ಚಾಮೆತ್ತಡ್ಕ ನಿವಾಸಿಗಳಿಗೆ ಮುಂದಿನ ಬೇಸಗೆಯೂ ಸಂಕಷ್ಟವೇ !


Team Udayavani, Sep 8, 2017, 1:07 AM IST

Water-8-9.jpg

ಆಲಂಕಾರು: ಆಲಂಕಾರು ಗ್ರಾಮದ  ಚಾಮೆತ್ತಡ್ಕ, ಪೊಸೋನಿ ವ್ಯಾಪ್ತಿಯ ನಿವಾಸಿಗಳಿಗೆ  ಈ ವರ್ಷವೂ ಕುಡಿಯುವ ನೀರಿನ ಯೋಜನೆ ಜಾರಿಗೊಳ್ಳುವುದು ಕಷ್ಟವಾಗಿದೆ. ಈ ಯೋಜನೆ ಜಾರಿಗೆ ತಾಲೂಕು ಪಂಚಾಯತ್‌ ಕೇವಲ 50 ಸಾವಿರ ರೂ. ಅನುದಾನ ನೀಡಿದೆ. ಬೇರೆ ಯಾವುದೇ ಮೂಲಗಳಿಂದ ಅನುದಾನ ದೊರೆಯದ ಹಿನ್ನೆಲೆಯಲ್ಲಿ ಯೋಜನೆ ಅನುಷ್ಠಾನ ಮತ್ತಷ್ಟು ವಿಳಂಬವಾಗಲಿದೆ.

ಈ ಭಾಗದಲ್ಲಿ ಕುಡಿಯುವ ನೀರಿಗಾಗಿ ಬೇಸಿಗೆಯ ಆರಂಭದಲ್ಲೇ ಅಭಾವ ಉಂಟಾಗುತ್ತದೆ. ಕಳೆದ ಬಾರಿ ಜನಪ್ರತಿನಿಧಿಗಳು ನೀಡಿದ್ದ ಭರವಸೆಯ ಆಧಾರದಲ್ಲಿ ಈ ವರ್ಷ ನೀರು ಸಿಗಬಹುದೆಂದು ಜನರು ಆಶಿಸಿದ್ದರು. ಅದೂ ಈಗ ಹುಸಿಯಾಗಿದೆ. ಹಾಗಾಗಿ ಇಲ್ಲಿಯ ನಿವಾಸಿಗಳು ಮುಂದಿನ ಬೇಸಗೆಯಲ್ಲೂ ನೀರಿಗಾಗಿ ಹೊಗೆಯಲ್ಲಿ ಗುಂಡಿ ತೋಡಬೇಕಿದೆ. ಜತೆಗೆ ನೀರಿಗಾಗಿ ಕುಮಾರಧಾರಾ ಕಿರು ನದಿಯ ಉದ್ದಗಲಕ್ಕೂ ಜೆಸಿಬಿ ಯಂತ್ರ ಮತ್ತು ಮಾನವ ಶ್ರಮದ ಮೂಲಕ ಗುಂಡಿ ತೋಡುವ ಕಾಯಕ ಮುಂದುವರಿಸಬೇಕಾಗಿದೆ.

ಕಳೆದ ವರ್ಷದಿಂದ ಈ ಭಾಗದಲ್ಲಿ ಜಿ.ಪಂ. ಅನುದಾನದಲ್ಲಿ ಕೊಳವೆಬಾವಿ ಮತ್ತು ಟ್ಯಾಂಕ್‌ ನಿರ್ಮಿಸಲಾಗುತ್ತದೆ ಎಂದು ಸ್ಥಳೀಯ ಜನಪ್ರತಿನಿಧಿಗಳು ಭರವಸೆ ನೀಡಿದ್ದರು. ಈ ಕುಡಿಯುವ ನೀರಿನ ಯೋಜನೆಯನ್ನು ಪಂಚವಾರ್ಷಿಕ ಯೋಜನೆಯಡಿ ಸೇರಿಸಲಾಗಿದೆ. ಸಮರ್ಪಕ ನೀರಿನ ವ್ಯವಸ್ಥೆಗೆ ಅಂದಾಜು 20 ಲಕ್ಷ ರೂ. ಬೇಕಿದೆ. ಈ ವ್ಯಾಪ್ತಿಯಲ್ಲಿ 67 ಮನೆಗಳಿದ್ದು 1,000ಮೀಟರ್‌ ದೂರದವರೆಗೆ ಪೈಪ್‌ಲೈನ್‌ ಹಾಕಬೇಕಿದೆ. 

50 ಸಾವಿರ ರೂ. ಬಿಡುಗಡೆ
ಈ ಪೈಪ್‌ಲೈನ್‌ಗಾಗಿ 50 ಸಾವಿರದ ಅನುದಾನ ಬಿಡುಗಡೆಯಾಗಿದೆ. ಈಗಾಗಲೇ ಕ್ರಿಯಾಯೋಜನೆಯ ಪ್ರಕ್ರಿಯೆಪೂರ್ಣಗೊಂಡಿದೆ. ಶೀಘ್ರವೇ ಪೈಪ್‌ಲೈನ್‌ನ ಕಾಮಗಾರಿ ಪ್ರಾರಂಭ ಗೊಳ್ಳಲಿದೆ, ಸಮಸ್ಯೆ ಕೂಡಲೇ  ಬಗೆಹರಿಸಲಾಗುವುದು ಎಂದು ತಾಲೂಕು ಪಂಚಾಯತ್‌ ಸದಸ್ಯೆ ತಾರಾತಿಮ್ಮಪ್ಪ ಅವರು ಪ್ರತಿಕ್ರಿಯಿಸಿದ್ದಾರೆ.

ಜನತೆ ಸ್ವಂತ ಬಾವಿ ಕೊರೆಯತೊಡಗಿದ್ದಾರೆ
ಈ ವ್ಯಾಪ್ತಿಯಲ್ಲಿ ಸಮರ್ಪಕವಾದ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದ ಕಾರಣ ಜನತೆ ಸ್ವಂತ ಬಾವಿ ಕೊರೆಯತೊಡಗಿದ್ದಾರೆ ಕಳೆದ ಬಾರಿ ಮೂರು ಕುಟುಂಬಗಳು ಹೊಸ ಬಾವಿಯನ್ನು ತೋಡಿದ್ದು, ನೀರಿನ ಮೂಲವನ್ನು ಶೋಧಿಸಿದ್ದಾರೆ. ಕಿರು ತೋಡಿನಲ್ಲಿ ಗುಂಡಿಯನ್ನು ಒಮ್ಮೆ ದುರಸ್ತಿ ಮಾಡಿ ದರೆ ಕೇವಲ 15ರಿಂದ 25 ದಿನ ಮಾತ್ರ ನೀರು ನಿಲ್ಲುತ್ತದೆ. ಮತ್ತೆ ಗುಂಡಿ ಜರಿದು ಬಿದ್ದು ಮುಚ್ಚುತ್ತಿವೆ. ಇಂತಹ ಸಂದರ್ಭದಲ್ಲಿ ಕಾಲೋನಿಯ ಜನ ಕುಡಿಯಲು ಸುಮಾರು 2ಕಿ.ಮೀ ಕುಮಾರಧಾರಾ ನದಿಗೆ ಕುಡಿಯುವ ನೀರಿಗಾಗಿ ಅಲೆದಾಡಬೇಕಿದೆ. 

ಗ್ರಾ.ಪಂ.ನಿಂದ ಅಸಾಧ್ಯ
ಅನುದಾನವನ್ನು ಗ್ರಾಮ ಪಂಚಾಯತ್‌ನಿಂದ ಭರಿಸಲು ಅಸಾಧ್ಯ. ತಾ.ಪಂ, ಜಿ.ಪಂ. ಮತ್ತು ಶಾಸಕರಲ್ಲಿ ಅನುದಾನಕ್ಕಾಗಿ ಬೇಡಿಕೆ ಸಲ್ಲಿಸಲಾಗಿದೆ. ಅನುದಾನ ಶೀಘ್ರವೇ ಬಿಡುಗಡೆಗೊಳಿಸುವಂತೆ ಒತ್ತಡ ಹಾಕಲಾಗುವುದು. 
– ಸುಧಾಕರ ಪೂಜಾರಿ ಕಲ್ಲೇರಿ ಉಪಾಧ್ಯಕ್ಷ, ಗ್ರಾ.ಪಂ

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.