ನವರಸ ಅಭಿವ್ಯಕ್ತ ಶ್ರೀಮಂತ ಕಲೆ ಯಕ್ಷಗಾನ: ಡಾ| ಹೆಗ್ಗಡೆ
ಉಜಿರೆ: ಯಕ್ಷಗಾನ ಹಾಸ್ಯ ಪರಂಪರೆ ಪ್ರಾತ್ಯಕ್ಷಿಕೆ ಮತ್ತು ದಾಖಲೀಕರಣ
Team Udayavani, Jan 12, 2020, 5:13 AM IST
ಬೆಳ್ತಂಗಡಿ: ಕಲಾ ಮಾಧ್ಯಮದ ಮೂಲಕ ಭಾವನೆಗಳನ್ನು ತುಂಬಿ ಅಭಿವ್ಯಕ್ತ ಪಡಿಸಲು ಅವಕಾಶ ವಿದೆ. ಯಕ್ಷಗಾನದಲ್ಲಿ ಸಂದಭೋìಚಿತ ಕಲೆಯ ರಸೋತ್ಪತ್ತಿ ಮಾಡುವ ಶ್ರೇಷ್ಠ ಕಲಾವಿದರಿರುವುದರಿಂದಲೇ ಇಂದಿಗೂ ಯಕ್ಷ ಪರಂಪರೆ ಜೀವಂತವಾಗಿ ಉಳಿದಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಹೇಳಿದರು.ಡಿ. ವೀರೇಂದ್ರ ಹೆಗ್ಗಡೆ,ಕರ್ನಾಟಕ ಯಕ್ಷಗಾನ ಅಕಾಡೆಮಿ
ಕರ್ನಾಟಕ ಯಕ್ಷಗಾನ ಅಕಾಡೆಮಿ ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಸಂಯೋಜನೆಯೊಂದಿಗೆ ಕುರಿಯ ವಿಠಲ ಶಾಸ್ತ್ರಿ ಯಕ್ಷಗಾನ ಪ್ರತಿಷ್ಠಾನದ ವತಿಯಿಂದ ಉಜಿರೆಯ ಶ್ರೀ ಸಿದ್ಧವನ ಗುರುಕುಲದಲ್ಲಿ ಶನಿವಾರ, ರವಿವಾರ ಆಯೋಜಿಸಿರುವ ಯಕ್ಷಗಾನ ಹಾಸ್ಯ ಪರಂಪರೆ – ಪ್ರಾತ್ಯಕ್ಷಿಕೆ ಮತ್ತು ದಾಖಲೀಕರಣ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಜನರನ್ನು ನಗಿಸುವುದು ಮಾತ್ರವೇ ಹಾಸ್ಯಗಾರನ ಉದ್ದೇಶವಾಗದೆ ಪಾತ್ರ ಹಾಗೂ ವೇದಿಕೆಯ ಗೌರವ ಹೆಚ್ಚಿಸುವುದು ಆತನಲ್ಲಿರುವ ಪ್ರೌಢಿಮೆ ಎಂದರು.
ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಎಂ.ಎ. ಹೆಗಡೆ ಮಾತನಾಡಿ, ಯಕ್ಷಗಾನದಲ್ಲಿ ಹಾಸ್ಯಕ್ಕೆ ಅದರದ್ದೇ ಆದ ಮಹತ್ವವಿದೆ. ಆದರೂ ಅದಕ್ಕೆ ಪ್ರಾತಿನಿಧ್ಯ ದೊರಕಿಲ್ಲ, ಮುಂದಿನ ತಲೆಮಾರಿಗೆ ಹಾಸ್ಯ ಪರಂಪರೆಯ ಸ್ಪಷ್ಟ ಚಿತ್ರಣ ನೀಡಲು ಈ ದಾಖಲೀಕರಣ ಅತ್ಯಗತ್ಯ ಎಂದರು.
ಹಿರಿಯ ಕಲಾವಿದರಾದ ಪೆರುವಡಿ ನಾರಾಯಣ ಭಟ್, ಗೋವಿಂದ ಭಟ್ ಉಪಸ್ಥಿತರಿದ್ದರು. ಎರಡು ದಿನಗಳಲ್ಲಿ ಸುಮಾರು 30 ಯಕ್ಷಗಾನ ಪರಂಪರೆ ಹಾಸ್ಯ ಪಾತ್ರಗಳ ಪ್ರಾತ್ಯಕ್ಷಿಕೆ ನಡೆಯಲಿದೆ.
ಕುರಿಯ ವಿಠಲ ಶಾಸ್ತ್ರಿ ಪ್ರತಿಷ್ಠಾನದ ಸಂಚಾಲಕ ಉಜಿರೆ ಅಶೋಕ್ ಭಟ್ ಪ್ರಸ್ತಾವನೆಗೈದರು. ಎಸ್ಡಿಎಂ ಕಾಲೇಜಿನ ಪ್ರಾಶುಂಪಾಲ ಪ್ರೊ| ಎಸ್. ಸತೀಶ್ಚಂದ್ರ ಸ್ವಾಗತಿಸಿ, ಯಕ್ಷಗಾನ ಅಕಾಡೆಮಿ ಸದಸ್ಯ ಸಂಚಾಲಕಿ ಆರತಿ ಪಟ್ರಮೆ ವಂದಿಸಿದರು. ಪದ್ಮನಾಭ ಕೆ.ವಿ. ನಿರ್ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
MUST WATCH
ಹೊಸ ಸೇರ್ಪಡೆ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!