ಚರಂಡಿ ಸಮಸ್ಯೆ: ರಸ್ತೆಯಲ್ಲಿ ಕೃತಕ ನೆರೆ


Team Udayavani, Jun 10, 2018, 11:37 AM IST

10-june-7.jpg

ಬೆಳ್ತಂಗಡಿ : ಮುಂಗಾರು ಮಳೆ ಆರಂಭಗೊಂಡಿದ್ದು, ಮಳೆಯ ನೀರು ಸಮರ್ಪಕವಾಗಿ ಹರಿದು ಹೋಗಲು ಚರಂಡಿಯ ವ್ಯವಸ್ಥೆ ಮಾತ್ರ ಅನೇಕ ಕಡೆಗಳಲ್ಲಿ ಇನ್ನೂ ಆಗಿಲ್ಲ. ಬೆಳ್ತಂಗಡಿ ತಾಲೂಕಿನ ಬಹುತೇಕ ಕಡೆಗಳಲ್ಲಿ ರಸ್ತೆ ಬದಿಯ ಚರಂಡಿ ವ್ಯವಸ್ಥೆ ಸರಿಪಡಿಸದೆ ಮಳೆ ನೀರು ಮಾರ್ಗದಲ್ಲಿಯೇ ಹರಿಯುತ್ತಿದೆ. ಜತೆಗೆ ಚರಂಡಿಯಲ್ಲಿದ್ದ ತ್ಯಾಜ್ಯ ವಸ್ತುಗಳು ಮಾರ್ಗದಲ್ಲಿ ಹರಡಿಕೊಂಡಿವೆ. ಎಲ್ಲೆಡೆ ನೀರು ಹರಿಯುತ್ತಿರುವುದರಿಂದ ವಾಹನ ಸವಾರರು, ಜನಸಾಮಾನ್ಯರು ಸಮಸ್ಯೆ ಎದುರಿಸುತ್ತಿದ್ದಾರೆ.

ಉಜಿರೆ ಶಾಲೆ ಬಳಿ
ಶೈಕ್ಷಣಿಕ ನಗರಿ ಉಜಿರೆ ಗ್ರಾಮ ಬೆಳೆದಂತೆ ಸಮಸ್ಯೆಗಳೂ ಬೆಳೆಯುತ್ತಿದೆ. ರಾ.ಹೆ. ಬದಿಯಲ್ಲಿ ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದೆ ಮಳೆ ನೀರೆಲ್ಲ ರಸ್ತೆಯಲ್ಲೇ ಹರಿಯುತ್ತಿದೆ. ಕೆಸರು ನೀರು ಪಾದಚಾರಿಗಳಿಗೆ ರಾಚಿ ಕೆಸರುಮಯಗೊಳಿಸುತ್ತಿದೆ. ವಾಹನ ಸಂಚಾರಕ್ಕೂತೊಡಕುಂಟಾಗುತ್ತಿದೆ. 

ತ್ಯಾಜ್ಯ ಎಸೆಯದಿರಿ
ಉಜಿರೆ ಗ್ರಾ. ಪಂ.ನ ವತಿಯಿಂದ ಶುಕ್ರವಾರ ಉಜಿರೆಯ ಕೆಲವು ಕಡೆಗಳಲ್ಲಿ ಚರಂಡಿಯಲ್ಲಿದ್ದ ತ್ಯಾಜ್ಯಗಳನ್ನು ವಿಲೇವಾರಿ ಮಾಡಿ ಸಮರ್ಪಕವಾಗಿ ನೀರು ಹರಿದು ಹೋಗುವಂತೆ ಸರಿಪಡಿಸಲಾಯಿತು. ನಾಗರಿಕರು ರಸ್ತೆ ಬದಿಯ ಚರಂಡಿಗಳಿಗೆ ತ್ಯಾಜ್ಯಗಳನ್ನು ಎಸೆಯುವುದರಿಂದ ಮಳೆಗಾಲದಲ್ಲಿ ನೀರು ಸರಿಯಾಗಿ ಹರಿದು ಹೋಗದೆ ಇಂತಹ ಸಮಸ್ಯೆ ಎದುರಾಗುತ್ತಿದೆ. ತ್ಯಾಜ್ಯಗಳನ್ನು ಚರಂಡಿಗೆ ತಂದು ಸುರಿಯುವ ಬದಲು ಸೂಕ್ತ ರೀತಿಯಲ್ಲಿ ತಮ್ಮ ಮನೆಯಲ್ಲಿಯೇ ವಿಲೇ ಮಾಡಿದರೆ ಇಂತಹ ಪರಿಸ್ಥಿತಿ ಮರುಕಳಿಸಲು ಸಾಧ್ಯವಿಲ್ಲ.

ನಿಡಿಗಲ್‌ ಸೇತುವೆ
ಕಲ್ಮಂಜ ಗ್ರಾಮದ ನಿಡಿಗಲ್‌ ಸೇತುವೆ ಮೇಲೆ ಮಳೆ ನೀರು ಹರಿದು ಹೋಗುವಂತೆ ಸೂಕ್ತ ವ್ಯವಸ್ಥೆ ಮಾಡಬೇಕಿದೆ. ಸೇತುವೆ ಮೇಲೆ ಶೇಖರಣೆಯಾಗುವ ನೀರಿನಿಂದ ದ್ವಿಚಕ್ರ ವಾಹನದವರಿಗೆ ಘನ ವಾಹನದವರಿಂದ ನೀರ ಸಿಂಚನವಾಗುತ್ತಿದೆ. ಮೊದಲೇ ಇಕ್ಕಟ್ಟಾದ ಈ ಸೇತುವೆಯ ಮೇಲೆ ಘನ ವಾಹನಗಳು ಸಂಚರಿಸುವಾಗ ದ್ವಿಚಕ್ರ ಸವಾರರಿಗೆ, ಪಾದಚಾರಿಗಳಿಗೆ ಕೆಸರು ನೀರಿನ ಸಿಂಚನವಾಗುತ್ತಿದೆ. ನೂತನ ಸೇತುವೆ ನಿರ್ಮಾಣವಾಗುತ್ತಿದೆ. ಶಿರಾಡಿ ಘಾಟಿ ರಸ್ತೆಯಲ್ಲಿ ಕಾಮಗಾರಿ ನಡೆಯುತ್ತಿರುವುದರಿಂದ ಚಾರ್ಮಾಡಿ ಮಾರ್ಗವಾಗಿ ವಾಹನಗಳು ಸಂಚರಿಸುತ್ತಿದ್ದು, ಕೆಲವೆಡೆ ಮೋರಿ ಶಿಥಿಲಗೊಂಡಿದೆ.

ಎಚ್ಚೆತ್ತುಕೊಂಡ ಆಡಳಿತ 
ಉಜಿರೆಯಲ್ಲಿ ನಿರಂತರ ನೀರು ನಿಲ್ಲುವ ಸಮಸ್ಯೆ ಉಂಟಾಗುತ್ತಿತ್ತು. ಶನಿವಾರವೂ ಪೆಟ್ರೋಲ್‌ ಪಂಪ್‌ ಬಳಿ ರಸ್ತೆಯಲ್ಲಿ ನೀರು ನಿಂತು ವಾಹನ ಸವಾರರು ಪರದಾಡುವಂತಾಯಿತು. ಚರಂಡಿಗೆ ಹಾಕಿರುವ ಕೊಳವೆಗಳಲ್ಲಿ ಕಸಗಳು ಸಿಲುಕಿ ಹಾಗೂ ಕಸದಿಂದ ಚರಂಡಿ ಬ್ಲಾಕ್‌ ಆಗುವ ಕಾರಣ ಸಮಸ್ಯೆ ಹೆಚ್ಚಳವಾಗುತ್ತಿದೆ. ಇದೀಗ ಉಜಿರೆ ಪಿಡಿಒ ಗಾಯತ್ರಿ ಮತ್ತು ಗ್ರಾ.ಪಂ. ಅಧ್ಯಕ್ಷ ಶ್ರೀಧರ ಪೂಜಾರಿ ಸ್ಥಳಕ್ಕೆ ಭೇಟಿ ನೀಡಿ ಸ್ಥಳದಲ್ಲಿ ಚರಂಡಿಯ ಹೂಳೆತ್ತಲು ಸೂಚನೆ ನೀಡಿದರು. ಆದ್ದರಿಂದ ಕಾಮಗಾರಿ ಆರಂಭವಾಗಿದೆ. 

ಗುರು ಮುಂಡಾಜೆ

ಟಾಪ್ ನ್ಯೂಸ್

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

UGC

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.