ಬಾವಿಗಳಿಗೆ ಒಳಚರಂಡಿ ನೀರು
Team Udayavani, Jan 13, 2018, 9:36 AM IST
ಮಹಾನಗರ: ಕುಲಶೇಖರದ ಮೇಗಿನಮನೆ ಪ್ರದೇಶದಲ್ಲಿ ಒಳಚರಂಡಿ ನೀರು ಸೋರಿಕೆಯಾಗಿ ಸುಮಾರು 10ಕ್ಕೂ ಅಧಿಕ ಬಾವಿಗಳ ನೀರು ಸಂಪೂರ್ಣ ಕಲುಷಿತಗೊಂಡಿದ್ದು, ಈ ಬಗ್ಗೆ ಉದಯವಾಣಿ ಸುದಿನ ಬಾವಿಗೆ ಬರುತ್ತಿದೆ ಮೋರಿ ನೀರು ಅಧಿಕಾರಿಗಳೆಲ್ಲಿಹರು? ಶೀರ್ಷಿಕೆಯಡಿ ಲೇಖನ ಪ್ರಕಟಿಸಿತ್ತು. ಆದಾದ ಬಳಿಕ ಮೇಯರ್ ಕವಿತಾ ಸನಿಲ್ ಮತ್ತು ತಂಡ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿತು.
12 ಬಾವಿಗಳಿಗೆ ಡ್ರೈನೇಜ್ ನೀರು ಹೋಗಿ ಕಲುಷಿತಗೊಂಡಿರುವುದು ನಿಜ. ಈ ನಿಟ್ಟಿನಲ್ಲಿ ಅಮೃತ್ ಯೋಜನೆಯಡಿ ಕಾಮಗಾರಿ ಕೈಗೆತ್ತಿಕೊಳ್ಳಲು ನಿರ್ಧರಿಸಲಾಗಿದ್ದು, ಅಧಿಕಾರಿಗಳ ಬಳಿ ಆರ್ ಸಿಸಿ ಛೇಂಬರ್ ನಿರ್ಮಿಸಲು ಸೂಚನೆ ನೀಡಲಾಗಿದೆ. ಸಮಸ್ಯೆ ಸಂಪೂರ್ಣ ಬಗೆಹರಿಯಬೇಕಾದರೆ ಈ ಕಾಮಗಾರಿ ನಡೆಯುವ ವೇಳೆ ಸಾರ್ವಜನಿಕರ ಸಂಪೂರ್ಣ ಸಹಕಾರ ಬೇಕಾಗುತ್ತದೆ ಎಂದರು.
ನಗರ ಯೋಜನ ಸ್ಥಾಯೀ ಸಮಿತಿ ಅಧ್ಯಕ್ಷ ರವೂಫ್, ಕಾರ್ಪೊರೇಟರ್ ಅಜೀಜ್ ಬೈಕಂಪಾಡಿ ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್
Amruthapura: ಅಮೃತಪುರವೆಂಬ ಅದ್ಭುತ ತಾಣ