ಪ್ರಾಥಮಿಕ ಶಿಕ್ಷಣ ಮೌಲ್ಯಯುತ: ಡಾ| ಹೆಗ್ಗಡೆ

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 365 ಗ್ರಾಮೀಣ ಶಾಲೆಗಳಿಗೆ 2,770 ಬೆಂಚ್‌-ಡೆಸ್ಕ್ ಕೊಡುಗೆ

Team Udayavani, Dec 5, 2022, 5:20 AM IST

ಪ್ರಾಥಮಿಕ ಶಿಕ್ಷಣ ಮೌಲ್ಯಯುತ: ಡಾ| ಹೆಗ್ಗಡೆ

ಬೆಳ್ತಂಗಡಿ : ವ್ಯಕ್ತಿತ್ವ ವಿಕಸನ ಹಾಗೂ ಮಗುವೊಂದು ಸಂಸ್ಕಾರ ಯುಕ್ತ ಪ್ರಜೆಯಾಗಿ ಬಾಳಲು ಪ್ರಾಥಮಿಕ ಹಂತದ ಶಿಕ್ಷಣ ಅಡಿಪಾಯವಾಗಿದೆ. ಈ ನೆಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನೀಡುವ ಚತುರ್ದಾನಗಳೊಂದಿಗೆ ರಾಜ್ಯದ ಗ್ರಾಮೀಣ ಭಾಗಗಳ ಶಾಲೆಗಳಲ್ಲಿ ಪೀಠೊಪಕರಣ ಕೊರತೆಯನ್ನು ಮನಗಂಡು ಕಳೆದ 10 ವರ್ಷಗಳಿಂದ 10 ಸಾವಿರ ಶಾಲೆಗಳಿಗೆ 65 ಸಾವಿರ ಜತೆ ಬೆಂಚ್‌-ಡೆಸ್ಕ್ ಪೂರೈಸಲಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಹೇಳಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿ ವೃದ್ಧಿ ಯೋಜನೆಯ ಜ್ಞಾನದೀಪ ಕಾರ್ಯಕ್ರಮದಡಿ ಶಿವಮೊಗ್ಗ, ಚಿತ್ರದುರ್ಗ, ಚಿಕ್ಕಮಗಳೂರು ಮತ್ತು ದಾವಣಗೆರೆ ಜಿಲ್ಲೆಗಳ 365 ಗ್ರಾಮೀಣ ಸರಕಾರಿ ಶಾಲೆಗಳಿಗೆ 2.50 ಕೋ.ರೂ. ಮೊತ್ತದ 2,770 ಬೆಂಚ್‌-ಡೆಸ್ಕ್ಗಳನ್ನು ಹಸ್ತಾಂತರಿಸುವ ಕಾರ್ಯಕ್ರಮಕ್ಕೆ ರವಿವಾರ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು.

ದಾನ ಸಿಕ್ಕ ವಸ್ತುವಿನ ಮೇಲಿರಲಿ ಪ್ರೀತಿ
ಸುದೀರ್ಘ‌ ಬಾಳಿಕೆ ಬರುವ ಹಾಗೂ ವಿದ್ಯಾರ್ಥಿಗಳಿಗೆ ಸುಲಭದಲ್ಲಿ ಸಾಗಾಟಕ್ಕೆ ಅನುಕೂಲವಾಗುವ ನೆಲೆಯಲ್ಲಿ ಹಗುರವಾದ ಫೈಬರ್‌ ಬೆಂಚು, ಡೆಸ್ಕ್ಗಳನ್ನು ಒದಗಿಸಲಾಗುತ್ತದೆ. ಉಜಿರೆಯ ಲಕ್ಷ್ಮೀ ಹಾಗೂ ಚಿನ್ಮಯಿ ಇಂಡಸ್ಟ್ರೀಸ್‌ ತಯಾರಿಸಿ ವಿತರಿಸುವ ಜವಾಬ್ದಾರಿಯನ್ನು ಹೊತ್ತಿದೆ. ದಾನ ವಾಗಿ ನೀಡುವುದಕ್ಕೂ ಮಹತ್ವ ಸಿಗಬೇಕೆನ್ನುವ ನೆಲೆಯಲ್ಲಿ ಶಾಲಾ ಆಡಳಿತ ಮಂಡಳಿ ಶೇ. 20 ವೆಚ್ಚವನ್ನು ಭರಿಸಿದರೆ ಕ್ಷೇತ್ರ ದಿಂದ ಶೇ. 80 ಸಹಾಯಧನದಲ್ಲಿ ಪೀಠೊಪಕರಣ ವಿತರಿಸುತ್ತಿದ್ದೇವೆ. ಒಂದು ಶಾಲೆಗೆ 8ರಿಂದ 10 ಪೀಠೊ ಪಕರಣ ನೀಡುತ್ತಿದ್ದು, ಮಕ್ಕಳು ದುರುಪಯೋಗ ಪಡಿಸದೆ ಸದು ಪ ಯೋಗಪಡಿಸಿಕೊಳ್ಳಿ ಎಂದು ಕಿವಿಮಾತು ಹೇಳಿದರು.

ಹೇಮಾವತಿ ವೀ. ಹೆಗ್ಗಡೆ, ಡಿ. ಹರ್ಷೇಂದ್ರ ಕುಮಾರ್, ಎಸ್‌ಕೆಡಿ ಆರ್‌ಡಿಪಿ ಮುಖ್ಯಕಾರ್ಯ ನಿರ್ವಹಣಾಧಿಕಾರಿ ಡಾ| ಎಲ್‌.ಎಚ್‌. ಮಂಜುನಾಥ, ನಿರ್ವಹಣಾಧಿಕಾರಿ ಅನಿಲ್‌ ಕುಮಾರ್‌, ಸಮುದಾಯ ಅಭಿವೃದ್ಧಿ ವಿಭಾಗದ ಆನಂದ ಸುವರ್ಣ, ಮೂಡಿಗೆರೆ ಬಿಇಒ ಹೇಮಂತ್‌, ಹೆಗ್ಗಡೆ ಅವರ ಆಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿ, ತಾಂತ್ರಿಕ ಯೋಜನಾಧಿಕಾರಿ ಪುಷ್ಪರಾಜ್‌, ಪೀಠೊಪಕರಣ ತಯಾರಕರಾದ ಮೋಹನ ಕುಮಾರ್‌, ಸುಂದರ ಗೌಡ ಮತ್ತು ಅಶ್ವತ್ಥ್ ಮೊದಲಾದವರು ಉಪಸ್ಥಿತರಿದ್ದರು.

21.22 ಕೋಟಿ ರೂ. ಪೂರಕ ಅನುದಾನ
ಎಸ್‌ಕೆಡಿಆರ್‌ಡಿಪಿಯ ಜ್ಞಾನದೀಪ ಶಿಕ್ಷಣ ಕಾರ್ಯಕ್ರಮದಡಿ ಸಮುದಾಯ ಅಭಿವೃದ್ಧಿ ವಿಭಾಗದಿಂದ ಪ್ರತೀ ವರ್ಷ ಸುಮಾರು 400 ಶಾಲೆಗಳಿಗೆ ಕುಡಿಯುವ ನೀರಿನ ವ್ಯವಸ್ಥೆ, ವಿದ್ಯುತ್‌ ಸಂಪರ್ಕ, ಶೌಚಾಲಯ ನಿರ್ಮಾಣ, ಶಿಕ್ಷಕರ ನೇಮಕಾತಿ, ಶಾಲಾ ಕಟ್ಟಡ ನಿರ್ಮಾಣ, ಆವರಣ ಗೋಡೆ, ಆಟದ ಮೈದಾನ ರಚನೆ, ಕ್ರೀಡಾ ಸಾಮಗ್ರಿ ಪೂರೈಕೆ ಮೊದಲಾದ ಮೂಲ ಸೌಲಭ್ಯ ಒದಗಿಸಲಾಗುತ್ತದೆ. ಇದಕ್ಕಾಗಿ ಈವರೆಗೆ 23.29 ಕೋ.ರೂ. ಒದಗಿಸಲಾಗಿದೆ. ಪ್ರಸ್ತುತ ವರ್ಷ 750 ಸ್ವಯಂಸೇವಕ ಶಿಕ್ಷಕ/ಶಿಕ್ಷಕಿಯರನ್ನು ನೇಮಿಸಲಾಗಿದೆ. ರಾಜ್ಯದಲ್ಲಿ ಈ ವರೆಗೆ 10,334 ಶಾಲೆಗಳಿಗೆ 65,144 ಬೆಂಚು-ಡೆಸ್ಕ್ಗಳನ್ನು ಪೂರೈಸಿದ್ದು ಇದಕ್ಕಾಗಿ 21.22 ಕೋಟಿ ರೂ. ಪೂರಕ ಅನುದಾನ ನೀಡಲಾಗಿದೆ ಎಂದು ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ತಿಳಿಸಿದರು.

ಟಾಪ್ ನ್ಯೂಸ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೂಜಿಮಲೆಗೆ ಭೇಟಿ ನೀಡಿದ್ದು 4 ನಕ್ಸಲರು: ಸಶಸ್ತ್ರಧಾರಿ ತಲಾ ಇಬ್ಬರು ಮಹಿಳೆಯರು,ಪುರುಷರ ಸಂಚಾರ

ಕೂಜಿಮಲೆಗೆ ಭೇಟಿ ನೀಡಿದ್ದು 4 ನಕ್ಸಲರು: ಸಶಸ್ತ್ರಧಾರಿ ತಲಾ ಇಬ್ಬರು ಮಹಿಳೆಯರು,ಪುರುಷರ ಸಂಚಾರ

Arecanut Market  ಅಡಿಕೆ ಧಾರಣೆ ಏರಿಕೆ :170ಕ್ಕೆ ತಲುಪಿದ ಕೊಕ್ಕೊ

Arecanut Market ಅಡಿಕೆ ಧಾರಣೆ ಏರಿಕೆ :170ಕ್ಕೆ ತಲುಪಿದ ಕೊಕ್ಕೊ

Belthangady ಅಪಘಾತ ಪ್ರಕರಣ: ಚಾಲಕನಿಗೆ ಶಿಕ್ಷೆ

Belthangady ಅಪಘಾತ ಪ್ರಕರಣ: ಚಾಲಕನಿಗೆ ಶಿಕ್ಷೆ

Bus ಕಿಟಕಿಯಿಂದ ಇಳಿಯಲು ಯತ್ನಿಸಿದ್ದ‌ ವ್ಯಕ್ತಿ ರಸ್ತೆಗೆ ಬಿದ್ದು ಸಾವು

Bus ಕಿಟಕಿಯಿಂದ ಇಳಿಯಲು ಯತ್ನಿಸಿದ್ದ‌ ವ್ಯಕ್ತಿ ರಸ್ತೆಗೆ ಬಿದ್ದು ಸಾವು

Bantwal ನೇತ್ರಾವತಿ ನದಿ ನೀರಿಗೆ ಬಿದ್ದು ಯುವಕ ಸಾವು

Bantwal ನೇತ್ರಾವತಿ ನದಿ ನೀರಿಗೆ ಬಿದ್ದು ಯುವಕ ಸಾವು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.