ಬಾವಿಗೆ ಹರಿಯುವ ಒಳಚರಂಡಿ ನೀರು: ಸಂಕಷ್ಟದಲ್ಲಿ ಸ್ಥಳೀಯರು

ಉದಯನಗರ: ಅಂತರ್ಜಲ ಸಂಪೂರ್ಣ ಕಲುಷಿತ

Team Udayavani, Jun 2, 2019, 11:04 AM IST

0106MLR7

ಉದಯನಗರ ಪ್ರದೇಶದಲ್ಲಿ ಅಂತರ್ಜಲ ಸಂಪೂರ್ಣ ಕಲುಷಿತಗೊಂಡಿರುವುದು.

ಮಹಾನಗರ: ಒಳಚರಂಡಿ ನೀರು ನೇರವಾಗಿ ಬಾವಿಗಳಿಗೆ ಒಸರುತ್ತಿರುವ ಕಾರಣ ನಗರದ ಕೆಪಿಟಿ ಉದಯನಗರ ಪ್ರದೇಶದಲ್ಲಿ ಈಗ ಅಂತರ್ಜಲ ಸಂಪೂರ್ಣ ಕಲುಷಿತಗೊಂಡಿದ್ದು, ನೀರಿನ ಸಮಸ್ಯೆ ಉಲ್ಭಣಿಸಿದೆ.

ಕೆಪಿಟಿ ಉದಯನಗರ ಬಳಿ ಸುತ್ತಲಿನ 20ಕ್ಕೂ ಹೆಚ್ಚು ಮನೆಗಳಿಗೆ ನೀರು ಪೂರೈಸುವ ಎರಡು ಬಾವಿಗಳಿಗೆ ಮೂರು ವರ್ಷಗಳಿಂದ ಒಳಚರಂಡಿ ನೀರು ಸೇರುತ್ತಿದೆ. ಇದರಿಂದಾಗಿ ಈ ಬಾವಿಯಲ್ಲಿ ನೀರಿದ್ದರೂ ಉಪಯೋಗಿಸಲು ಸಾಧ್ಯವಾಗುತ್ತಿಲ್ಲ. ನಗರದಲ್ಲಿ ನೀರಿನ ಸಮಸ್ಯೆ ಉಂಟಾಗಿರುವುದರಿಂದ ಪಾಲಿಕೆ ಪೂರೈಸುವ ನೀರೂ ಲಭ್ಯವಾಗದೇ ಸ್ಥಳೀಯರು ಸಂಕಷ್ಟಕ್ಕೀಡಾಗಿದ್ದಾರೆ.

ಈ ಎರಡೂ ಬಾವಿಯಲ್ಲಿ ಸಮೃದ್ಧವಾಗಿ ನೀರಿನ ಒರತೆಯಿದೆ. ಕಡು ಬೇಸಗೆಯಲ್ಲೂ ಇಲ್ಲಿ ನೀರು ಬತ್ತಿದ ಉದಾಹರಣೆಯಿಲ್ಲ. ಈಗಲೂ ಅವುಗಳಲ್ಲಿ ಮೂರು ಅಡಿಗಿಂತಲೂ ಹೆಚ್ಚು ನೀರಿದೆ. ಸ್ಥಳೀಯರು ಕುಡಿಯಲು, ಬಟ್ಟೆ ಒಗೆಯಲು ಈ ಬಾವಿಗಳ ನೀರು ಉಪಯೋಗಿಸುತ್ತಿದ್ದರು. ಆದರೆ ಪಕ್ಕದಲ್ಲೇ ಇರುವ ಕಲ್ಲಿನಿಂದ ನಿರ್ಮಿಸಿದ ಒಳಚರಂಡಿಯ ತ್ಯಾಜ್ಯ ನೀರು ಸೋರಿಕೆಯಾಗಿ ಬಾವಿಗಳನ್ನು ಸೇರಲಾರಂಭಿಸಿದಾಗ ಅವುಗಳ ನೀರು ಕಲುಷಿತಗೊಂಡು ಕಪ್ಪು ಬಣ್ಣಕ್ಕೆ ತಿರುಗಿದೆ. ಮೇಲ್ಭಾಗದಲ್ಲಿ ಇರುವ ಕೆರೆಯ ನೀರು ಬಾವಿಯ ಪಕ್ಕದಲ್ಲಿ ಹರಿಯುತ್ತಿತ್ತು. ಈಗ ಚರಂಡಿ ತ್ಯಾಜ್ಯ ಹರಿಯುತ್ತಿದೆ. ಇದರಿಂದ ಸೊಳ್ಳೆ ಕಾಟವೂ ಹೆಚ್ಚಾಗಿದೆ.

ಸ್ಪಂದಿಸದ ಆಡಳಿತ
ಜೀವಜಲ ಮಲಿನಗೊಂಡ ಕಾರಣ ಸ್ಥಳೀಯರು ಎರಡೂ ಬಾವಿಗಳ ನೀರನ್ನು ಖಾಲಿ ಮಾಡಿ, ಶುದ್ಧಜಲ ದೊರೆಯುತ್ತದೆಯೋ ಎಂದು ಪ್ರಯತ್ನ ನಡೆಸಿದ್ದಾರೆ. ಆದರೆ ತ್ಯಾಜ್ಯ ನೀರು ನಿರಂತರ ಸೋರಿಕೆಯಿಂದ ಈ ಪ್ರಯತ್ನಕ್ಕೆ ಫಲ ಸಿಕ್ಕಿಲ್ಲ. ತ್ಯಾಜ್ಯ ನೀರು ಸೋರಿಕೆ ವಿಷಯವನ್ನು ಜನಪ್ರತಿನಿಧಿಗಳು, ಪಾಲಿಕೆ ಅಧಿಕಾರಿಗಳ ಗಮನಕ್ಕೆ ಹಲವು ಬಾರಿ ತಂದರೂ ಪ್ರಯೋಜನ ಆಗಿಲ್ಲ. ಒಂದು ಬಾರಿ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಸೋರಿಕೆಯಾಗುವ ಗಟಾರ ಪರಿಶೀಲಿಸಿ ತೆರಳಿದವರು ಮತ್ತೆ ಬಂದಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಾಲಿಕೆಯಿಂದ ನೀರು ಪೂರೈಕೆಗೆ ರೇಷನಿಂಗ್‌ ವ್ಯವಸ್ಥೆ ಜಾರಿಗೊಳಿಸಿದ ಬಳಿಕ ಇಲ್ಲಿನ ಜನರಿಗೆ ನೀರಿನ ಕೊರತೆ ಉಂಟಾಗಿದೆ. ಬಾವಿಗಳ ನೀರು ಬಳಕೆಗೆ ಲಭ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳು, ಮನಪಾ ಅಧಿಕಾರಿಗಳು ಒಳಚರಂಡಿ ಸುವ್ಯವಸ್ಥಿತಗೊಳಿಸಿ, ತ್ಯಾಜ್ಯ ನೀರು ಸೋರಿಕೆ ತಡೆಗಟ್ಟಲು ಕ್ರಮ ಕೈಗೊಳ್ಳಬೇಕು, ಬಾವಿ ನೀರು ಖಾಲಿ ಮಾಡಿ, ಸ್ವಚ್ಛಗೊಳಿಸಿ, ಬಳಕೆಗೆ ಯೋಗ್ಯವಾಗುವಂತೆ ಮಾಡಬೇಕು ಎಂಬುದು ಸ್ಥಳೀಯರ ಆಗ್ರಹ.

ತ್ಯಾಜ್ಯ ನೀರು ಒಸರದಂತೆ ಮಾಡಿ

ನಮ್ಮ ಮನೆ ಪಕ್ಕದ ಬಾವಿಯಲ್ಲಿ ನಾನು ಸಣ್ಣವನಿದ್ದಾಗಿನಿಂದಲೇ ಸಮೃದ್ಧವಾದ ನೀರಿನ ಒರತೆ ಇದೆ. ಅಲ್ಲಿ ಗಟಾರ ನಿರ್ಮಾಣವಾದ ಬಳಿಕ ಸಮಸ್ಯೆ ಕಾಣಿಸಿಕೊಂಡಿದೆ. ಒಳಚರಂಡಿ ನೀರು ಬಾವಿಗಳಿಗೆ ಸೇರ್ಪಡೆಗೊಂಡು ಬಾವಿ ನೀರು ಬಳಸದಂತಾಗಿದೆ. ಮನಪಾ ಅಧಿಕಾರಿಗಳು ಒಳಚರಂಡಿಗೆ ಕಾಂಕ್ರೀಟ್ ಹಾಕುವ ಮೂಲಕ ನೀರು ಒಸರದಂತೆ ಮಾಡಬೇಕು.
– ಮನೋಹರ ದೇವಾಡಿಗ,ಸ್ಥಳೀಯರು

ಮತ್ತೆ ಸಮಸ್ಯೆ ಆರಂಭ

ಎರಡು ವರ್ಷಗಳ ಹಿಂದೆ ಈ ಬಾವಿಗಳಿಗೆ ಕೊಳಚೆ ನೀರು ಸೇರುತ್ತಿತ್ತು. ದೂರು ಬಂದ ಹಿನ್ನಲೆಯಲ್ಲಿ ಕಾಮಗಾರಿ ನಡೆಸಲಾಗಿತ್ತು. ಮತ್ತೆ ಸಮಸ್ಯೆ ಎದುರಾಗಿರಲಿಲ್ಲ. ಇದೀಗ ಮತ್ತೆ ಸಮಸ್ಯೆ ಆರಂಭವಾಗಿದೆ.
– ಮಹಾಬಲ ಮಾರ್ಲ,

ಮಾಜಿ ಕಾರ್ಪೊರೇಟರ್‌

ಗಮನಕ್ಕೆ ತಂದರೆ ಕ್ರಮ

ಈ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ. ಯಾರಾದರೂ ನನ್ನ ಗಮನಕ್ಕೆ ತಂದರೆ ಅಧಿಕಾರಿಗಳಲ್ಲಿ ಸ್ಥಳ ಪರಿಶೀಲನೆ ಮಾಡಿಸಿ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು.
– ನಾರಾಯಣಪ್ಪ,

ಪಾಲಿಕೆ ಪ್ರಭಾರ ಆಯುಕ್ತರು

ಟಾಪ್ ನ್ಯೂಸ್

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.