ಹಳ್ಳ ಹಿಡಿದ ಕುಡಿಯುವ ನೀರಿನ ಯೋಜನೆ


Team Udayavani, Apr 28, 2019, 6:00 AM IST

30

ಸವಣೂರು ಗ್ರಾ.ಪಂ. ವ್ಯಾಪ್ತಿಯ ಅಪೂರ್ಣ ನೀರಿನ ಘಟಕ.

ನರಿಮೊಗರು: ರಾಜ್ಯದ ಪ್ರತಿಯೊಬ್ಬ ವ್ಯಕ್ತಿಗೂ ಪರಿಶುದ್ಧ ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಡುವ ಉದ್ದೇಶ ದಿಂದ ರಾಜ್ಯ ಸರಕಾರ ಶುದ್ಧ ನೀರು ಯೋಜನೆಯನ್ನು ಜಾರಿಗೆ ತಂದಿದೆ. ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಇಲಾಖೆಯ ಅಡಿಯಲ್ಲಿ ಬರುವ ಈ ಯೋಜನೆಯನ್ನು ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮ ರಾಜ್ಯದೆಲ್ಲೆಡೆ ಅನುಷ್ಠಾನಗೊಳಿಸುತ್ತಿದೆ.

ಆದರೆ ಶುದ್ಧ ನೀರು ಯೋಜನೆಯ ಅನುಷ್ಠಾನದಲ್ಲಾಗುತ್ತಿರುವ ವಿಳಂಬ ಹಾಗೂ ಅನಗತ್ಯ ಪ್ರದೇಶಗಳಲ್ಲಿ ನಿರ್ಮಿಸ ಲಾಗುತ್ತಿರುವ ಈ ಘಟಕಗಳು ಈಗ ಪಾಳು ಬೀಳುವ ಸ್ಥಿತಿಯಲ್ಲಿದೆ. ಈ ನಡುವೆ ಮಿನರಲ್‌ ವಾಟರ್‌ ಕಂಪನಿಗಳ ಲಾಭವೂ ಈ ನಿರ್ಲಕ್ಷ್ಯದ ಹಿಂದಿದೆ. ಲಕ್ಷಾಂತರ ರೂ. ಖರ್ಚು ಮಾಡಿ ನಿರ್ಮಿಸಲಾಗುತ್ತಿರುವ ಈ ಘಟಕ ಇಂದು ಊಟಕ್ಕಿಲ್ಲದ ಉಪ್ಪಿನಕಾಯಿಯಂತೆಯೂ ಆಗಿದೆ.

ಒಂದು ಹನಿ ನೀರಿಲ್ಲ
ಈ ಯೋಜನೆಯ ಪ್ರಕಾರ ಪ್ರತೀ ಗ್ರಾಮ ಪಂಚಾಯತ್‌ಗೆ ಒಂದರಂತೆ ಇಂತಹ ಘಟಕ ಗಳನ್ನು ಸ್ಥಾಪಿಸಿ ಆ ಗ್ರಾಮದ ಜನರಿಗೆ ಶುದ್ಧ ನೀರು ಕೊಡುವುದು ಸರಕಾರದ ಉದ್ದೇಶ. ಪ್ರತಿ ಘಟಕಕ್ಕೆ ಯೋಜನೆ ಆರಂಭ ವಾಗುವ ವರ್ಷ 5.88 ಲಕ್ಷ ರೂ. ವೆಚ್ಚ ಅಂದಾಜಿಸ ಲಾಗಿದ್ದು, ಇದೀಗ ಈ ಘಟಕಗಳಿಗೆ 13 ಲಕ್ಷಕ್ಕೂ ಮಿಕ್ಕಿದ ವೆಚ್ಚ ತಗಲುತ್ತಿದೆ.

ಎಲ್ಲ ಪಂಚಾಯತ್‌ಗಳಲ್ಲಿ
ಜಿಲ್ಲೆಯ 230 ಗ್ರಾಮ ಪಂಚಾಯತ್‌ಗಳಲ್ಲಿ ಪ್ರತೀ ಪಂಚಾಯತ್‌ನಲ್ಲಿ 2ರಿಂದ 3 ಘಟಕಗಳನ್ನು ನಿರ್ಮಿಸಲಾಗಿದೆ. ಆದರೆ ಇವೆಲ್ಲವೂ ಊಟಕ್ಕಿಲ್ಲದ ಉಪ್ಪಿನಕಾಯಿ ಯಂತಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕೆಲ ಕಡೆಗಳಲ್ಲಿ ಈ ಘಟಕದ ಕೆಲಸ ಆರಂಭವಾಗಿ ಒಂದು ವರ್ಷ ಕಳೆದರೂ ಘಟಕದ ಕೆಲಸ ಮಾತ್ರ ಮುಗಿದಿಲ್ಲ.

ಇನ್ನು ಮುಗಿದ ಘಟಕಗಳಲ್ಲಿ ನೀರು ಪೂರೈಕೆ ಆರಂಭಗೊಳ್ಳದೆಯೇ ವರ್ಷಗಳು ಕಳೆದಿವೆ. ಅಲ್ಲದೆ ಘಟಕಕ್ಕೆ ನೀರಿನ ಸಂಪರ್ಕವನ್ನೂ ಯಾರು ಕಲ್ಪಿಸಬೇಕು ಎನ್ನುವ ಕುರಿತು ಗೊಂದಲ ನಿರ್ಮಾಣವಾಗಿದೆ. ಜಿಲ್ಲೆಯ ಹಲವು ಕಡೆಗಳಲ್ಲಿ ಇಂತಹ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಲಾಗಿದ್ದರೂ, ಎಷ್ಟು ಸ್ಥಾಪಿಸಲಾಗಿದೆ ಎನ್ನುವ ನಿಖರ ಮಾಹಿತಿಯನ್ನು ಅಧಿಕಾರಿಗಳು ಬಿಟ್ಟುಕೊಡುತ್ತಿಲ್ಲ. ಪ್ರತಿಯೊಂದು ಘಟಕಕ್ಕೆ 13 ಲಕ್ಷ ರೂ. ವೆಚ್ಚವಾಗಿದೆ ಎನ್ನುವ ಮಾಹಿತಿಯನ್ನು ನೀಡಲಾಗಿದೆ.

ಹಳ್ಳ ಹಿಡಿದ ಯೋಜನೆ
ಈ ವಿಳಂಬಕ್ಕೆ ಮಿನರಲ್‌ ವಾಟರ್‌ ಕಂಪನಿಗಳ ಲಾಬಿಯೂ ಕಾರಣ ಎಂಬ ಗುಮಾನಿ ಇದೆ. ಒಂದು ರೂ.ಗೆ ಒಂದು ಲೀಟರ್‌ ನೀರು ಕೊಡುವ ಈ ಯೋಜನೆ ಸಮರ್ಪಕವಾಗಿ ಜಾರಿಗೆ ಬಂದಲ್ಲಿ ಮಿನರಲ್‌ ವಾಟರ್‌ ಕಂಪನಿಗಳು ಬೀಗ ಹಾಕಬೇಕಾಗುತ್ತದೆ ಎಂಬ ಆತಂಕವೂ ಇದೆ. ಜನಪರ ಕಾಳಜಿಯ ಯೋಜನೆ ಹೇಗೆ ಹಳ್ಳ ಹಿಡಿಯುತ್ತದೆ ಎನ್ನುವುದಕ್ಕೆ ಇದಕ್ಕಿಂತ ಉತ್ತಮ ನಿದರ್ಶನ ಸಿಗಲಿಕ್ಕಿಲ್ಲ ಎನ್ನುವ ಅಭಿಪ್ರಾಯ ಜನಸಾಮಾನ್ಯರಿಂದ ಕೇಳಿಬರುತ್ತಿದೆ.

ಮನವಿ ಮಾಡಲಾಗಿದೆ
ನಮ್ಮ ಗ್ರಾ.ಪಂ. ವ್ಯಾಪ್ತಿಯಲ್ಲಿ ಎರಡು ಶುದ್ಧ ಕುಡಿಯುವ ನೀರು ಪೂರೈಕೆಯ ಘಟಕಗಳನ್ನು ಸ್ಥಾಪಿಸಲಾಗಿದ್ದು, ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಗ್ರಾ.ಪಂ. ವತಿಯಿಂದ ಆಗಬೇಕಾದ ಎಲ್ಲ ಕೆಲಸಗಳನ್ನು ಪೂರ್ಣಗೊಳಿಸಲಾಗಿದ್ದು, ಕೆಆರ್‌ಡಿಎಲ್‌ ನಿಗಮದ ಅಧಿಕಾರಿಗಳಿಗೆ ಕಾಮಗಾರಿಯನ್ನು ಬೇಗ ಮುಗಿಸುವಂತೆ ಮನವಿ ಮಾಡಲಾಗಿದೆ. ಈ ಯೋಜನೆ ಅನುಷ್ಠಾನವಾದರೆ ಬೇಸಗೆಯಲ್ಲಿ ನೀರಿನ ಸಮಸ್ಯೆಯನ್ನು ತಕ್ಕ ಮಟ್ಟಿಗೆ ದೂರ ಮಾಡಬಹುದು.
– ಇಂದಿರಾ ಬಿ.ಕೆ., ಅಧ್ಯಕ್ಷರು, ಸವಣೂರು ಗ್ರಾ.ಪಂ.

ಪ್ರವೀಣ್‌ ಚೆನ್ನಾವರ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.