ತಾಲೂಕು ಕೇಂದ್ರ ಬೆಳ್ತಂಗಡಿಯಲ್ಲಿ ಚರಂಡಿ ಅವ್ಯವಸ್ಥೆ


Team Udayavani, May 28, 2018, 5:45 AM IST

drainage-27-5.jpg

ಬೆಳ್ತಂಗಡಿ: ಜಿಲ್ಲೆಯಾದ್ಯಂತ ನಿರೀಕ್ಷೆಗೂ ಮುನ್ನವೇ ಉತ್ತಮ ಮಳೆಯಾಗುತ್ತಿದೆ. ಆದರೆ ತಾಲೂಕು ಕೇಂದ್ರ ಬೆಳ್ತಂಗಡಿ ಸಹಿತ ಎಲ್ಲೂ ಚರಂಡಿ ನಿರ್ವಹಣೆ ಸಮರ್ಪಕವಾಗಿ ಮಾಡದಿರುವುದರಿಂದ ಮಳೆ ನೀರು ರಸ್ತೆಯಲ್ಲಿ ಹರಿದು ಸಮಸ್ಯೆ ಉಂಟು ಮಾಡುತ್ತಿದೆ. ತಾಲೂಕಿನಾದ್ಯಂತ ಪ್ರತಿದಿನ ಉತ್ತಮ ಮಳೆಯಾಗುತ್ತಿದೆ. ಹತ್ತು ದಿನಗಳೊಳಗಾಗಿ ಮುಂಗಾರು ಪ್ರವೇಶಿಸುವ ಮುನ್ಸೂಚನೆಯನ್ನೂ ಮೊದಲೇ ನೀಡಲಾಗಿದೆ. ಆದರೆ ತಾಲೂಕಿನ ಚರಂಡಿಗಳ ನಿರ್ವಹಣೆ ಇನ್ನೂ ನಡೆದಿಲ್ಲ. ಹೆದ್ದಾರಿಯಲ್ಲೇ ನೀರು ಹರಿಯುವುದನ್ನು ಜನಪ್ರತಿನಿಧಿಗಳು ಗಮನಿಸಿದರೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಕೆಸರಿನಿಂದ ಪಾದಚಾರಿಗಳು ಸಮರ್ಪಕವಾಗಿ ನಡೆದಾಡಲೂ ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ.


ರಸ್ತೆಯಲ್ಲೇ ಮಳೆ ನೀರು

ರಾ.ಹೆ. ತಾಲೂಕಿನ ಕೇಂದ್ರಭಾಗದಲ್ಲಿ ಹಾದುಹೋಗಿದ್ದರೂ ಯಾವುದೇ ನಿರ್ವಹಣೆ ಕಾರ್ಯ ಮಾಡಿಲ್ಲ. ಮುಖ್ಯವಾಗಿ ಈ ರಸ್ತೆಗೆ ಸಮರ್ಪಕ ರಸ್ತೆ ಚರಂಡಿ ವ್ಯವಸ್ಥೆ ಇಲ್ಲವಾಗಿದ್ದು, ರಸ್ತೆಯಲ್ಲೇ ಮಳೆನೀರು ಹರಿದು ಹೋಗುತ್ತಿದೆ. ಚರಂಡಿ ನೆಪ ಮಾತ್ರಕ್ಕೆ ಇದ್ದು, ಮಳೆನೀರು ಮಾತ್ರ ರಸ್ತೆಯ ಮೇಲೆ ಹರಿದು ವಾಹನ ಸವಾರರಿಗೆ ಕಂಟಕವಾಗಿ ಪರಿಣಮಿಸುತ್ತಿದೆ. ಈ ಬಗ್ಗೆ ಈಗಾಗಲೇ ಸಂಬಂಧಪಟ್ಟವರ ಗಮನ ಸೆಳೆದಿದ್ದರೂ ಪರಿಣಾಮ ಮಾತ್ರ ಶೂನ್ಯ ಎಂಬಂತಾಗಿದೆ. ಕೆಲವೆಡೆ ಹೊಂಡಗಳಲ್ಲಿ ಮಳೆನೀರು ನಿಂತು ಸಾಂಕ್ರಾಮಿಕ ರೋಗಗಳ ಮೂಲವಾಗಿ ಪರಿಣಮಿಸುತ್ತಿದೆ. ಗುರುವಾಯನಕೆರೆಯಿಂದ ಆರಂಭವಾಗಿ ಉಜಿರೆವರೆಗೂ ಇಂತಹ ಸಮಸ್ಯೆ ಸಾಮಾನ್ಯವಾಗಿದೆ. ಇದರಿಂದ ಜನತೆಗೆ ಮುಕ್ತಿ ದೊರೆಯಬೇಕಾದ ಅಗತ್ಯತೆ ಇದೆ.

ವಾಹನ ಸವಾರರಿಗೆ ಅಪಾಯ
ರಸ್ತೆ ಬದಿಗಳಲ್ಲಿ ಕೆಸರು ನೀರು ನಿಲ್ಲುವುದರಿಂದ ದ್ವಿಚಕ್ರ ವಾಹನಗಳು ಸ್ಕಿಡ್‌ ಆಗುವ ಸಾಧ್ಯತೆಗಳು ಹೆಚ್ಚಾಗಿವೆ.  ಪಟ್ಟಣದ ಕೆಲವು ಪ್ರದೇಶಗಳಲ್ಲಿ ಹೊಂಡ/ಅಂಚುಗಳು ಸೃಷ್ಟಿಯಾಗಿದ್ದು ಅಪಘಾತ ಸಂಭವಿಸುವ ಸಾಧ್ಯತೆಗಳು ಹೆಚ್ಚಾಗಿವೆ.

ನಿರ್ವಹಣೆಯಾಗಬೇಕಿದೆ
ಹೆದ್ದಾರಿಯ ಇಕ್ಕೆಲಗಳಲ್ಲಿ ಚರಂಡಿ ಇದ್ದರೂ ಸಮರ್ಪಕವಾಗಿ ನಿರ್ವಹಣೆ ಮಾಡದಿರುವುದರಿಂದ ಸಮಸ್ಯೆ ಉಲ್ಬಣಿಸಿದೆ. ನಗರ ಪ್ರದೇಶದಲ್ಲೇ ಚರಂಡಿಗಳಲ್ಲಿ ಗಿಡಗಂಟಿ ಬೆಳೆದು ನೀರು ಹರಿದು ಹೋಗದ ಪರಿಸ್ಥಿತಿ ನಿರ್ಮಾಣವಾಗಿದೆ. ಕೆಲವು ಭಾಗಗಳಲ್ಲಿ ಮಳೆನೀರು ಚರಂಡಿಗೆ ಸೇರಲು ಸಮರ್ಪಕ ವ್ಯವಸ್ಥೆ ಮಾಡದಿರುವುದರಿಂದ ಹೆಚ್ಚಿನ ಸಮಸ್ಯೆ ಉಂಟಾಗುತ್ತಿದೆ. ಕೆಲವು ಪ್ರದೇಶಗಳಲ್ಲಿ ಖಾಸಗಿಯವರು ಮಾರ್ಗ ನಿರ್ಮಿಸುವಾಗ ಸಮರ್ಪಕ ಕೊಳವೆ ಅಥವಾ ಮೋರಿ ರಚಿಸದೆ ನೀರು ಹರಿಯುವ ದಿಕ್ಕು ಬದಲಾಗುತ್ತಿದೆ. ಚರಂಡಿಯನ್ನು ದುರಸ್ತಿಗೊಳಿಸಿ, ಮಳೆ ನೀರು  ಹರಿಯಲು ಸಣ್ಣ ಬದುಗಳ ವ್ಯವಸ್ಥೆ ಮಾಡಿದಲ್ಲಿ ಸಮಸ್ಯೆ ಪರಿಹರಿಸಬಹುದು.

ಎರಡು ದಿನಗಳಲ್ಲಿ ಕಾಮಗಾರಿ
ವಿಧಾನ ಪರಿಷತ್‌ ಚುನಾವಣೆ ಇರುವುದರಿಂದ ನೀತಿಸಂಹಿತೆಯಿಂದ ಕಾಮಗಾರಿ ನಡೆಸಲು ಅಡ್ಡಿಯಾಗಿದೆ. ಆದರೂ ಚರಂಡಿ ನಿರ್ವಹಣೆಗೆ ಈಗಾಗಲೇ ಎಂಜಿನಿಯರ್‌ ಗಳಿಗೆ ಸೂಚಿಸಲಾಗಿದೆ. ನಗರದ ಪ್ರಮುಖ ಪ್ರದೇಶಗಳಲ್ಲಿ ಎರಡು ದಿನಗಳಲ್ಲಿ ಕಾಮಗಾರಿ ಆರಂಭಗೊಳ್ಳಲಿದೆ.
– ಮುಗುಳಿ ನಾರಾಯಣ ರಾವ್‌, ಪಟ್ಟಣ ಪಂಚಾಯತ್‌ ಅಧ್ಯಕ್ಷರು

ಟಾಪ್ ನ್ಯೂಸ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Naxal: ಕೂಜಿಮಲೆ: ಮತ್ತೆ ನಕ್ಸಲ್‌ ಸಂಚಾರ? ಎಎನ್‌ಎಫ್ ಶೋಧ ಚುರುಕು!

Naxal: ಕೂಜಿಮಲೆ: ಮತ್ತೆ ನಕ್ಸಲ್‌ ಸಂಚಾರ? ಎಎನ್‌ಎಫ್ ಶೋಧ ಚುರುಕು!

Puttur; ಮನೆಯೊಳಗೆ ಬೆಂಕಿ ಅವಘಡ

Puttur; ಮನೆಯೊಳಗೆ ಬೆಂಕಿ ಅವಘಡ

Puttur; ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದಲ್ಲೇ ಚೂರಿ ಇರಿತ

Puttur; ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದಲ್ಲೇ ಚೂರಿ ಇರಿತ

2-kadaba

Kadaba ತಾಲೂಕು ಪಂಚಾಯತ್ ಕಚೇರಿಗೆ ಬೆಳ್ಳಂಬೆಳ್ಳಗೆ ಲೋಕಾಯುಕ್ತ ದಾಳಿ

Kadaba ಗೋಳಿತ್ತಡಿಯ ಮನೆಯಿಂದ ಕಳವು ಪ್ರಕರಣ; ಇಬ್ಬರ ಸೆರೆ

Kadaba ಗೋಳಿತ್ತಡಿಯ ಮನೆಯಿಂದ ಕಳವು ಪ್ರಕರಣ; ಇಬ್ಬರ ಸೆರೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.