ಕಾವೂರಿನಿಂದ ಡಾ| ಭರತ್ ಶೆಟ್ಟಿ ಪಾದಯಾತ್ರೆ
Team Udayavani, Apr 24, 2018, 12:14 PM IST
ಕಾವೂರು : ಮಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ| ಭರತ್ ಶೆಟ್ಟಿ ವೈ. ಅವರು ಕಾವೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸೋಮವಾರ ಬೆಳಗ್ಗೆ ಪೂಜೆ ಸಲ್ಲಿಸಿ ನಾಮ ಪತ್ರ ಸಲ್ಲಿಸಲು ಪಾದಯಾತ್ರೆ ಮೂಲಕ ಮಹಾನಗರ ಪಾಲಿಕೆಯಲ್ಲಿರುವ ಚುನಾವಣಾ ಕಚೇರಿಗೆ ತೆರಳಿದರು.
ಬೆಳಗ್ಗೆ 9 ಗಂಟೆಗೆ ಮಹಾಲಿಂಗೇಶ್ವರನಿಗೆ ಡಾ| ಭರತ್ ಶೆಟ್ಟಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ದೇವಸ್ಥಾನದಿಂದ ಕಾವೂರು, ಬೊಂದೆಲ್, ಯೆಯ್ನಾಡಿ ಮಾರ್ಗವಾಗಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವರೆಗೆ ಸುಮಾರು ಐದಾರು ಸಾವಿರ ಕಾರ್ಯಕರ್ತರೊಂದಿಗೆ ಪಾದಯಾತ್ರೆ ಮೂಲಕ ಆಗಮಿಸಿ ಬಳಿಕ ವಾಹನದಲ್ಲಿ ಆಗಮಿಸಿದರು.
ಇದಕ್ಕೂ ಮುನ್ನ ದೇವಸ್ಥಾನದ ಬಳಿ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಿದ ಡಾ| ಭರತ್ ಶೆಟ್ಟಿ ಅವರು ಮಂಗಳೂರು ಉತ್ತರ ಕ್ಷೇತ್ರದಲ್ಲಿ ಬಿಜೆಪಿ ಆಡಳಿತವಿದ್ದಾಗ ಉತ್ತಮ ಅಭಿವೃದ್ಧಿ ಕಾರ್ಯಗಳಾಗಿವೆ. ಯಡಿಯೂರಪ್ಪ ಸರಕಾರ ಹೆಚ್ಚಿನ ಅನುದಾನ ಒದಗಿಸಿ ಅಭಿವೃದ್ಧಿಗೆ ಸಹಕರಿಸಿದೆ ಎಂದರು. ಬಿಜೆಪಿ ಕಾರ್ಯಕರ್ತರ ಪಕ್ಷ, ಈಗಾಗಲೇ ಮನೆ ಮನೆ ಭೇಟಿಯಂತಹ ಕೆಲಸಗಳನ್ನು ಹಗಲಿರುಳು ಮಾಡುತ್ತಿದ್ದಾರೆ.
ಅಭಿವೃದ್ಧಿಗೆ ವಿಶೇಷ ಒತ್ತು
ಕಳೆದ ಐದು ವರ್ಷಗಳಲ್ಲಿ ನಡೆದಂತಹ ಅಹಿತಕರ ಘಟನೆಗಳಿಂದ ಜನತೆ ಬೇಸತ್ತಿದ್ದು, ಈ ಬಾರಿ ಬಿಜೆಪಿಗೆ ಆಶೀರ್ವಾದ ಮಾಡಲಿದ್ದಾರೆ. ಮಂಗಳೂರು ಉತ್ತರ ಕ್ಷೇತ್ರದಲ್ಲಿ ಬಿಜೆಪಿಯು ಅಭಿವೃದ್ಧಿಗಾಗಿ ವಿಶೇಷ ಪ್ರಣಾಳಿಕೆ ಸಿದ್ಧಪಡಿಸಿದ್ದು ಅದರಂತೆ ನಡೆದುಕೊಳ್ಳಲಿದೆ ಎಂದರು.
ಸಂಸದ ಹಾಗೂ ರಾಷ್ಟ್ರೀಯ ಬಿಜೆಪಿ ಉಪಾಧ್ಯಕ್ಷ ಓಂ ಪ್ರಕಾಶ್ ಮಾಥುರ್, ರಜನಿ ದುಗ್ಗಣ್ಣ, ಜನಾರ್ದನ ಗೌಡ, ರುಕ್ಮಯ್ಯ ಪೂಜಾರಿ, ರಣ್ದೀಪ್ ಕಾಂಚನ್, ರಘುವೀರ್ ಪಣಂಬೂರು, ಮಧುಕಿರಣ್, ಗಣೇಶ್ ಹೊಸಬೆಟ್ಟು, ಗುಣಶೇಖರ ಶೆಟ್ಟಿ, ಸುಮಿತ್ರಾಕರಿಯ, ಸುಧಾಕರ ಅಡ್ಯಾರ್, ಅಶೋಕ್ ಕೃಷ್ಣಾಪುರ ಮತ್ತಿತರರು ಭಾಗವಹಿಸಿದ್ದರು.
ಪಾದಯಾತ್ರೆ
ಬಿಳಿ ಅಂಗಿ, ಕಪ್ಪು ಬಣ್ಣದ ಪ್ಯಾಂಟ್ ಧರಿಸಿ ಸರಳ ರೀತಿಯಲ್ಲಿ ಪಾಲ್ಗೊಂಡ ಬಿಜೆಪಿ ಅಭ್ಯರ್ಥಿ ಡಾ| ಭರತ್ ಶೆಟ್ಟಿ ವೈ. ಅವರು ಕಾರ್ಯಕರ್ತರೊಂದಿಗೆ ಪಾದಯಾತ್ರೆಯಲ್ಲಿ ಪಾಲ್ಗೊಂಡರಲ್ಲದೆ, ಮೆರವಣೆಗೆಯ ಅಕ್ಕಪಕ್ಕದಲ್ಲಿ ನಿಂತು ವೀಕ್ಷಿಸುತ್ತಿದ್ದ ಮತದಾರರ ಬಳಿಗೆ ತೆರಳಿ ಕ್ಷೇಮ ಸಮಾಚಾರ ವಿಚಾರಿಸಿದರು. ಬಿಜೆಪಿ, ಪ್ರಧಾನಿ ನರೇಂದ್ರ ಮೋದಿ, ಅಧ್ಯಕ್ಷ ಅಮಿತ್ ಶಾ ಅವರಿಗೆ ಜೈಕಾರ ಹಾಕುತ್ತಾ ಕಾರ್ಯಕರ್ತರು ಸಾಗಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು