ಚರಂಡಿ ಹೂಳು ತೆಗೆಯುವ ಕಾರ್ಯ
Team Udayavani, Mar 22, 2022, 12:25 PM IST
ಕೈಕಂಬ: ಗುರುಪುರ ಕೈಕಂಬ ಪೇಟೆಯ ರಸ್ತೆ ಬದಿಯ ಎರಡು ಚರಂಡಿಗಳಲ್ಲಿ ತ್ಯಾಜ್ಯ ನೀರು ನಿಂತು ಸೊಳ್ಳೆಗಳು ಉತ್ಪತ್ತಿಯ ಬಗ್ಗೆ ಸಾರ್ವಜನಿಕರ ಬಜಪೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದೂರು ನೀಡಿದ್ದರು. ಈ ಬಗ್ಗೆ ಉದಯವಾಣಿ ಸುದಿನದಲ್ಲಿ ವರದಿ ಪ್ರಕಟಿಸಿ ಸಂಬಂಧಪಟ್ಟವರನ್ನು ಗಮನಸೆಳೆಯಲಾಗಿತ್ತು.
ವರದಿಗೆ ಸ್ಪಂದಿಸಿದ ಗಂಜಿಮಠ ಗ್ರಾ.ಪಂ. ಸ್ಥಳೀಯಾಡಳಿವು ಶುಕ್ರವಾರದಿಂದ ರವಿವಾರದ ವರೆಗೆ ಜೇಸಿಬಿ ಮೂಲಕ ಚರಂಡಿ ಹೂಳು ತೆಗೆಯುವ ಕಾರ್ಯ ಕೈಗೊಳ್ಳಲಾಗಿದೆ.
ಇದರಿಂದಾಗಿ ಹೊಟೇಲ್, ಮೀನು ಮಾರುಕಟ್ಟೆ, ಅಂಗಡಿಗಳ ತ್ಯಾಜ್ಯ ನೀರು ಸರಾಗವಾಗಿ ಹರಿದು ಹೋಗುವಂತಾಗಿದೆ. ಹೊಟೇಲ್, ಮಾರುಕಟ್ಟೆಯಿಂದ ತ್ಯಾಜ್ಯ ನೀರು ಚರಂಡಿಗೆ ಬಿಡುವುದರಿಂದ ಕೆಲವೆಡೆ ಇನ್ನೂ ತ್ಯಾಜ್ಯ ನೀರು ನಿಂತಿದೆ. ತ್ಯಾಜ್ಯ ನೀರಿಗೆ ಸಮರ್ಪಕ ವ್ಯವಸ್ಥೆಯನ್ನು ಗ್ರಾಮ ಪಂಚಾಯತ್ ಮಾಡಬೇಕಾಗಿದೆ.
ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ, ಚರಂಡಿ ವ್ಯವಸ್ಥೆ ಇಲಾಖೆಯೇ ಮಾಡುವ ಕಾರಣ ಗುರುಪುರ ಕೈಕಂಬದ ಪೇಟೆಯ ತ್ಯಾಜ್ಯ ನೀರು ಚರಂಡಿಯನ್ನು ಗ್ರಾ.ಪಂ. ಮಾಡುವಂತಿಲ್ಲ ಎಂದು ಹೇಳಲಾಗಿದೆ. ನೀರು ನಿಲ್ಲದಂತೆ ಸೊಳ್ಳೆ ಉತ್ಪತ್ತಿಯಾಗದಂತೆ ಮುನ್ನೆಚ್ಚರಿಕೆ ವಹಿಸುವುದು ಅಗತ್ಯವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ
Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್
Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ