ಡಾ| ಎಂ.ಎನ್. ರಾಜೇಂದ್ರ ಕುಮಾರ್ಗೆ ಅಭಿನಂದನೆ
Team Udayavani, Aug 17, 2017, 6:45 AM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರಿಗೆ ಬ್ಯಾಂಕಿಂಗ್ ಪ್ರೋಂಟಿಯರ್ ಮುಂಬಯಿ ವತಿಯಿಂದ ಬೆಸ್ಟ್ ಚೇರ್ಮನ್ ನ್ಯಾಶನಲ್ ಅವಾರ್ಡ್ ಲಭಿಸಿರುವ ಹಿನ್ನೆಲೆಯಲ್ಲಿ ರಾಜೇಂದ್ರ ಕುಮಾರ್ ಅವರನ್ನು ಎಸ್ಸಿಡಿಸಿಸಿ ಬ್ಯಾಂಕಿನ ನೌಕರರ ಒಕ್ಕೂಟದ ವತಿಯಿಂದ ಅಧ್ಯಕ್ಷ ಜಯರಾಜ್ ಅವರು ಬುಧವಾರ ಬ್ಯಾಂಕಿನಲ್ಲಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಬ್ಯಾಂಕಿನ ನಿರ್ದೇಶಕರಾದ ಟಿ.ಜಿ. ರಾಜಾರಾಮ್ ಭಟ್, ಡಾ| ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು, ಶಶಿಕುಮಾರ್ ರೈ, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಒಕ್ಕೂಟದ ಅಧ್ಯಕ್ಷ ಹರೀಶ್ ಆಚಾರ್, ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸತೀಶ್ ಎಸ್. ಹಾಗೂ ನೌಕರರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಜೋವೀನ್ ಪ್ರಕಾಶ್ ಡಿ’ಸೋಜಾ, ಪದಾಧಿಕಾರಿಗಳಾದ ರಾಜೇಶ್ ಶೆಟ್ಟಿ, ಕರುಣಾಕರ್, ಅಶೋಕ್ ಶೆಟ್ಟಿ, ಜಯಂತ್ ಕುಮಾರ್, ವಿಶ್ವನಾಥ್ ಶೆಟ್ಟಿ ಉಪಸ್ಥಿತರಿದ್ದರು.