ಮುಚ್ಚಿ ಹೋದ ಚರಂಡಿ, ರಸ್ತೆಯಲ್ಲೇ ನೀರಿನ ಹರಿವು


Team Udayavani, Jun 12, 2018, 2:20 AM IST

nere-11-6.jpg

ಸುಬ್ರಹ್ಮಣ್ಯ: ಕುಮಾರಧಾರೆ- ಸುಬ್ರಹ್ಮಣ್ಯ ಸಹಿತ ಇಲ್ಲಿನ ನಗರದಲ್ಲಿ ಬಳಕೆಯಲ್ಲಿರುವ ರಸ್ತೆಗಳು ಸೂಕ್ತ ಚರಂಡಿ ನಿರ್ವಹಣೆಯ ಸಮಸ್ಯೆ ಎದುರಿಸುತ್ತಿದೆ. ರಸ್ತೆ ಬದಿ ಇನ್ನೂ ಚರಂಡಿ ನಿರ್ಮಾಣವಾಗದೇ ಅಲ್ಲಲ್ಲಿ  ಕೃತಕ ನೀರಿನ ಕೊಳಗಳು ಕಾಣಿಸುತ್ತಿದೆ. ನಗರದ ಬಹುತೇಕ ರಸ್ತೆಗಳು ಚರಂಡಿ ಕಾಣದೆ ಮಳೆ ನೀರು ಸಂಪೂರ್ಣ ರಸ್ತೆಯಲ್ಲಿ ಹರಿಯುತ್ತಿದ್ದು, ವಾಹನ ಸವಾರರೂ ಸೇರಿದಂತೆ ಸಾರ್ವಜನಿಕರ ತೀವ್ರ ಕಷ್ಟಪಡುತ್ತಿದ್ದಾರೆ.

ಕುಮಾರಧಾರೆ – ಕಾಶಿಕಟ್ಟೆ ನಡುವಿನ ಪ್ರಮುಖ ಸಂಪರ್ಕ ರಸ್ತೆ ಈ ಹಿಂದೆ ಲೊಕೋಪಯೋಗಿ ಇಲಾಖೆಗೆ ಒಳಪಟ್ಟಿತ್ತು. ಬಳಿಕ ಅದೀಗ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಆಡಳಿತಕ್ಕೆ ಹಸ್ತಾಂತರಗೊಂಡಿದೆ. ಈ ರಸ್ತೆ ದೇಗುಲದ ಮಾಸ್ಟರ್‌ ಪ್ಲಾನ್‌ ಯೋಜನೆಯಲ್ಲಿ ಸೇರಿದ್ದು, ಚತುಷ್ಪಥ ರಸ್ತೆಯಾಗಿ ಅಭಿವೃದ್ಧಿ ಹೊಂದಲಿದೆ. ಇದಕ್ಕೆಂದು ಕುಮಾರಧಾರೆ – ಕಾಶಿಕಟ್ಟೆ ನಡುವೆ ಮಾರ್ಗದ ವಿಸ್ತರಣೆ ಕಾಮಗಾರಿ ಸಾಕಷ್ಟು ಮುಂಚಿತವೇ ನಡೆಸಿದ್ದು ಕಾಮಗಾರಿ ಅರ್ಧಕ್ಕೆ ನಿಂತಿದೆ. ಈ ಮಾರ್ಗದ ಎರಡೂ ಬದಿ ಸೂಕ್ತ ಚರಂಡಿ ಇಲ್ಲದೆ ಮಳೆಗೆ ನೀರು ರಸ್ತೆಯಲ್ಲಿ ಸಂಗ್ರವಾಗಿ ಸಮಸ್ಯೆಗೆ ಎಡೆಮಾಡಿಕೊಡುತ್ತಿದೆ.


ಸಂಪೂರ್ಣ ಅಸ್ತವ್ಯಸ್ತ

ಕುಮಾರಧಾರ ಪ್ರವೇಶ ದ್ವಾರ, ಪೆಟ್ರೋಲ್‌ ಪಂಪ್‌ ಬಳಿ, ಜೂನಿಯರ್‌ ಕಾಲೇಜು ಬಳಿ, ಕೆ.ಎಸ್‌.ಎಸ್‌. ಕಾಲೇಜು ಬಳಿ, ಬಿಲದ್ವಾರ, ಕಾಶಿಕಟ್ಟೆ ವೃತ್ತ, ಕೆ.ಎಸ್‌.ಆರ್‌.ಟಿ.ಸಿ. ಬಸ್‌ ನಿಲ್ದಾಣ ಮುಂಭಾಗದಲ್ಲಿ ಮಳೆ ನೀರು ರಸ್ತೆಗೆ ಹರಿದು ಸಂಚಾರ ವೇಳೆ ದೊಡ್ಡ ಪ್ರಮಾಣದ ಅಡಚಣೆಯಾಗುತ್ತಿದೆ. ಮಾರ್ಗದ ಎರಡು ಬದಿ ತಾತ್ಕಾಲಿಕ ಚರಂಡಿ ವ್ಯವಸ್ಥೆಯನ್ನು ದೇಗುಲದ ವತಿಯಿಂದ ನಡೆಸಿಲ್ಲ. ದೇಗುಲದ ರಸ್ತೆ ಕಾಶಿಕಟ್ಟೆ- ಹನುಮನ ದೇಗುಲದ ಬಳಿಯ ಬೆ„ಪಾಸ್‌ ರಸ್ತೆ ಕೂಡ ಚರಂಡಿ ಇಲ್ಲದೆ ರಸ್ತೆ ಹಾಗೂ ಇಲ್ಲಿನ ಪಾರ್ಕಿಂಗ್‌ ಸ್ಥಳಗಳಿಗೆ ನೀರು ನುಗ್ಗುತ್ತಿವೆ. ಕೆ.ಎಸ್‌.ಆರ್‌.ಟಿ.ಸಿ. ಸಮೀಪ ಆದಿಸುಬ್ರಹ್ಮಣ್ಯ ಹಾಗೂ ಸರ್ಪಸಂಸ್ಕಾರ ಯಾಗ ಶಾಲೆಗೆ ತೆರಳುವ ರಸ್ತೆ ಬದಿ ಕೂಡ ಚರಂಡಿ ತೆಗೆಯದೆ ಮತ್ತಷ್ಟೂ ಬವಣೆ ಪಡುವಂತಾಗಿದೆ.

ನಿರ್ವಹಣೆಯ ತೊಡಕು
ನಗರ ವ್ಯಾಪ್ತಿಯಲ್ಲಿ ಸ್ಥಳೀಯಾಡಳಿತ ನಿರ್ವಹಣೆಯ ಹಲವು ರಸ್ತೆಗಳು ಇದ್ದು ಅವುಗಳ ಚರಂಡಿ ನಿರ್ವಹಣೆ ಕೂಡ ಈ ಭಾರಿ ನಡೆದಿಲ್ಲ. ಹೀಗಾಗಿ ನಗರದ ಎಲ್ಲ ರಸ್ತೆಗಳ ಮೇಲೆ ಮಳೆ ನೀರು ಹರಿದು ಹೋಗುತ್ತಿದೆ. ಮಳೆಗೆ ಗುಡ್ಡ ಪ್ರದೇಶದಿಂದ ರಸ್ತೆಗೆ ಹರಿಯುವ ಮಳೆ ನೀರಿನ ಜತೆ ಕಲ್ಲು ಮಣ್ಣುಗಳು ರಸ್ತೆಗೆ ಹರಿದು, ಅಲ್ಲಲ್ಲಿ ಕೆಸರು ಮಣ್ಣು ಶೇಖರಣೆಗೊಳ್ಳುತ್ತಿದೆ. ತಗ್ಗು ಪ್ರದೇಶಗಳತ್ತ ನೀರು ಹರಿದು ರಸ್ತೆಗಳು ಕೆರೆಗಳಾಗಿ ಪರಿವರ್ತನೆ ಆಗಿವೆ. ರಸ್ತೆ ಕೂಡ ಕಿರಿದಾಗಿದ್ದು ಹೂಳು ತುಂಬಿಕೊಂಡಿದೆ.

ಸಂಕಷ್ಟ ತಪ್ಪಿದಲ್ಲ
ರಸ್ತೆ ಮಧ್ಯೆ ಆಳವಾದ ಗುಂಡಿಗಳಲ್ಲಿ ನೀರು ನಿಂತುಕೊಂಡಿದೆ. ದ್ವಿಚಕ್ರ ಸವಾರರು ಗುಂಡಿಯ ಆಳ ಅರಿಯದೇ ನಿಯಂತ್ರಣ ಕಳೆದುಕೊಳ್ಳುತ್ತಿದ್ದಾರೆ. ನಡೆದುಕೊಂಡು ರಸ್ತೆಯಲ್ಲಿ ಸಂಚರಿಸುವ ವಾಹನಗಳಿಂದ ಚಿಮ್ಮುವ ಕೊಳಚೆ ನೀರು ವಿದ್ಯಾರ್ಥಿಗಳ ಹಾಗೂ ಭಕ್ತರ ಮೇಲೆ ಚಿಮ್ಮುತ್ತಿದೆ.

ಅನುದಾನ ಬೇಕಿದೆ
ನಗರದ ಪ್ರಮುಖ ರಸ್ತೆಗಳು ದೇಗುಲಕ್ಕೆ ಹಸ್ತಾಂತರಗೊಂಡಿದೆ. ಹೀಗಾಗಿ ದೇಗುಲ ರಸ್ತೆಗಳನ್ನು ನಿರ್ವಹಣೆ ಹೊಣೆ ಹೊತ್ತಿದೆ. ತಾತ್ಕಾಲಿಕ ಚರಂಡಿ ನಿರ್ಮಾಣಕ್ಕೆ ದೇಗುಲ ಕಡೆಯಿಂದ ಹಣ ಒದಗಿಸಿದರೆ ಕೆಲಸ ಆರಂಭಿಸುತ್ತೇವೆ. 
– ಶ್ರೀ ಕಾಂತ ರಾವ್‌, ಪಿ.ಡಬ್ಲ್ಯೂ.ಡಿ. ಅಧಿಕಾರಿ

ಮನವಿ ಮಾಡುತ್ತೇವೆ
ಸೂಕ್ತವಾದ ರಸ್ತೆಗಳಲ್ಲಿ ಮಳೆ ನೀರು ಹರಿದು ಹೋಗಿ ಸಮಸ್ಯೆ ಆಗುತ್ತಿರುವುದು ನಿಜ. ರಸ್ತೆಗಳ ಬದಿ ತಾತ್ಕಾಲಿಕ ಚರಂಡಿ ನಿರ್ಮಿಸಲು ದೇಗುಲಕ್ಕೆ ಪಂಚಾಯತ್‌ ಕಡೆಯಿಂದ ಮನವಿ ಮಾಡುತ್ತೇವೆ. 
– ಯು.ಡಿ. ಶೇಖರ, ಸುಬ್ರಹ್ಮಣ್ಯ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ

— ಬಾಲಕೃಷ್ಣ ಬೀಮಗುಳಿ

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.