ಡಾ| ಎಂ.ಎನ್‌.ಆರ್‌. ನೇತೃತ್ವದ ಬಳಗಕ್ಕೆ ಗೆಲುವು 


Team Udayavani, Mar 22, 2019, 8:33 PM IST

2203mlr39-scdcc.jpg

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನ ಆಡಳಿತ ಮಂಡಳಿಯ 16 ನಿರ್ದೇಶಕ ಸ್ಥಾನಗಳಿಗೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ಡಾ| ಎಂ.ಎನ್‌. ರಾಜೇಂದ್ರ ಕುಮಾರ್‌ ನೇತೃತ್ವದ ಸಹಕಾರ ಬಳಗವು ಎಲ್ಲ ಸ್ಥಾನ ಗೆದ್ದು ದಾಖಲೆ ನಿರ್ಮಿಸಿದೆ. 14 ಸ್ಥಾನಕ್ಕೆ ಸ್ಪರ್ಧಿಸಿದ್ದ ಸಹಕಾರಿ ಭಾರತಿಯ ಎಲ್ಲ ಅಭ್ಯರ್ಥಿಗಳು ಸೋತಿದ್ದಾರೆ. 

ಕೊಡಿಯಾಲಬೈಲ್‌ನ ಬ್ಯಾಂಕಿನ ಪ್ರಧಾನ ಕಚೇರಿಯಲ್ಲಿ ಬೆಳಗ್ಗೆ 9ರಿಂದ 4ರ ವರೆಗೆ ಮತ ದಾನ ನಡೆದಿತ್ತು. ಮಂಗಳೂರು ಎಸಿ  ರವಿಚಂದ್ರ ಚುನಾವಣ ಅಧಿಕಾರಿಯಾಗಿದ್ದರು. ಫ‌ಲಿತಾಂಶ ಘೋಷಣೆ ಯಾಗುತ್ತಿದ್ದಂತೆ ಸಹಕಾರ ಬಳಗದ ಬೆಂಬಲಿಗರು ಪಟಾಕಿ ಸಿಡಿಸಿ ಸಂಭ್ರಮಿಸಿದರು.
 
ಡಾ| ಎಂ.ಎನ್‌. ರಾಜೇಂದ್ರ ಕುಮಾರ್‌ ನೇತೃತ್ವದ 16 ಸ್ಪರ್ಧಿಗಳಾದ ಭಾಸ್ಕರ್‌ ಎಸ್‌. ಕೋಟ್ಯಾನ್‌, ವಿನಯ್‌ ಕುಮಾರ್‌ ಸೂರಿಂಜೆ, ಕೆ. ಹರೀಶ್ಚಂದ್ರ, ಎಸ್‌. ರಾಜು ಪೂಜಾರಿ, ಎಂ. ಮಹೇಶ್‌ ಹೆಗ್ಡೆ, ದೇವಿಪ್ರಸಾದ್‌ ಶೆಟ್ಟಿ, ಬಿ. ಅಶೋಕ್‌ ಕುಮಾರ್‌ ಶೆಟ್ಟಿ, ಕೆ.ಎಸ್‌. ದೇವರಾಜ್‌, ಶಶಿಕುಮಾರ್‌ ರೈ ಬಿ., ಎಂ. ವಾದಿರಾಜ ಶೆಟ್ಟಿ, ಬಿ. ನಿರಂಜನ, ಟಿ.ಜಿ. ರಾಜಾರಾಮ ಭಟ್‌, ಮೋನಪ್ಪ ಶೆಟ್ಟಿ ಎಕ್ಕಾರು, ಕೆ. ಜೈರಾಜ್‌ ಬಿ. ರೈ, ಎಸ್‌.ಬಿ. ಜಯರಾಮ ರೈ ಗೆಲುವು ಸಾಧಿಸಿದ್ದಾರೆ. ಸುಳ್ಯ, ಪುತ್ತೂರು ಸಹಿತ ಕೆಲವು ತಾಲೂಕುಗಳ ಪ್ರಾ.ಕೃ. ಪ. ಸ. ಸಂಘ ಗಳಲ್ಲಿ ಸಹಕಾರ ಭಾರತಿ ಮೇಲುಗೈ ಹೊಂದಿದ್ದರೂ ಸದಸ್ಯರ ಅಡ್ಡ ಮತದಾನದ ಪರಿಣಾಮ ಅವರು ಮತ ಕಳೆದುಕೊಳ್ಳುವಂತಾಯಿತು. 

ಮತ್ತೆ ಅಧ್ಯಕ್ಷರಾಗುವ ಅವಕಾಶ
ಈ ಫಲಿತಾಂಶದಿಂದ ಡಾ| ಎಂ.ಎನ್‌. ರಾಜೇಂದ್ರ ಕುಮಾರ್‌ ಎಸ್‌ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷರಾಗಿ ಮುಂದುವರಿಯುವ ಅವಕಾಶ ಪಡೆದಿದ್ದಾರೆ. ಐದು ಅವಧಿಗೆ ಅಂದರೆ, ನಿರಂತರ 25 ವರ್ಷಗಳ ಕಾಲ ಅಧ್ಯಕ್ಷರಾಗಿ ಇತಿಹಾಸ ನಿರ್ಮಿಸಿರುವ ಅವರಿಗೆ 6ನೇ ಬಾರಿಯ ಅದೃಷ್ಟ ಈ ಭರ್ಜರಿ ಗೆಲುವಿನೊಂದಿಗೆ ಒಲಿದಿದೆ. 6ನೇ ಬಾರಿಗೆ ಮುಂದುವರಿದರೆ, 30 ವರ್ಷಗಳ ಸುದೀರ್ಘ‌ ಅವಧಿಗೆ ಅಧಿಕಾರ ಹೊಂದುವ ಮೂಲಕ ಮತ್ತೂಂದು ದಾಖಲೆಯನ್ನು ಅವರು ನಿರ್ಮಿಸಲಿದ್ದಾರೆ. 

“ಈ ಗೆಲುವು ಸಹಕಾರ ಕ್ಷೇತ್ರಕ್ಕೆ ಗೌರವ’
ಗೆಲುವಿನ ಹಿನ್ನೆಲೆಯಲ್ಲಿ “ಉದಯವಾಣಿ’ ಜತೆ ಸಂತಸ ಹಂಚಿಕೊಂಡ ಹಾಲಿ ಅಧ್ಯಕ್ಷ ಡಾ| ಎಂ.ಎನ್‌. ರಾಜೇಂದ್ರ ಕುಮಾರ್‌, ಜಿಲ್ಲೆಯ ಸಹಕಾರ ಕ್ಷೇತ್ರ ಒಟ್ಟಾಗಿದೆ ಎಂಬುದಕ್ಕೆ ಈ ಫ‌ಲಿತಾಂಶವೇ ನಿದರ್ಶನ. ಜಿಲ್ಲಾ ಸಹಕಾರ ಕ್ಷೇತ್ರವು ಯಾರ ಕಪಿಮುಷ್ಟಿಯಲ್ಲೂ ಇಲ್ಲ; ನಾವೆಲ್ಲ ಸಹಕಾರ ತತ್ತÌದಡಿ ಒಂದಾಗಿದ್ದೇವೆ ಎನ್ನುವುದಕ್ಕೆ ಇದೇ ದೊಡ್ಡ ಉದಾಹರಣೆ. ಎಲ್ಲ ನಿರ್ದೇಶಕರು ಬಯಸಿದರೆ ಮತ್ತು 6ನೇ ಬಾರಿ ಅಧ್ಯಕ್ಷನಾಗಿ ಮುಂದುವರಿಯುವ ಅವಕಾಶ ಲಭಿಸಿದರೆ, ಗ್ರಾಹಕರಿಗೆ ಮತ್ತಷ್ಟು ವಿನೂತನ ಸೇವೆಗಳನ್ನು ಪರಿಚಯಿಸಿ ಬ್ಯಾಂಕ್‌ ಅನ್ನು ಅಭಿವೃದ್ಧಿ ಪಥದತ್ತ ಮುನ್ನಡೆಸಲು ಪ್ರಯತ್ನಿಸುವೆ ಎಂದರು. 

ಸಹಕಾರ ಬಳಗದ ಗೆಲುವು: ಡಾ| ಎಂ.ಎನ್‌.ಆರ್‌
ಫಲಿತಾಂಶ ಪ್ರಕಟ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಡಾ| ಎಂ.ಎನ್‌.ಆರ್‌., 25 ವರ್ಷಗಳಿಂದ ಅಧ್ಯಕ್ಷನಾಗಿ ಸೇವೆ ಸಲ್ಲಿಸಿದ್ದೇನೆ. ಅವಿರೋಧವಾಗಿ ಆಯ್ಕೆಯಾಗುತ್ತಿದ್ದಲ್ಲಿ ಈ ಬಾರಿ ಚುನಾವಣೆ ನಡೆದಿದೆ. ಎಲ್ಲ 16 ಸ್ಥಾನಗಳನ್ನು ನಮ್ಮ ನೇತೃತ್ವದ ಸಹಕಾರಿ ಬಳಗ ಗೆದ್ದುಕೊಂಡಿರುವುದು ಸಂತಸದ ವಿಚಾರ ಎಂದರು. ಸಹಕಾರಿ ಬಳಗ ಸಹಕಾರಿ ಕ್ಷೇತ್ರದಲ್ಲಿ ಹೊಸ ಹೆಜ್ಜೆಗಳೊಂದಿಗೆ ಮುನ್ನಡೆಯಲಿದೆ. ಸಹಕಾರಿ ಕ್ಷೇತ್ರದ ಇತರ ಹಂತಗಳಲ್ಲಿಯೂ ನಮ್ಮ ಸಂಘಟನೆ ಸ್ಪರ್ಧೆಗೆ ನಿರ್ಧರಿಸಲಿದೆ. ಮತದಾನದ ದಿನದವರೆಗೆ ರಾಜಕೀಯ ವಿಚಾರ; ಫಲಿತಾಂಶ ಬಂದ ಬಳಿಕ ನಾವೆಲ್ಲ ಸಹಕಾರಿಗಳು ಎಂಬ ಮನೋಭಾವ ನಮ್ಮದು. ಎಲ್ಲರೂ ಜತೆಯಾಗಿ ಮುನ್ನಡೆಯುವ ನಿಟ್ಟಿನಲ್ಲಿ ಹೆಜ್ಜೆ ಇಡಲಾಗುವುದು ಎಂದರು. 

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.