ದಟ್ಟ: ಟ್ಯಾಂಕ್‌ ಇದ್ದರೂ ನೀರು ಬಿಡುತ್ತಿಲ್ಲ


Team Udayavani, Apr 27, 2018, 8:20 AM IST

Tank-25-4.jpg

ಕೆಯ್ಯೂರು: ಕೆಯ್ಯೂರು ಗ್ರಾ.ಪಂ. ವ್ಯಾಪ್ತಿಯ ದಟ್ಟ ಎಂಬಲ್ಲಿ ಲಕ್ಷಾಂತರ ರೂ. ವ್ಯಯಿಸಿ ನಿರ್ಮಿಸಿದ ಕುಡಿಯುವ ನೀರಿನ ಟ್ಯಾಂಕ್‌ ಬಳಸದೆ ಬರೋಬ್ಬರಿ ಮೂರು ವರ್ಷ ಸಂದಿದೆ. ಈ ಪರಿಸರದ 40ಕ್ಕೂ ಅಧಿಕ ಮನೆಗಳಿಗೆ ಕುಡಿಯುವ ನೀರಿನ ಕೊರತೆ ಇದ್ದರೂ ಸ್ಥಳೀಯಾಡಳಿತ ಟ್ಯಾಂಕ್‌ ಸದ್ಬಳಕೆಗೆ ಚಿಂತನೆ ನಡೆಸಿಲ್ಲ. ಸುಸಜ್ಜಿತ ಟ್ಯಾಂಕ್‌ ಇದ್ದರೂ, ಜನರಿಗೆ ಕುಡಿಯುವ ನೀರಿನ ಬವಣೆ ನೀಗದ ಸ್ಥಿತಿ ಇಲ್ಲಿನದು.

12 ಲಕ್ಷ ರೂ. ಖರ್ಚು
2012-13ನೇ ಸಾಲಿನಲ್ಲಿ ಜಿ.ಪಂ. ವತಿಯಿಂದ ಅಂದಾಜು 12 ಲಕ್ಷ ರೂ. ವೆಚ್ಚದಲ್ಲಿ ದಟ್ಟ ಪರಿಸರದಲ್ಲಿ ಕುಡಿಯುವ ನೀರಿನ ಯೋಜನೆ ಅನುಷ್ಠಾನಗೊಳಿಸಲಾಗಿತ್ತು. ಈ ಅನುದಾನದಲ್ಲಿ ಕೊಳವೆಬಾವಿ, ಪೈಪ್‌ಲೈನ್‌, ವಿದ್ಯುತ್‌ ಸಂಪರ್ಕ, ನೀರು ಸಂಗ್ರಹಣ ಟ್ಯಾಂಕ್‌ ನಿರ್ಮಿಸಲಾಗಿತ್ತು. ಕಾಮಗಾರಿ ಪೂರ್ಣಗೊಂಡ ಮೊದಲ ಎರಡು ವರ್ಷದಲ್ಲಿ 30 ಸಾವಿರ ಲೀಟರ್‌ ಸಾಮರ್ಥ್ಯದ ಟ್ಯಾಂಕ್‌ನಿಂದ ನಳ್ಳಿ ಮೂಲಕ ನೀರು ಪೂರೈಸಲಾಗುತಿತ್ತು.

ಎಲ್ಲಿಗೆ ಅನುಕೂಲ?
ಈ ಟ್ಯಾಂಕಿಯಿಂದ ಕೆಯ್ಯೂರು ಗ್ರಾಮದ ದಟ್ಟ, ಪಾತುಂಜ, ಸಂತೋಷ್‌ನಗರ, ಸಣಂಗಲ ಮೊದಲಾದೆಡೆಯ 40 ಮನೆಗಳಿಗೆ ನೀರಿನ ಸಂಪರ್ಕ ಕಲ್ಪಿಸಲಾಗಿತ್ತು. ಇಲ್ಲಿ ಪರಿಶಿಷ್ಟ ಜಾತಿ ಸಮುದಾಯದ ಮನೆಗಳು ಅತ್ಯಧಿಕ ಸಂಖ್ಯೆಯಲ್ಲಿವೆ. ಬಹುತೇಕ ಮನೆಗಳಿಗೆ ಕುಡಿಯುವ ನೀರಿಗೆ ನಳ್ಳಿ ಸಂಪರ್ಕವೇ ಆಧಾರವಾಗಿದೆ. ಪ್ರತಿ ನಳ್ಳಿ ಸಂಪರ್ಕದಾರರು ನಿಗದಿತ ದರವಾಗಿ 100 ರೂ., ಹೆಚ್ಚು ನೀರು ಬಳಸಿದರೆ, ಹೆಚ್ಚುವರಿ ಮೊತ್ತವನ್ನು ಕೆಯ್ಯೂರು ಗ್ರಾ.ಪಂ.ಗೆ ಪಾವತಿಸುತ್ತಾರೆ.

ನೀರು ಹರಿಸದೆ ಮೂರು ವರ್ಷ
ಟ್ಯಾಂಕಿ ಮೂಲಕ ಹರಿಯುವ ನೀರು ಎಲ್ಲ ಮನೆಗಳಿಗೆ ಸಮರ್ಪಕವಾಗಿ ತಲುಪುತ್ತಿಲ್ಲ ಎಂಬ ಕಾರಣ ಒಡ್ಡಿ ಮೂರು ವರ್ಷಗಳ ಹಿಂದೆ ಟ್ಯಾಂಕ್‌ನಲ್ಲಿ ನೀರು ಸಂಗ್ರಹಿಸುವುದನ್ನು ಸ್ಥಗಿತಗೊಳಿಸಲಾಗಿದೆ. ಟ್ಯಾಂಕಿ ಮೂಲಕ ಮನೆಗಳಿಗೆ ನೀರು ಹರಿಸುವುದನ್ನು ಬಿಟ್ಟು, ಕೊಳವೆ ಬಾಯಿಂದಲೇ ನೇರವಾಗಿ ನಳ್ಳಿ ಸಂಪರ್ಕ ಕಲ್ಪಿಸಲಾಗಿದೆ. ಹಾಗಾಗಿ ಲಕ್ಷಾಂತರ ರೂ.ವೆಚ್ಚದ ಟ್ಯಾಂಕ್‌ ಪ್ರಯೋಜನಕ್ಕೆ ಬಾರದೆ ಅನಾಥ ಸ್ಥಿತಿಯಲ್ಲಿ ಇದೆ.

ವಿದ್ಯುತ್‌ ಸಮಸ್ಯೆ
ವಿದ್ಯುತ್‌ ಕಣ್ಣಾಮುಚ್ಚಾಲೆ ಪರಿಣಾಮ, ಇಲ್ಲಿ ಎರಡು ದಿನಕ್ಕೊಮ್ಮೆ ನೀರು ಬರುತ್ತಿದೆ. ವಿದ್ಯುತ್‌ ಕೈ ಕೊಟ್ಟರೆ, ಕೊಳವೆಬಾವಿ ಚಾಲೂ ಆಗದೆ ನೀರು ಪೂರೈಕೆ ಸ್ಥಗಿತಗೊಳ್ಳುತ್ತದೆ. ಹಾಗಾಗಿ ಇಲ್ಲಿ ವಿದ್ಯುತ್‌ ಲಭ್ಯ ಇರುವ ಸಂದರ್ಭದಲ್ಲಿ ಟ್ಯಾಂಕಿಗೆ ನೀರು ಹಾಯಿಸಿ, ವಿದ್ಯುತ್‌ ಇಲ್ಲದಿದ್ದಾಗ ಟ್ಯಾಂಕ್‌ ಮೂಲಕ ಹರಿಸಿದಲ್ಲಿ ಜನರಿಗೆ ಅನುಕೂಲ ಅನ್ನುತ್ತಾರೆ ಸ್ಥಳೀಯ ನಿವಾಸಿಗಳು.

ಸದ್ಬಳಕೆಗೆ ಪ್ರಯತ್ನ
ಟ್ಯಾಂಕ್‌ ತಗ್ಗು ಪ್ರದೇಶದಲ್ಲಿ ಇರುವ ಕಾರಣ, ಎಲ್ಲ ಮನೆಗಳಿಗೆ ನೀರು ಸರಾಗವಾಗಿ ಹರಿಯುವಲ್ಲಿ ತೊಡಕಾಗಿದೆ. ಅಲ್ಲಿನ ಸಮಸ್ಯೆ ಪರಿಹರಿಸಿ, ಟ್ಯಾಂಕ್‌ ಸದ್ಬಳಕೆ ಬಗ್ಗೆ ಕ್ರಮ ಕೈಗೊಳ್ಳುತ್ತೇವೆ.
– ಸುಬ್ರಹ್ಮಣ್ಯ ಕೆ.ಎಂ. ಪ್ರಭಾರ ಪಿಡಿಒ, ಕೆಯ್ಯೂರು ಗ್ರಾ.ಪಂ.

— ಗೋಪಾಲಕೃಷ್ಣ  ಎಸ್‌.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.