ಆತಂಕ ಬೇಡ-ಮುನ್ನೆಚ್ಚರಿಕೆ ವಹಿಸಿ: ಡಿಸಿ


Team Udayavani, Jul 18, 2019, 5:27 AM IST

dc

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ-ಬಿಸಿಲು ಕಣ್ಣಾಮುಚ್ಚಾಲೆಯ ಪರಿಣಾಮ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಏರುತ್ತಿದೆ. ಇದರ ಹತೋಟಿಗೆ ಜಿಲ್ಲಾಡಳಿತ ವ್ಯಾಪಕ ಕಾರ್ಯತಂತ್ರಗಳನ್ನು ರೂಪಿಸಿದ್ದು, ಸಾರ್ವಜನಿಕರು ಕೂಡ ಸೊಳ್ಳೆ ಉತ್ಪತ್ತಿಯ ತಾಣಗಳನ್ನು ನಾಶಪಡಿಸುವ ಮೂಲಕ ಎಚ್ಚರಿಕೆ ವಹಿಸಬೇಕು. ಡೆಂಗ್ಯೂ ಗುಣಮುಖವಾಗುವ ಜ್ವರವಾದ್ದರಿಂದ ಯಾರೂ ಗಾಬರಿಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಶಶಿಕಾಂತ ಸೆಂಥಿಲ್ ತಿಳಿಸಿದರು.

ಜಿಲ್ಲೆಯ ವಿವಿಧ ಖಾಸಗಿ-ಸರಕಾರಿ ಆಸ್ಪತ್ರೆಗಳ ಪ್ರಮುಖರ ಜತೆಗೆ ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ವಿಶೇಷ ಸಭೆಯ ಬಳಿಕ ಪತ್ರಿಕಾಗೋಷ್ಠಿ ನಡೆಸಿ ಅವರು ಮಾಹಿತಿ ನೀಡಿದರು.

352 ಡೆಂಗ್ಯೂ ಪ್ರಕರಣ

ಜಿಲ್ಲೆಯಾದ್ಯಂತ ಈ ವರೆಗೆ 352 ಡೆಂಗ್ಯೂ ಪಾಸಿಟಿವ್‌ ಪ್ರಕರಣಗಳು ವರದಿಯಾಗಿವೆ. ಈ ಪೈಕಿ 200ರಷ್ಟು ಪ್ರಕರಣ ವರದಿಯ ಹಂತದಲ್ಲಿದ್ದು, 139 ಚಿಕಿತ್ಸಾ ಹಂತದಲ್ಲಿವೆ. ಉಳಿದ ಪ್ರಕರಣಗಳು ಗುಣಮುಖವಾಗಿದೆ. ಕಳೆದ ತಿಂಗಳು (ಜೂನ್‌) 75 ಪ್ರಕರಣಗಳು ಡೆಂಗ್ಯೂ ಪಾಸಿಟಿವ್‌ ಪತ್ತೆಯಾಗಿದ್ದು, ಜುಲೈಯಲ್ಲಿ ಪ್ರಮಾಣ ಏರಿಕೆಯಾಗಿದೆ. ಆದರೆ ಗಾಬರಿಪಡುವ ಅಗತ್ಯವಿಲ್ಲ. ಕಳೆದ ವರ್ಷ ಜೂನ್‌ನಲ್ಲಿ 230 ಪಾಸಿಟಿವ್‌ ಪ್ರಕರಣಗಳಿದ್ದವು ಎಂದರು.

ಜಾಗೃತಿಗೆ 200 ತಂಡ

ಪಾಲಿಕೆ ವ್ಯಾಪ್ತಿಯ ಪ್ರತೀ ಮನೆಗೆ ಭೇಟಿ ನೀಡಿ ಮಾಹಿತಿ ನೀಡಿ ಅರಿವು ಮೂಡಿಸಲು 200 ತಂಡಗಳನ್ನು ರಚಿಸಲು ನಿರ್ಧರಿಸಲಾಗಿದೆ. ಆರೋಗ್ಯ ಕಾರ್ಯಕರ್ತರು ಹಾಗೂ ಪಾಲಿಕೆ ಸಿಬಂದಿ ಮನೆ ಮನೆಗೆ ಭೇಟಿ ನೀಡಿ ಜ್ವರ ಪೀಡಿತರಿದ್ದರೆ ತಪಾಸಣೆ ನಡೆಸಲಿದ್ದಾರೆ. ಸೊಳ್ಳೆ ನಿರ್ಮೂಲನಕ್ಕೆ ಪ್ರತೀ ಮನೆಯ ಒಳ-ಹೊರಗೆ ಫಾಗಿಂಗ್‌ ನಡೆಸಲು ನಿರ್ಧರಿಸಲಾಗಿದೆ. ಎಂದು ಜಿಲ್ಲಾಧಿಕಾರಿ ಕೋರಿದರು.

ಡೆಂಗ್ಯೂ ಹರಡುವ ಸೊಳ್ಳೆಗಳು ಶುದ್ಧ ನೀರಿನ ಲ್ಲಿಯೇ ಇರುತ್ತವೆ. ಆದ್ದರಿಂದ ಮಳೆ ನೀರನ್ನು ಅಂಗಳ,ತಾರಸಿ, ಬಕೆಟ್‌ಗಳಲ್ಲಿ ತುಂಬಿಸಿಡುವ ಕ್ರಮವನ್ನು ಕೈಬಿಡಬೇಕು. ಮನೆಯ ಒಳಗೆ ನೀರು ಸಂಗ್ರಹಿಸುವಾ ಗಲೂ ವಿಶೇಷ ಎಚ್ಚರ ಬೇಕು. ಎಲ್ಲಿಯೂ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಮೈಮುಚ್ಚುವ ಉಡುಪು ಧರಿಸಿದರೆ ಉತ್ತಮ ಎಂದು ಜಿಲ್ಲಾಧಿಕಾರಿ ಹೇಳಿದರು.

ಟಾಪ್ ನ್ಯೂಸ್

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.