ಮಳೆ ಬಂದರೆ ರಸ್ತೆ ಹೊಳೆಯಂತಾಗುವ ಭೀತಿ!

ಸುಳ್ಯ: ಎಚ್ಚರಿಕೆಯ ಕರೆಗಂಟೆ ಬಾರಿಸಿದ ಮೊದಲ ಮಳೆ

Team Udayavani, Mar 30, 2022, 9:59 AM IST

sullia

ಸುಳ್ಯ : ಸುಳ್ಯದಲ್ಲಿ ಮೊದಲ ಮಳೆಯೇ ಎಚ್ಚರಿಕೆಯ ಕರೆಗಂಟೆಯನ್ನು ಸ್ಥಳೀಯಾಡಳಿತಕ್ಕೆ ನೀಡಿದ್ದು, ಪೇಟೆಯ ಚರಂಡಿ ದುರಸ್ತಿ ಕಾರ್ಯ ನಡೆಯದೇ ಇದ್ದರೆ ರಸ್ತೆ ಹೊಳೆಯಂತಾಗುವ ಭೀತಿಯ ಸೂಚನೆ ನೀಡಿದೆ ಮೊನ್ನೆ ಸುರಿದ ಮಳೆ. ಕೃತಕ ನೆರೆ ಆತಂಕವೂ ಇಲ್ಲ ಎನ್ನುವಂತಿಲ್ಲ. ನಗರ ಪಂಚಾಯತ್‌ ವ್ಯಾಪ್ತಿಗೆ ಸೇರಿದ ಸುಳ್ಯದ ಮುಖ್ಯ ರಸ್ತೆಯ ಬದಿಯಲ್ಲಿ ಚರಂಡಿ ನಿರ್ಮಿಸಲಾಗಿದ್ದು, ದುರಸ್ತಿ ಕಾರ್ಯ ನಡೆಯಬೇಕಿದೆ.

ಬೇಸಗೆಯಲ್ಲಿ ಕಸ-ಕಡ್ಡಿ, ತ್ಯಾಜ್ಯ ಸೇರಿಕೊಂಡು ಮಳೆ ನೀರಿನ ಹರಿವಿಗೆ ಅಡ್ಡಿಯುಂಟಾಗಿದ್ದು , ಕೆಲವೆಡೆ ಚರಂಡಿ ಬಂದ್‌ ಆಗಿರುವ ಸ್ಥಿತಿಯಲ್ಲಿದೆ. ಇದು ಕೃತಕ ನೆರೆ ಭೀತಿಯನ್ನು ತಂದೊಡ್ಡುವ ಆತಂಕವನ್ನು ಸೃಷ್ಟಿಸಿದೆ. ಸುಳ್ಯದಲ್ಲಿ ಹಳ್ಳ, ತೋಡು, ಕಾಲುವೆಗಳಿಂದ ನೀರು ಪೇಟೆಗೆ ನುಗ್ಗುವ ಭೀತಿ ಇಲ್ಲದಿದ್ದರೂ ಇರುವ ಚರಂಡಿಯಲ್ಲಿ ನೀರಿನ ಸರಾಗ ಹರಿವಿಗೆ ಅಡ್ಡಿಯಾದಲ್ಲಿ ನೀರು ರಸ್ತೆಗೆ ನುಗ್ಗುವ ಆತಂಕ ಇದೆ.

ರಸ್ತೆಗೆ ನುಗ್ಗಿದ ಮಳೆ ನೀರು ಇತ್ತೀಚೆಗೆ ಸುಳ್ಯ ದಲ್ಲಿ ಸುರಿದ ಭಾರೀ ಮಳೆಗೆ ರಸ್ತೆ ಜಲಾ ವೃತಗೊಂಡಿದ್ದು, ವಾಹನ ಸವಾರರು ಸ್ಥಳೀಯಾಡಳಿತದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಳೆಗೇಟ್‌ನಲ್ಲಿ ಸಮರ್ಪಕ ಚರಂಡಿ ಇಲ್ಲದೆ ರಸ್ತೆಯಲ್ಲೇ ಮಳೆ ನೀರು ಸಂಗ್ರಹವಾಗಿತ್ತು. ಪೇಟೆಯಲ್ಲಿ ರಸ್ತೆಯ ಎರಡೂ ಬದಿಗಳಲ್ಲಿ ಚರಂಡಿಗಳನ್ನು ನಿರ್ಮಿಸಲಾಗಿದ್ದರೂ ಅದರ ನಿರ್ವಹಣೆ ಮಾತ್ರ ಸಮರ್ಪಕವಾಗಿಲ್ಲ ಎಂಬ ದೂರು ಕೇಳಿಬಂದಿದೆ.

ಮಳೆ ಬಂದರೆ ರಸ್ತೆ ಹೊಳೆಯಂತಾಗುವ ಭೀತಿ!

ರಸ್ತೆಯ ನೀರು ಚರಂಡಿಗೆ ಸೇರುವಲ್ಲಿ ಕಸ-ಕಡ್ಡಿ, ಪ್ಲಾಸ್ಟಿಕ್‌ ತುಂಬಿ ನೀರು ಹರಿಯಲು ಅಡ್ಡಿಯಾಗಿದೆ. ರಸ್ತೆಯ ನೀರು ಚರಂಡಿಗೆ ಸೇರಲು ಸಮರ್ಪಕ ವ್ಯವಸ್ಥೆಯೂ ಇಲ್ಲ ಎನ್ನಲಾಗಿದ್ದು, ಇದರಿಂದಾಗಿಯೇ ಮಳೆ ನೀರು ರಸ್ತೆಯಲ್ಲೇ ಹರಿಯುತ್ತದೆ ಎಂಬ ಮಾತು ಕೇಳಿಬಂದಿದೆ. ಅಲ್ಲದೆ ಒಳ ರಸ್ತೆಯಲ್ಲೂ ಚರಂಡಿ ದುರಸ್ತಿ ಕಾರ್ಯ ನಡೆಯಬೇಕಿದೆ.

ಅಪಾಯಕ್ಕೆ ಆಹ್ವಾನ

ಪೇಟೆಯಲ್ಲಿ ಚರಂಡಿಯ ಮೇಲ್ಭಾಗಕ್ಕೆ ಅಳವಡಿಸಿರುವ ಸ್ಲ್ಯಾಬ್‌ ಕೆಲವೆಡೆ ಮುರಿದು ಬೀಳುವ ಸ್ಥಿತಿಯಲ್ಲಿದ್ದು, ಕೆಲವೆಡೆ ಕಬ್ಬಿಣದ ಸರಳುಗಳು ಮೇಲೆದ್ದು ಕಾಣಿಸುತ್ತಿದ್ದು, ಅಪಾಯವನ್ನು ಆಹ್ವಾನಿಸುತ್ತಿದೆ. ಕೆಲವೆಡೆ ಸ್ಲ್ಯಾಬ್ ತೆಗೆದಿದ್ದರೆ ಅದನ್ನು ಅಳವಡಿಸುವ ಕಾರ್ಯ ಸಮರ್ಪಕವಾಗಿ ನಡೆದಿಲ್ಲ ಎಂಬ ದೂರು ವ್ಯಕ್ತವಾಗಿದೆ.

ದುರಸ್ತಿ ನಡೆಯಲಿ

ಇದೀಗ ಸಂಜೆ ಮಳೆ ಸುರಿಯುತ್ತಿದ್ದು, ಚರಂಡಿ, ಕಾಲುವೆಗಳ ದುರಸ್ತಿ ಕಾರ್ಯ ನಡೆಸಲು ಸೂಚನೆ ನೀಡಿದಂತಾಗಿದೆ. ಸ್ಥಳೀಯಾಡಳಿತ ಮಳೆ ನೀರು ಸಮರ್ಪಕವಾಗಿ ಹರಿದು ಹೋಗಲು ವ್ಯವಸ್ಥೆ ಕಲ್ಪಿಸಬೇಕಿದೆ. ಕೆಲವೆಡೆ ಚರಂಡಿಗೂ ಕಾಯಕಲ್ಪ ನೀಡಿ ನೀರಿ ಸರಾಗವಾಗಿ ಹರಿಯಲು ವ್ಯವಸ್ಥೆ ಕಲ್ಪಿಸಬೇಕಾಗಿದೆ. ಕಸ-ಕಡ್ಡಿ, ಗಿಡ-ಗಂಟಿ ತೆರವು, ಮಣ್ಣು ತೆರವು ಕಾರ್ಯ ನಡೆಯಬೇಕಿದೆ. ಮಳೆಗಾಲದ ಮೊದಲು ದುರಸ್ತಿ ಕಾರ್ಯ ನಡೆಸಿದರೆ ಉತ್ತಮ ಎಂಬುದು ಸಾರ್ವಜನಿಕರ ಅಭಿಪ್ರಾಯ.

ಟಾಪ್ ನ್ಯೂಸ್

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqwewq

Congress ನಿಂದ ಬದುಕು; ಬಿಜೆಪಿಯದ್ದು ಭಾವನೆಗಳ ಚೆಲ್ಲಾಟ: ಡಾ| ಭಂಡಾರಿ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.