ತನಿಖೆಯಲ್ಲಿ ಪ್ರಗತಿ: ಕಮಿಷನರ್‌ ಡಾ| ಹರ್ಷ


Team Udayavani, Jan 22, 2020, 6:54 AM IST

harsha

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೋಮವಾರ ಪತ್ತೆಯಾಗಿದ್ದ ಶಂಕಿತ ಸ್ಫೋಟಕದ ಕುರಿತಂತೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡಗಳು ಹಲವಾರು ಮಂದಿಯನ್ನು ತನಿಖೆಗೆ ಒಳಪಡಿಸಿದ್ದು, ಸಾಕಷ್ಟು ಪ್ರಗತಿ ಸಾಧಿಸಿವೆ ಎಂದು ಮಂಗಳೂರು ಪೊಲೀಸ್‌ ಆಯುಕ್ತ ಡಾ| ಹರ್ಷ ತಿಳಿಸಿದ್ದಾರೆ.

ಹಲವಾರು ಮಂದಿ ಶಂಕಿತ ವ್ಯಕ್ತಿಗಳನ್ನು ಈಗಾಗಲೇ ಪ್ರಶ್ನಿಸಿದ್ದು, ಹಲವಾರು ಶಂಕಿತ ಸ್ಥಳಗಳಲ್ಲಿ ಶೋಧ ನಡೆಸಲಾಗಿದೆ. ಶಂಕಿತನ ಗುರುತು ಪತ್ತೆಗಾಗಿ ಶೋಧ ಆರಂಭವಾಗಿದೆ ಎಂದು ವಿವರಿಸಿದ್ದಾರೆ.

ರಿಕ್ಷಾ ಚಾಲಕ ವಶಕ್ಕೆ
ವಿಮಾನ ನಿಲ್ದಾಣಕ್ಕೆ ತೆರಳಲು ಮತ್ತು ಅಲ್ಲಿಂದ ನಿರ್ಗಮಿಸಲು ಆರೋಪಿ ಬಳಸಿದನೆನ್ನಲಾದ ಆಟೊ ರಿಕ್ಷಾ ಮತ್ತು ರಿಕ್ಷಾ ಚಾಲಕನನ್ನು ಕೂಡ ವಶಕ್ಕೆ ಪಡೆದಿದ್ದು, ಈ ಕುರಿತ ವಿಚಾರಣೆ ಕೂಡ ಪ್ರಗತಿಯಲ್ಲಿದೆ.

ಹಾಗೆಯೇ ಆರೋಪಿಯು ಶಂಕಿತ ಬ್ಯಾಗನ್ನು ಬಿಟ್ಟುಹೋದ ಪ್ರಮುಖ ಘಟನೆಯ ಬಳಿಕ ಏರ್‌ಪೋರ್ಟ್‌ ಟರ್ಮಿನಲ್‌ ಮ್ಯಾನೇಜರ್‌ಗೆ ಬಂದ ಬೆದರಿಕೆ ಕರೆಗೂ ಶಂಕಿತ ಬ್ಯಾಗ್‌ ಪತ್ತೆ ಪ್ರಕರಣಕ್ಕೂ ಸಾಮ್ಯತೆ ಇದೆಯೇ ಎನ್ನುವ ಕುರಿತಂತೆ ತಾಳೆ ಹಾಕಿ ನೋಡುತ್ತಿದ್ದೇವೆ ಎಂದು ಆಯುಕ್ತರು ವಿವರಿಸಿದ್ದಾರೆ.

ಹಾಗೆಯೇ ಈ ಹಿಂದೆ ಇದೇ ರೀತಿ ಬೇರೆ ಬೇರೆ ವಿಮಾನ ನಿಲ್ದಾಣಗಳಿಗೆ ಬಾಂಬ್‌ ಬೆದರಿಕೆ ಕರೆ ಮಾಡಿದವರ ಚಹರೆಗೂ ಪ್ರಸ್ತುತ ಈ ಪ್ರಕರಣದ ಆರೋಪಿಯ ಚಹರೆಗೂ ಯಾವುದೇ ಸಾಮ್ಯತೆ ಇದೆಯೇ ಎನ್ನುವುದನ್ನೂ ಸೂಕ್ಷ್ಮವಾಗಿ ಪರಿಶೀ ಲಿಸಲಾಗುತ್ತಿದೆ ಎಂದಿದ್ದಾರೆ.

ಈಗಾಗಲೇ ಹಲವಾರು ವಿಮಾನ ನಿಲ್ದಾಣಗಳಿಂದ ಈ ರೀತಿಯ ಮಾಹಿತಿಗಳನ್ನು ಕ್ರೋಡೀಕರಿಸಿದ್ದೇವೆ. ಸಾರ್ವಜನಿಕರು ಈ ಚಹರೆಯನ್ನು ಹೋಲುವಂತಹ ಛಾಯಾಚಿತ್ರಗಳನ್ನು, ವೀಡಿಯೋಗಳನ್ನು ಕಳುಹಿಸಿದ್ದಾರೆ. ಅವೆಲ್ಲವುಗಳನ್ನು ತನಿಖಾ ತಂಡ ಬಹಳ ಸೂಕ್ಷ್ಮವಾಗಿ ಅವಲೋಕಿಸುತ್ತಿದೆ ಎಂದು ತಿಳಿಸಿದ್ದಾರೆ.

ಎಫ್ಎಸ್‌ಎಲ್‌ಗೆ ರವಾನೆ
ತನಿಖೆಯಲ್ಲಿ ಭಾಗಿಯಾಗಿರುವ ಟೆಕ್ನಿಕಲ್‌ ತಂಡ ಬಿಡಿಡಿಎಸ್‌, ಬಾಂಬ್‌ ನಿಷ್ಕ್ರಿಯವಾದ ಬಳಿಕ ಅವಶೇಷಗಳನ್ನು ಎಫ್‌ಎಸ್‌ಎಲ್‌ಗೆ ಕಳುಹಿಸಿ ಕೊಟ್ಟಿದೆ. ಸ್ಫೋಟಕದ ಸ್ವರೂಪ, ಅದು ಸ್ಫೋಟ ಗೊಂಡಿದ್ದರೆ ಪರಿಣಾಮ ಏನಾಗುತ್ತಿತ್ತು ಇತ್ಯಾದಿಗಳ ಕುರಿತಂತೆ ವರದಿಯನ್ನು ಎಫ್ಎಸ್‌ಎಲ್‌ ಸಲ್ಲಿಸಲಿದೆ ಎಂದಿದ್ದಾರೆ.
ಬಾಂಬ್‌ ಪತ್ತೆ ಮತ್ತು ಬಾಂಬ್‌ ನಿಷ್ಕ್ರಿಯ ದಳದವರು ಬ್ಯಾಗ್‌ನಲ್ಲಿದ್ದ ವಸ್ತು ಕಚ್ಚಾ ರೀತಿಯ ಸ್ಫೋಟಕ ಇದ್ದಿರಬಹುದು ಎಂಬುದಾಗಿ ಅನು ಭವದಿಂದ ಅಭಿಪ್ರಾಯಪಟ್ಟಿದ್ದಾರೆ. ಇದನ್ನು ಎಲ್ಲ ಆಯಾಮಗಳಿಂದ ಪರಿಶೀಲಿಸುತ್ತಿದ್ದೇವೆ. ಆದಷ್ಟು ಶೀಘ್ರ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗುತ್ತೇವೆ ಎಂಬ ಭರವಸೆ ಇದೆ ಎಂದು ವಿವರಿಸಿದ್ದಾರೆ.

12 ಮಂದಿ ಶಂಕಿತರು
ಈಗಾಗಲೇ 12 ಮಂದಿಯನ್ನು ಶಂಕಿತರ ಪಟ್ಟಿಯಲ್ಲಿ ಗುರುತಿಸಲಾ ಗಿದ್ದು, ಶಂಕಿತ ವ್ಯಕ್ತಿಗಳಿಗೆ ಅವರ ಮನೆ ಹಾಗೂ ಇನ್ನಿತರ ಪ್ರದೇಶದಲ್ಲಿ ಶೋಧ ನಡೆಸಲಾಗುತ್ತಿದೆ.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.