ನಮ್ಮ ತೀರ್ಮಾನ ಹೇಳುವುದಾಗಿ ಸಂಜೀವ ಮಠಂದೂರು ಹೇಳಿದರು.

ಅಂಗಾರರಿಗೆ ಮಂತ್ರಿಸ್ಥಾನವೇ ಸಿಗಬೇಕು ಎಂಬುದು ನಮ್ಮ ಒತ್ತಾಯ. ಅದುವರೆಗೆ ನಾವು ನಮ್ಮ ಹುದ್ದೆಗಳಲ್ಲಿ ತಟಸ್ಥರಾಗಿ ಉಳಿಯುತ್ತೇವೆ. ರಾಜ್ಯದ ನಾಯಕರು ಬಂದು ನಮಗೆ ಬುದ್ದಿವಾದ ಹೇಳುವ ಅಗತ್ಯವಿಲ್ಲ ಎಂಬ ಮಾತುಗಳನ್ನು ಸಭೆಯಲ್ಲಿದ್ದ ಮುಖಂಡರು ಹೇಳಿದರೆನ್ನಲಾಗಿದೆ.

ಬಿಜೆಪಿ ನಾಯಕರಾದ ವೆಂಕಟ್ ವಳಲಂಬೆ, ಎಸ್.ಎನ್.ಮನ್ಮಥ, ವೆಂಕಟ್ ದಂಬೆಕೋಡಿ, ಚನಿಯ ಕಲ್ತಡ್ಕ, ಸುರೇಶ್ ಕಣೆಮರಡ್ಕ, ಸಂತೋಷ್ ಜಾಕೆ, ರಾಧಾಕೃಷ್ಣ ಬೊಳ್ಳೂರು, ಕೃಷ್ಣ ಶೆಟ್ಟಿ ಕಡಬ, ದಿನೇಶ್ ಮೆದು,  ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಜೆಡಿಎಸ್ ಖಂಡನೆ: ಅಂಗಾರ ಅವರಿಗೆ ಮಂತ್ರಿ ಸ್ಥಾನ ತಪ್ಪಿದ ನಿರ್ಧಾರವನ್ನು ಸುಳ್ಯ ಜೆಡಿಎಸ್ ಖಂಡಿಸಿದೆ. ಪತ್ರಿಕಾಗೋಷ್ಠಿ ನಡೆಸಿದ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಂ ಬಿ ಸದಾಶಿವ ಅವರು, ಇದು ಸುಳ್ಯಕ್ಕೆ ಮಾಡಿದ ಅವಮಾನ ಎಂದು ಆಕ್ರೋಶ ವ್ಯಕ್ತ ಪಡಿಸಿದರು. ಕುಂಬ್ರ ದಯಾಕರ ಆಳ್ವ , ಮತ್ತು ರಾಕೇಶ್ ಕುಂಟಿಕಾನ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.