ಕರಾವಳಿ ಅಭಿವೃದ್ಧಿಗೆ “ಡಾ| ವಿ.ಎಸ್‌. ಆಚಾರ್ಯ’ ಅಧ್ಯಯನ ಕೇಂದ್ರ


Team Udayavani, Sep 12, 2021, 8:10 AM IST

ಕರಾವಳಿ ಅಭಿವೃದ್ಧಿಗೆ “ಡಾ| ವಿ.ಎಸ್‌. ಆಚಾರ್ಯ’ ಅಧ್ಯಯನ ಕೇಂದ್ರ

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಸಹಿತ ಕರಾವಳಿಯ ಸಮಗ್ರ ಅಭಿವೃದ್ಧಿಗಾಗಿ “ಡಾ| ವಿ.ಎಸ್‌. ಆಚಾರ್ಯ ಕರಾವಳಿ ಅಭಿವೃದ್ಧಿ ಅಧ್ಯಯನ ಕೇಂದ್ರ’ವನ್ನು ಆರಂಭಿಸಲು ಮಂಗಳೂರು ವಿಶ್ವವಿದ್ಯಾನಿಲಯವು ಚಿಂತನೆ ನಡೆಸಿದೆ.

ಶಿಕ್ಷಣ, ಕೃಷಿ, ಬ್ಯಾಂಕಿಂಗ್‌, ಮೀನುಗಾರಿಕೆ, ಹೆಂಚು ಉದ್ಯಮ, ಸಣ್ಣ-ಮಧ್ಯಮ ಕೈಗಾರಿಕಾ ವಲಯ, ಬೀಡಿ ಉದ್ಯೋಗ ಸಹಿತ ಕರಾವಳಿಯ ಎಲ್ಲ ವಿಚಾರಗಳ ಆಮೂಲಾಗ್ರ ಅಧ್ಯಯನ ಈ ಕೇಂದ್ರದ ಆಶಯ. ವಿ.ವಿ. ಕುಲಪತಿ ಪ್ರೊ| ಪಿ.ಎಸ್‌. ಯಡಪಡಿತ್ತಾಯ ಅವರ ಮುತುವರ್ಜಿಯಲ್ಲಿ ಈ ಬಗ್ಗೆ ಪ್ರಸ್ತಾವನೆ ಸಿದ್ಧಗೊಳ್ಳುತ್ತಿದ್ದು, ಶೀಘ್ರ ಸರಕಾರದ ಒಪ್ಪಿಗೆ ಪಡೆಯುವ ನಿರೀಕ್ಷೆ ಇದೆ.

ಅಧ್ಯಯನ, ಸಂಶೋಧನೆ ಮತ್ತು ಪ್ರಕಟನೆ ಈ ಕೇಂದ್ರದ ಉದ್ದೇಶ. ಈ ಮೂಲಕ ಅಧ್ಯಯನ, ಸಂಶೋಧನೆ ಕೈಗೊಂಡು ಸರಕಾರ, ಖಾಸಗಿ ಸಂಸ್ಥೆ, ಸಾರ್ವಜನಿಕರ ಗಮನ ಸೆಳೆದು ಸ್ಪಂದಿಸುವಂತೆ ಮಾಡಲಿದೆ. ಕೇಂದ್ರಕ್ಕೆ 5 ಕೋ.ರೂ. ಅನುದಾನ ನಿರೀಕ್ಷೆಯನ್ನು ಮಂಗಳೂರು ವಿ.ವಿ. ಇರಿಸಿಕೊಂಡಿದೆ.

ಕರಾವಳಿ ಭಾಗದ  ಸರ್ಟಿಫಿಕೇಟ್‌ ಕೋರ್ಸ್‌:

ಕರಾವಳಿಗೆ ಅನುಕೂಲವಾಗುವ ಕೋರ್ಸ್‌ಗಳನ್ನು ಪರಿಚಯಿಸುವ ಬಗ್ಗೆ ಕೇಂದ್ರವು ಪರಾಮರ್ಶೆ ನಡೆಸಲಿದೆ. ಉದಾಹರಣೆಗೆ, ಮೀನುಗಾರಿಕೆ ರಫ್ತು, ಹೊಸ ತಳಿಯ ಭತ್ತ ಮತ್ತಿತರ ಹಲವು ಆಯಾಮಗಳ ಬಗ್ಗೆ ಸರ್ಟಿಫಿಕೇಟ್‌ ಕೋರ್ಸ್‌ ಆರಂಭ ವಿಚಾರವಾಗಿ ಈ ಕೇಂದ್ರ ಅಧ್ಯಯನ ಕೈಗೊಂಡು ವಿ.ವಿ.ಗೆ ಮಾರ್ಗದರ್ಶನ ನೀಡಬಹುದಾಗಿದೆ.

ಡಾ| ವಿ.ಎಸ್‌. ಆಚಾರ್ಯ ಅವರು ಕರಾವಳಿಯ ಅಭಿವೃದ್ಧಿಗೆ ವೇಗ ನೀಡುವಲ್ಲಿ ಶ್ರಮಿಸಿದ್ದಾರೆ. ಹೀಗಾಗಿ ಅವರ ಸ್ಮರಣಾರ್ಥ ಕೇಂದ್ರ ಸ್ಥಾಪನೆಗೆ ವಿ.ವಿ. ಯೋಚಿಸಿದೆ. ಸರಕಾರ ಒಪ್ಪಿಗೆ ನೀಡಿದರೆ ಮೊದಲಿಗೆ ಮಂಗಳೂರು ವಿ.ವಿ.ಯಲ್ಲಿ ಕೇಂದ್ರದ ಕಚೇರಿ ಇರಲಿದೆ. ಬಳಿಕ ಉಡುಪಿ ಸಮೀಪದ ಬೆಳಪು ಸೆಂಟರ್‌ನ ಹೊಸ ಕಟ್ಟಡಕ್ಕೆ ಸ್ಥಳಾಂತರಿಸುವ ಉದ್ದೇಶವಿದೆ.

ಯಾವೆಲ್ಲ ಅಧ್ಯಯನ? :

ಕರಾವಳಿಯಲ್ಲಿ ಕಡಲ್ಕೊರತೆ ಸಮಸ್ಯೆ ಬಹುವಾಗಿದ್ದು, ಇದರ ನಿಯಂತ್ರಣಕ್ಕೆ ಬೇರೆ ಬೇರೆ ಕ್ರಮಗಳು ಜಾರಿಯಲ್ಲಿದ್ದರೂ ಪೂರ್ಣ ಯಶಸ್ವಿಯಾಗಿಲ್ಲ. ಅದರ ಬದಲಾಗಿ ಪ್ರಾಕೃತಿಕ ತಡೆ ಕ್ರಮಗಳ ಬಗ್ಗೆ ಸಾಗರ ಭೂ ವಿಜ್ಞಾನ ವಿಭಾಗವು ಅಧ್ಯಯನ ಮಾಡಬಹುದು. ಮೀನಿನ ಹೊಸ ಪ್ರಭೇದಗಳಿಂದ ಆಗಬಹುದಾದ ಲಾಭಗಳ ಬಗ್ಗೆ ಬೆಳಕು ಚೆಲ್ಲುವ ಅಧ್ಯಯನ ನಡೆಸಬಹುದು. ಕರಾವಳಿಯ ಹವಾಮಾನ ಬದಲಾವಣೆ, ರಿಮೋಟ್‌ ಸೆನ್ಸಿಂಗ್‌, ನ್ಯಾನೋ ಟೆಕ್ನಾಲಜಿ ಮತ್ತಿತರ ವಿಚಾರಗಳ ಬಗ್ಗೆ ಅಧ್ಯಯನ ಮಾಡಿ ಸರಕಾರಕ್ಕೆ ಮಾರ್ಗದರ್ಶನ ನೀಡಬಹುದಾಗಿದೆ.

ಪ್ರಸ್ತುತ ಕರಾವಳಿಯ ಸಮಗ್ರ ಅಭಿವೃದ್ಧಿಯ ನೆಲೆಯಲ್ಲಿ ಖಾಸಗಿ ವಿ.ವಿ.ಗಳ ಸಹಿತ ಎಲ್ಲೂ ಅಧ್ಯಯನ ನಡೆಯುತ್ತಿಲ್ಲ. ಕೆಲವು ವಿಷಯಗಳ ಬಗ್ಗೆ ಬಿಡಿಬಿಡಿಯಾಗಿ ಅಧ್ಯಯನ ನಡೆಯುತ್ತಿವೆ, ಸಮಗ್ರವಾಗಿಲ್ಲ. ಈ ಅಧ್ಯಯನಗಳಿಂದ ಜನರಿಗೆ ನೇರವಾಗಿ ಪ್ರಯೋಜನವಾಗದೆ ಇದ್ದರೂ ಕೇಂದ್ರದ ಮೂಲಕ ನಡೆಯುವ ಅಧ್ಯಯನದ ವರದಿಗಳು ಸರಕಾರಕ್ಕೆ ಸಲ್ಲಿಕೆಯಾಗುತ್ತವೆ. ಅದನ್ನು ಆಧರಿಸಿ ಸರಕಾರ ಕ್ರಮ ಕೈಗೊಳ್ಳಬಹುದಾಗಿದೆ.

ಕರಾವಳಿಯ ಸಮಗ್ರ ಅಭಿವೃದ್ಧಿಯ ಪರಿಕಲ್ಪನೆ ಇರಿಸಿಕೊಂಡು ಡಾ| ವಿ.ಎಸ್‌. ಆಚಾರ್ಯ ಅಧ್ಯಯನ ಕೇಂದ್ರ ಆರಂಭಕ್ಕೆ ವಿ.ವಿ. ಚಿಂತನೆ ನಡೆಸಿದ್ದು, ಪ್ರಸ್ತಾವನೆ ಸಿದ್ಧಗೊಳ್ಳುತ್ತಿದೆ. ಕೆಲವೇ ದಿನಗಳಲ್ಲಿ ಸರಕಾರಕ್ಕೆ ಸಲ್ಲಿಸಿ ಅನುಮತಿ ಪಡೆಯಲಾಗುವುದು. ಕರಾವಳಿಯ ಜನಸಾಮಾನ್ಯರಿಗೆ ಸಂಬಂಧಪಡುವ ಎಲ್ಲ ವಿಚಾರಗಳ ಅಧ್ಯಯನ ಮತ್ತು ಸಂಶೋಧನೆಗಾಗಿ ಈ ಕೇಂದ್ರವನ್ನು ಬಳಸಿಕೊಳ್ಳಲಾಗುವುದು.  ಪ್ರೊ| ಪಿ.ಎಸ್‌. ಯಡಪಡಿತ್ತಾಯ, ಕುಲಪತಿ, ಮಂಗಳೂರು ವಿ.ವಿ.

 

-ದಿನೇಶ್‌ ಇರಾ

ಟಾಪ್ ನ್ಯೂಸ್

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.