ನಗರಸಭೆ ರಸ್ತೆ ಬದಿ ತ್ಯಾಜ್ಯ ಎಸೆದರೆ ದಂಡ


Team Udayavani, May 4, 2018, 8:40 AM IST

Kasa-3-5.jpg

ನಗರ: ಪುತ್ತೂರು ಪೇಟೆಯ ಹೆಚ್ಚಿನ ರಸ್ತೆಗಳ ಬದಿ ತ್ಯಾಜ್ಯ ರಾಶಿ ಬಿದ್ದುಕೊಂಡಿದೆ. ಇವುಗಳನ್ನು ನಾಯಿ, ಕಾಗೆಗಳು ಹೆಕ್ಕಿ ತಿನ್ನುತ್ತಿದ್ದು, ರೋಗಭೀತಿ ಎದುರಾಗಿದೆ. ಇದನ್ನು ನಿಯಂತ್ರಿಸಲು ಸಿಸಿ ಕೆಮರಾ ಅಳವಡಿಸಿ, ತ್ಯಾಜ್ಯ ಸುರಿಯುವವರಿಗೆ ಪೊಲೀಸರ ಮೂಲಕ ದಂಡ ವಿಧಿಸಲು ನಗರಸಬೆ ಮುಂದಾಗಿದೆ. ಪುತ್ತೂರು- ಉಪ್ಪಿನಂಗಡಿ ರಾಜ್ಯ ಹೆದ್ದಾರಿ ಸಹಿತ ಹಲವು ರಸ್ತೆಗಳಲ್ಲಿ ತ್ಯಾಜ್ಯದ ರಾಶಿ ಕಂಡುಬರುತ್ತಿದೆ. ಡಸ್ಟ್‌ ಬಿನ್‌ಗಳನ್ನು ಅಲ್ಲಲ್ಲಿ ಇಟ್ಟಿದ್ದರೂ, ಯಾವುದೇ ಪ್ರಯೋಜನ ಇಲ್ಲ. ಕೆಲ ಡಸ್ಟ್‌ಬಿನ್‌ ಗಳಲ್ಲಿ ಕಸ ತುಂಬಿ, ಹೊರಗಡೆ ಚೆಲ್ಲಾಡುತ್ತಿದೆ. ಈ ಬಗ್ಗೆ ಸಾಕಷ್ಟು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ತ್ಯಾಜ್ಯ ಹಾಗೂ ಪ್ಲಾಸ್ಟಿಕ್‌ ನಿಂದ ಎದುರಾಗುವ ಸಮಸ್ಯೆಗಳ ಬಗ್ಗೆ ಜನರಿಗೆ ತಿಳಿ ಹೇಳಲಾಗಿದೆ. ಆದರೆ ಯಾರೊಬ್ಬರಿಗೂ ಇದರ ಬಗ್ಗೆ ಅರಿವು ಮೂಡಿದಂತೆ ಕಾಣುತ್ತಿಲ್ಲ. ಆದ್ದರಿಂದ ದಂಡ ಹಾಕುವುದೇ ಅಂತಿಮ ದಾರಿ ಎನ್ನುವುದನ್ನು ನಗರಸಭೆ ಮನಗಂಡಿದೆ.

ದುರ್ವಾಸನೆ, ನಾಯಿ ಕಾಟ
ಮೊದಲು ರಸ್ತೆ ಬದಿ ಡಬ್ಬಿ ಇಟ್ಟು, ಪ್ರತಿದಿನ ಪೌರಕಾರ್ಮಿಕರು ಲಾರಿಯಲ್ಲಿ ಬಂದು ಕಸ ತೆರವು ಮಾಡುತ್ತಿದ್ದರು. ಇದರ ಸಮಸ್ಯೆ ಏನೆಂದರೆ, ತ್ಯಾಜ್ಯ ಸುರಿಯುತ್ತಿದ್ದ ರಸ್ತೆ ಬದಿಯಿಂದ ನಡೆದುಕೊಂಡು ಹೋಗಲಾಗದಷ್ಟು ಕೆಟ್ಟ ವಾಸನೆ ಬೀರುತ್ತಿತ್ತು. ನಾಯಿಗಳ ಉಪಟಳವೂ ಹೆಚ್ಚಾಗಿತ್ತು. ಇದಕ್ಕೆ ಪರಿಹಾರ ನೀಡಲು ಮುಂದಾದ ನಗರಸಭೆ, ಡಬ್ಬಿಗಳನ್ನು ತೆರವು ಮಾಡಿ, ಮನೆ- ಅಂಗಡಿಗಳ ಬಾಗಿಲಿಗೆ ತೆರಳಿ ಕಸ ಸಂಗ್ರಹಿಸುವ ಹೊಸ ವ್ಯವಸ್ಥೆಗೆ ಬುನಾದಿ ಹಾಡಿತು.

ದರ್ಬೆಯಿಂದ ಪುತ್ತೂರು ಪೇಟೆ ಹಾಗೂ ಪುತ್ತೂರು ಪೇಟೆಯಿಂದ ಬೊಳುವಾರು ವರೆಗೆ ಎರಡು ವಿಭಾಗ ಮಾಡಿ, ಪ್ರತಿ ಅಂಗಡಿ- ಮನೆಗಳ ಬಾಗಿಲಿಗೇ ತೆರಳಿ ಕಸ ಸಂಗ್ರಹ ಮಾಡಲಾಯಿತು. ಇದರ ಗುತ್ತಿಗೆಯನ್ನು ಸ್ವಸಹಾಯ ಸಂಘಗಳಿಗೆ ಹೊರಿಸಲಾಯಿತು. ಜನರ ಅಸಹಕಾರ ಹಾಗೂ ನಗರಸಭೆಯ ನಿರ್ಲಕ್ಷ್ಯವೋ ಎಂಬಂತೆ ಇದು ಅಷ್ಟಾಗಿ ಚಾಲ್ತಿಗೆ ಬರಲೇ ಇಲ್ಲ. ಇದೀಗ ಮತ್ತೂಮ್ಮೆ ಇದೇ ವ್ಯವಸ್ಥೆಯನ್ನು ಕ್ರಮಬದ್ಧವಾಗಿ ಜಾರಿಗೆ ತರಲು ನಗರಸಭೆ ಮುಂದಾಗಿದೆ.

ಕೆಟ್ಟು ನಿಂತ ಲಾರಿ
ಹಲವು ರಸ್ತೆಗಳ ಬದಿ ತ್ಯಾಜ್ಯ ರಾಶಿ ಹಾಗೆಯೇ ಬಿದ್ದುಕೊಂಡಿದೆ. ಇದಕ್ಕೆ ಕಾರಣ ಹುಡುಕಿದಾಗ, ತ್ಯಾಜ್ಯ ಕೊಂಡೊಯ್ಯುವ ಲಾರಿ ಕೆಟ್ಟು ನಿಂತಿರುವುದು ಗಮನಕ್ಕೆ ಬಂದಿದೆ. ಪುತ್ತೂರು ನಗರಸಭೆಯಲ್ಲಿ ಒಟ್ಟು 14 ಪೌರ ಕಾರ್ಮಿಕರಿದ್ದಾರೆ. ಇದರಲ್ಲಿ ಹತ್ತು ಮಂದಿ ಮನೆ- ಅಂಗಡಿ ಬಾಗಿಲಿನಿಂದ ಕಸ ಸಂಗ್ರಹಿಸಲು ತೆರಳುತ್ತಾರೆ. ಉಳಿದ ನಾಲ್ವರನ್ನು, ರಸ್ತೆ ಬದಿಯ ತ್ಯಾಜ್ಯ ಸಂಗ್ರಹಕ್ಕೆಂದೇ ನೇಮಿಸಲಾಗಿದೆ. ಇವರು ಲಾರಿಯಲ್ಲಿ ಕಸ ತುಂಬಿ, ಡಂಪಿಂಗ್‌ ಯಾರ್ಡ್‌ಗೆ ಸುರಿಯಬೇಕು. ಆದರೆ ಲಾರಿ ಕೆಟ್ಟು ನಿಂತಿರುವುದರಿಂದ ಕಸ ಸಂಗ್ರಹ ಸಾಧ್ಯವಾಗುತ್ತಿಲ್ಲ ಎಂಬ ದೂರು ಕೇಳಿಬಂದಿದೆ.

ಡೋರ್‌ ಟು ಡೋರ್‌ ಕಲೆಕ್ಷನ್‌
ಮೇ ಪ್ರಥಮ ವಾರದಿಂದಲೇ ಪ್ರತಿ ಮನೆ, ಅಂಗಡಿಗಳಿಂದ ತ್ಯಾಜ್ಯ ಸಂಗ್ರಹಿಸುವ ಕೆಲಸಕ್ಕೆ ಚಾಲನೆ ನೀಡಲಾಗಿದೆ. ಆದರೆ ಪೌರಕಾರ್ಮಿಕರಿಗೆ ಇದು ಹೊಸ ಕೆಲಸವಾದ ಕಾರಣ, ಇನ್ನೂ ಸಮರ್ಪಕ ಕೆಲಸಕ್ಕೆ 15 ದಿನ ಬೇಕು ಎನ್ನುತ್ತಾರೆ ಪೌರಾಯುಕ್ತರು.

ಕಸ ಪ್ರತ್ಯೇಕಿಸಿಯೇ ನೀಡಬೇಕು
ಈ ಯೋಜನೆಯಡಿ 11,500 ಡಸ್ಟ್‌ ಬಿನ್‌ಗಳನ್ನು ತರಿಸಿಕೊಳ್ಳಲಾಗಿದೆ. ಇದನ್ನು ಇಡಿಯ ಪುತ್ತೂರಿನ ಮನೆ, ಅಂಗಡಿಗಳಿಗೆ ಅಗತ್ಯದಷ್ಟು ವಿತರಿಸಲಾಗುವುದು. ಹಸಿ ಕಸ ಹಾಗೂ ಒಣ ಕಸವನ್ನು ಪ್ರತ್ಯೇಕಿಸಿಯೇ ಕಸ ನೀಡಬೇಕು. ಆದರೆ ಈ ವ್ಯವಸ್ಥೆ ಇನ್ನೂ ಜಾರಿಗೇ ಬಂದಿಲ್ಲ. ಸದ್ಯ ಚುನಾವಣೆ ಮುಗಿಯುವವರೆಗೆ ಇದನ್ನು ಜಾರಿಗೆ ತರುವುದು ಸುಲಭದ ಮಾತಲ್ಲ. ಏನಿದ್ದರೂ ಚುನಾವಣೆ ಮುಗಿದ ಬಳಿಕವಷ್ಟೇ ಕ್ರಮ ಕೈಗೊಳ್ಳಬೇಕು. ಇದರ ಬೆನ್ನಿಗೇ ಪೊಲೀಸರ ಸಹಕಾರ ಪಡೆದುಕೊಂಡು ತ್ಯಾಜ್ಯ ರಾಶಿ ಬೀಳುವ ಸ್ಥಳಗಳ ಬಳಿ ಸಿಸಿ ಕೆಮರಾ ಹಾಕಲಾಗುವುದು. ಇದರ ಮೂಲಕ ಕಸ ರಾಶಿ ಹಾಕುವವರನ್ನು ಪತ್ತೆ ಹಚ್ಚಿ, ದಂಡ ವಿಧಿಸುವ ಬಗ್ಗೆಯೂ ಚಿಂತನೆ ನಡೆದಿದೆ.

ಟಿಪ್ಪರ್‌ ದುರಸ್ತಿ
ರಸ್ತೆ ಬದಿ ತ್ಯಾಜ್ಯ ಎಸೆಯುವವರ ಸಂಖ್ಯೆ ಹೆಚ್ಚುತ್ತಿದೆ. ಇಂತಹ ಪಾಯಿಂಟ್‌ಗಳನ್ನು ಗುರುತಿಸಿ ಸಿಸಿ ಕೆಮರಾ ಹಾಕಲಾಗುವುದು. ಇದರಲ್ಲಿ ಆರೋಪಿಗಳನ್ನು ಪತ್ತೆಹಚ್ಚಿ, ದಂಡ ವಿಧಿಸಲಾಗುವುದು. ಸದ್ಯ ರಸ್ತೆ ಬದಿಯ ತ್ಯಾಜ್ಯ ಸಂಗ್ರಹಕ್ಕೆ ಟಿಪ್ಪರ್‌ ಹಾಳಾಗಿದೆ. ಸರಿಪಡಿಸಲು ನೀತಿ ಸಂಹಿತೆ ಅಡ್ಡಿಯಾಗಿದೆ.
– ರೂಪಾ ಶೆಟ್ಟಿ, ಪೌರಾಯುಕ್ತೆ, ಪುತ್ತೂರು ನಗರಸಭೆ

— ಗಣೇಶ್‌ ಎನ್‌. ಕಲ್ಲರ್ಪೆ

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.