‘ಹೈನುಗಾರಿಕೆಗೆ ಡಾ| ಕುರಿಯನ್ ಕೊಡುಗೆ ಅಪಾರ’
Team Udayavani, Nov 23, 2017, 10:32 AM IST
ಮಹಾನಗರ: ಡಾ| ವರ್ಗೀಸ್ ಕುರಿಯನ್ ಅವರ 96ನೇ ಜನ್ಮದಿನಾಚರಣೆ ಅಂಗವಾಗಿ ಕೇರಳದಿಂದ ಗುಜರಾತಿನ ಆನಂದ್ ತನಕ ಹಮ್ಮಿಕೊಂಡಿದ್ದ ಬೈಕ್ ರ್ಯಾಲಿಯು ಮಂಗಳವಾರ ಬೆಳಗ್ಗೆ ಮಂಗಳೂರಿನ ದ.ಕ. ಹಾಲು ಒಕ್ಕೂಟಕ್ಕೆ ಆಗಮಿಸಿದ್ದು, ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಡಾ| ಬಿ.ವಿ. ಸತ್ಯನಾರಾಯಣ ಸ್ವಾಗತಿಸಿದರು.
ಒಕ್ಕೂಟದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಎಲ್ಲ ಬೈಕ್ ಸವಾರರನ್ನು ಹೂಗುಚ್ಛ ನೀಡಿ ಸ್ವಾಗತಿಸಿ ಮಾತನಾಡಿದ ಡಾ| ಸತ್ಯನಾರಾಯಣ, ಡಾ| ಕುರಿಯನ್ ಅವರು ದೇಶಕ್ಕೆ ನೀಡಿದ ಕೊಡುಗೆಯನ್ನು ಪ್ರತಿಯೊಬ್ಬರು ನೆನಪಿನಲ್ಲಿಡಬೇಕು. ಭಾರತವು ಹಾಲು ಉತ್ಪಾದನೆಯಲ್ಲಿ ಮೊದಲ ಸ್ಥಾನದಲ್ಲಿರುವುದನ್ನು ತಿಳಿಸಿದರು.
ರ್ಯಾಲಿಯನ್ನು ಡ್ರೋಣ್ ಕೆಮರಾ ಮೂಲಕ ಚಿತ್ರೀಕರಿಸಿದ್ದು, ಮುಂದಿನ ದಿನಗಳಲ್ಲಿ ಡಾ| ಕುರಿಯನ್ ಬಗ್ಗೆ ಸಾಕ್ಷ್ಯ ಚಿತ್ರವನ್ನು ಗುಜರಾತ್ ಮಿಲ್ಕ್ ಫೆಡರೇಶನ್ ನಿರ್ಮಾಣ ಮಾಡುವ ವಿಚಾರವನ್ನು ತಿಳಿಸಿದರು.
ವ್ಯವಸ್ಥಾಪಕರಾದ ಜಿ. ರಾಯ್ಕರ್, ಶಿವಶಂಕರ ಸ್ವಾಮಿ, ನಿತ್ಯಾನಂದ ಭಕ್ತ, ಸುಮಾರು 40 ಮಂದಿ ಹಾಲು ಉತ್ಪಾ
ದಕರು, ಸೈಂಟ್ ಜೋಸೆಫ್ ಶಾಲೆಯ ವಿದ್ಯಾರ್ಥಿಗಳು, ಅಧ್ಯಾಪಕರು ಮೊದಲಾದವರು ಉಪಸ್ಥಿತರಿದ್ದರು. ಮಾರುಕಟ್ಟೆ ವಿಭಾಗದ ಹೇಮಶೇಖರಪ್ಪ ಎಸ್.ಪಿ. ಸ್ವಾಗತಿಸಿದರು. ಉಪ ವ್ಯವಸ್ಥಾಪಕ ಲಕ್ಕಪ್ಪ ವಂದಿಸಿದರು. ಕೆ. ಸುಬ್ಬರಾವ್ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
Pilikula: “ಫ್ಯಾನ್-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!
Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ
Moodabidri: ಬೃಹತ್ ಜೈನ ಆರಾಧನಾ ಕೋಶದ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ
Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ
MUST WATCH
ಹೊಸ ಸೇರ್ಪಡೆ
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ