ಕೆರೆಗಳು ಊರಿನಲ್ಲಿ ಆಸ್ತಿ. ಅವುಗಳ ಸಂರಕ್ಷಣೆ ಇಂದಿನ ಅಗತ್ಯ : ಹೆಗ್ಗಡೆ
ವಿವಿಧ ಜಿಲ್ಲೆಗಳ ಕೆರೆ ಅಭಿವೃದ್ಧಿ ಸಮಿತಿ ಪದಾಧಿಕಾರಿಗಳ ಸಭೆ
Team Udayavani, Sep 15, 2022, 11:27 AM IST
ಬೆಳ್ತಂಗಡಿ : ಕೆರೆಗಳು ಊರಿನಲ್ಲಿ ಆಸ್ತಿ. ಅವುಗಳ ಸಂರಕ್ಷಣೆ ಇಂದಿನ ಅಗತ್ಯ. ಅಂತಹ ಕೆರೆಗಳನ್ನು ಜನರ ಸಹಭಾಗಿತ್ವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಪುನಃಶ್ಚೇತನಗೊಳಿಸಲಾಗುತ್ತಿದ್ದು, ಹೂಳು ತುಂಬಿಕೊಂಡಿದ್ದ ಹಲವು ಕೆರೆಗಳು ಇದೀಗ ಶೇಖರಣೆ ಸಾಮರ್ಥ್ಯ ಹೆಚ್ಚಿಸಿಕೊಂಡು ತುಂಬಿವೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ತಿಳಿಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬುಧವಾರ ಹಾಸನ, ಚಿಕ್ಕಮಗಳೂರು, ಉಡುಪಿ, ಶಿವಮೊಗ್ಗ ಜಿಲ್ಲೆಯಿಂದ ಬಂದ ಕೆರೆ ಅಭಿವೃದ್ಧಿ ಸಮಿತಿಯ ಪದಾಧಿಕಾರಿ ಗಳನ್ನುದ್ದೇಶಿಸಿ ಅವರು ಮಾತನಾಡಿದರು.
ನಮ್ಮ ಭವಿಷ್ಯ, ಜೀವನವನ್ನು ನಾವೇ ರೂಪಿಸಿಕೊಳ್ಳಬೇಕು. ಸಾಧನೆ ಮಾಡಲು ಛಲ ಬೇಕು. ಆಲಸ್ಯ ಇರುವವರಿಂದ ಸಾಧನೆ ಅಸಾಧ್ಯ. ಪ್ರತಿಯೊಂದು ಕೆಲಸವನ್ನೂ ಸರಕಾರವೇ ಮಾಡಬೇಕೆಂದು ಕಾಯಬಾರದು. ಗ್ರಾಮದ ಮೂಲಭೂತ ಅಗತ್ಯಗಳನ್ನು ಗ್ರಾಮಸ್ಥರೇ ಪರಸ್ಪರ ಸಹಕಾರದಿಂದ ಪೂರೈಸಿಕೊಳ್ಳಲು ಸಾಧ್ಯ ಎಂದು ಮಾರ್ಗದರ್ಶನ ನೀಡಿದರು.
ಜ್ಞಾನವಿಕಾಸ ಕಾರ್ಯಕ್ರಮದ ಅಧ್ಯಕ್ಷೆ ಡಾ| ಹೇಮಾವತಿ ವೀ. ಹೆಗ್ಗಡೆ ಉಪಸ್ಥಿತರಿದ್ದರು.
ಸಮುದಾಯ ವಿಭಾಗದ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ, ಕೆರೆ ವಿಭಾಗದ ನಿರ್ದೇಶಕ ರಾದ ಶಿವಾನಂದ ಆಚಾರ್ಯ, ಯೋಜನಾಧಿಕಾರಿ ಯುವರಾಜ್ ಜೈನ್ ಹಾಗೂ ಕೆರೆ ಅಭಿಯಂತ ಭರತ್ ಉಪಸ್ಥಿತರಿದ್ದರು. ಕೆರೆ ಅಭಿವೃದ್ಧಿ ಸಮಿತಿಯ ಪದಾಧಿಕಾರಿಗಳು ಡಾ| ಹೆಗ್ಗಡೆ ಅವರನ್ನು ಅಭಿನಂದಿಸಿದರು.
ರೈತರ ಬದುಕು ಹಸನಾದ ಕಥೆ
ಕೆರೆ ಸಮಿತಿ ಸದಸ್ಯ ಅಜ್ಜಂಪುರ ತಾಲೂಕು ಗಡೀಹಳ್ಳಿ ಗ್ರಾಮದ ಜಿ.ಐ. ಮಂಜುನಾಥ್ ಮಾತನಾಡಿ, ಹಿಂದೆಲ್ಲ ಪವಿತ್ರ ಕಾರ್ಯಗಳಿಗೆ ಬಳಸಲಾಗುತ್ತಿದ್ದ ನಮ್ಮೂರ ಕೆರೆ ಪಾಳು ಬಿದ್ದು ಜಾಲಿ ಗಿಡಗಳು ಬೆಳೆದು ಬಳಕೆಗೆ ಯೋಗ್ಯವಾಗಿರಲಿಲ್ಲ. ಜೂಜು, ಕುಡಿತ ಮೊದಲಾದ ಅಕ್ರಮಗಳ ತಾಣವಾಗಿತ್ತು. ಶ್ರೀ ಕ್ಷೇತ್ರ ಧರ್ಮಸ್ಥಳ ಹಮ್ಮಿಕೊಂಡ ಕೆರೆ ಅಭಿವೃದ್ಧಿ ಕಾಮಗಾರಿಯಿಂದ ಈಗ ಮರುಜೀವ ಪಡೆದಿದೆ. ಅಂತರ್ಜಲ ಮಟ್ಟ ಹೆಚ್ಚಿ ರೈತರ ಬದುಕು ಹಸನಾಗಿದೆ. ಊರಿಗೂ ನೀರಿನ ಬರ ನೀಗಿದೆ ಎಂದು ತಿಳಿಸಿದರು.
469 ಕೆರೆಗಳ ಪುನಃಶ್ಚೇತನ
ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ| ಎಲ್.ಎಚ್. ಮಂಜುನಾಥ್ ಮಾತನಾಡಿ, ರಾಜ್ಯಾದ್ಯಂತ 469 ಕೆರೆಗಳ ಪುನಃಶ್ಚೇತನ ನಡೆಸಲಾಗಿದೆ. ಈ ಕೆರೆಗಳು ಒತ್ತುವರಿ ಆಗದಂತೆ ಎಚ್ಚರಿಕೆ ವಹಿಸಿರಿ. ಕೆರೆಗಳ ಸ್ವತ್ಛತೆಗೆ ಆದ್ಯತೆ ನೀಡಿ. ಸುತ್ತ ಗಿಡಗಳನ್ನು ಬೆಳೆಸಿ ಅಭಿವೃದ್ಧಿ ಪಡಿಸಿರಿ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ