ಮಂಗಳೂರು ಪೊಲೀಸ್ ಆಯುಕ್ತರಾಗಿ ಡಾ. ಪಿ.ಎಸ್. ಹರ್ಷ ನೇಮಕ
Team Udayavani, Aug 5, 2019, 10:04 PM IST
ಮಂಗಳೂರು: ಮಂಗಳೂರಿನ ನೂತನ ಪೊಲೀಸ್ ಆಯುಕ್ತರಾಗಿ ಡಾ| ಪಿ.ಎಸ್. ಹರ್ಷ ಅವರನ್ನು ರಾಜ್ಯ ಸರಕಾರ ನೇಮಕ ಮಾಡಿದೆ.
ಈ ಮೊದಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನಿರ್ದೇಶಕರಾಗಿ (ಭದ್ರತೆ ಮತ್ತು ಗುಪ್ತಚರ ವಿಭಾಗ) ಸೇವೆಸಲ್ಲಿಸುತ್ತಿದ್ದರು.
ಡಾ| ಪಿ.ಎಸ್. ಹರ್ಷ ಅವರು ಈ ಹಿಂದೆ ಪುತ್ತೂರಿನಲ್ಲಿ ಎಎಸ್ಪಿ ಆಗಿ ಕರ್ತವ್ಯ ನಿರ್ವಹಿಸಿದ್ದರು.
ಮಂಗಳೂರು ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಬಡ್ತಿ ಪಡೆದು ವರ್ಗಾವಣೆಯಾಗಿ ತೆರಳಿ ನಾಲ್ಕು ದಿನ ಕಳೆದಿದ್ದು, ಅವರಿಂದ ತೆರವಾದ ಸ್ಥಾನಕ್ಕೆ ಡಾ| ಎ. ಸುಬ್ರಹ್ಮಣ್ಯೇಶ್ವರ ರಾವ್ ಅವರನ್ನು ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದ್ದರೂ ಅವರು ಅಧಿಕಾರ ಸ್ವೀಕರಿಸಿರಲಿಲ್ಲ.
ಸುಬ್ರಹ್ಮಣ್ಯೇಶ್ವರ ರಾವ್ ಅವರು ಮಂಗಳೂರು ಪೊಲೀಸ್ ಆಯುಕ್ತರಾಗಿ ಅಧಿಕಾರ ವಹಿಸಿಕೊಳ್ಳದ ಹಿನ್ನೆಲೆಯಲ್ಲಿ ಅವರ ಜಾಗಕ್ಕೆ ಇದೀಗ ಡಾ| ಪಿ.ಎಸ್. ಹರ್ಷ ಅವರನ್ನು ನೇಮಕ ಮಾಡಿ ಸೋಮವಾರ ಸರಕಾರ ಆದೇಶ ಹೊರಡಿಸಿದೆ.
ಡಾ| ಹರ್ಷ ಅವರು 2004 ನೇ ಸಾಲಿನ ಐಪಿಎಸ್ ಅಧಿಕಾರಿಯಾಗಿದ್ದಾರೆ. ಈ ಹಿಂದೆ ಹರ್ಷ ಅವರು ಕರ್ನಾಟಕ ವಾರ್ತಾ ಇಲಾಖೆ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದರು.
ಡಿಸಿಪಿ ಆಗಿ ಅರುಣಾಂಕ್ಷು ಗಿರಿ
ಇದೇ ವೇಳೆ ಹನುಮಂತರಾಯ ಅವರ ವರ್ಗಾವಣೆಯಿಂದ ತೆರವಾಗಿದ್ದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಆಗಿ ಅರುಣಾಂಕ್ಷು ಗಿರಿ ಅವರನ್ನು ನೇಮಕ ಮಾಡಲಾಗಿದೆ. ಅವರು ಇದುವರೆಗೆ ಕಾರ್ಕಳದಲ್ಲಿ ನಕ್ಸಲ್ ನಿಗ್ರಹ ದಳದ ಎಸ್ಪಿ ಆಗಿದ್ದರು. ಅವರು 2015 ನೇ ವರ್ಷದ ಐಪಿಎಸ್ ಅಧಿಕಾರಿ ಆಗಿರುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ