ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ
ಕರ್ನಾಟಕ ಜೋಗಿ ಸಮಾಜ ಸುಧಾರಕ ಸಂಘದ ಸುವರ್ಣ ಮಹೋತ್ಸವ
Team Udayavani, May 19, 2019, 6:00 AM IST
ಪದುವಾ: ಕರ್ನಾಟಕ ಜೋಗಿ ಸಮಾಜ ಸುಧಾರಕ ಸಂಘ ಇದರ ಸುವರ್ಣ ಮಹೋತ್ಸವದ ಪ್ರಯುಕ್ತ ಆಯೋಜಿಸಲಾದ ರಾಜ್ಯ ಮಟ್ಟದ ಕ್ರೀಡಾಕೂಟದ ಉದ್ಘಾಟನೆ ಶನಿವಾರ ನಗರದ ಪದುವಾ ಶಾಲಾ ಮೈದಾನದಲ್ಲಿ ನಡೆಯಿತು.
ಸಂಘಟನೆಗೆ ಕ್ರೀಡಾಕೂಟ ಅಗತ್ಯ
ಶಾಸಕ ಉಮಾನಾಥ ಕೋಟ್ಯಾನ್ ಉದ್ಘಾಟಿಸಿ, ಹಿಂದೂ ಸಮಾಜದ ಸಂಘಟನೆಗೆ ಇಂತಹ ಕ್ರೀಡಾ ಕೂಟಗಳು ಅವಶ್ಯವಾಗಿದೆ. ಯಾವುದೇ ಜಾತಿಯ ಸಂಘಟನೆ ಅಸ್ಥಿತ್ವಕ್ಕೆ ಬಂದರೂ ಆಯಾ ಸಮುದಾಯದ ಪ್ರತಿಭೆಗಳಿಗೆ ಪ್ರೋತ್ಸಾಹ, ಸಮುದಾಯದ ಏಳಿಗೆಗೆ ಆಗಿದೆ. ಆದರೆ ಹಿಂದೂ ಸಮಾಜ ಎಂದಾಗ ಎಲ್ಲ ಪಂಗಡಗಳ ಸಂಘಗಳು ಒಗ್ಗಟ್ಟಾಗಿ ಕೊಡುಗೆ ನೀಡುತ್ತಿವೆ. ಜೋಗಿ ಸಮುದಾಯವೂ ಸಮಾಜದ ಅಭಿವೃದ್ಧಿಗೆ ತನ್ನದೇ ಆದ ಸೇವೆ ಸಲ್ಲಿಸುತ್ತಿದೆ ಎಂದರು.
ದೈಹಿಕ, ಮಾನಸಿಕ
ಬೆಳವಣಿಗೆಗೆ ಸಹಕಾರಿ
ಡಾ| ಭರತ್ ಶೆಟ್ಟಿ ವೈ ಮಾತನಾಡಿ, ಕ್ರೀಡಾಕೂಟದಿಂದ ಸಮುದಾಯದ ಜನ ಬೆರೆಯಲು ಸಿಗುವ ಅಪೂರ್ವ ಅವಕಾಶ ಜತೆಗೆ ನಮ್ಮ ನಮ್ಮ ದೈಹಿಕ, ಮಾನಸಿಕ ಬೆಳವಣಿಗೆಗೂ ಕ್ರೀಡೆಯಲ್ಲಿ ಪಾಲ್ಗೊಳ್ಳುವುದು ಅಗತ್ಯವಾಗಿದೆ ಎಂದರು.
ಸುವರ್ಣ ಮಹೋತ್ಸವದ ಕಾರ್ಯಾಧ್ಯಕ್ಷ ಎಚ್.ಕೆ. ಪುರುಷೋತ್ತಮ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕರ್ನಾಟಕ ಜೋಗಿ ಸಮಾಜ ಸುಧಾರಕ ಸಂಘದ ಅಧ್ಯಕ್ಷ ಕಿರಣ್ ಜೋಗಿ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಐವನ್ ಡಿ’ಸೋಜಾ, ಮಾಜಿ ಕಾರ್ಪೊರೇಟರ್ ಅಶೋಕ್ ಡಿ.ಕೆ., ಉದ್ಯಮಿ ಗೋಕುಲ್ದಾಸ್ ಕದ್ರಿ, ಸಂಘದ ಉಪಾಧ್ಯಕ್ಷ ಡಾ| ಕೇಶವನಾಥ್, ದೈಹಿಕ ನಿರ್ದೇಶಕ ಹರೀಶ್ ಗೌಡ, ಜೋಗಿ ಸಮಾಜ ಸುಧಾರಕ ಸಂಘದ ಮಹಿಳಾ ವಿಭಾಗದ ಅಧ್ಯಕ್ಷೆ ಅಮಿತ ಸಂಜೀವ, ಪ್ರಭಾಕರ ಜೆ., ಯುವ ಘಟಕದ ಅಧ್ಯಕ್ಷ ಸಚ್ಚೀಂದ್ರನಾಥ್ ಮತ್ತಿತರರು ಉಪಸ್ಥಿತರಿದ್ದರು. ವಿನಯಾನಂದ ಕಾನಡ್ಕ ನಿರೂಪಿಸಿದರು. ದೀಕ್ಷಿತ್ ವಂದಿಸಿದರು.
ಪ್ರತಿಭೆಗಳ ಅನಾವರಣಕ್ಕೆ ವೇದಿಕೆ
ಅಧ್ಯಕ್ಷತೆ ವಹಿಸಿದ್ದ ಶಾಸಕ ವೇದವ್ಯಾಸ ಕಾಮತ್ ಮಾತನಾಡಿ, ಜೋಗಿ ಸಮಾಜ ಸುಧಾರಕ ಸಂಘ ಇದೀಗ ಸುವರ್ಣ ಮಹೋತ್ಸವದ ಸಂಭ್ರಮದಲ್ಲಿದ್ದು,ಸಮುದಾಯದ ಜನರಿಗಾಗಿ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳುತ್ತಾ ಬರುತ್ತಿದೆ.ಯುವ ಸಮಾಜ ಬಲಿಷ್ಠವಾಗಲು ಕ್ರೀಡೆ ಸಹಾಯವಾಗಬಲ್ಲುದು.ಪ್ರತಿಭೆಗಳ ಅನಾವರಣಕ್ಕೆ ಇಂತಹ ವೇದಿಕೆಗಳು ಯುವಕರಿಗೆ ಹೆಚ್ಚು ಸಿಗಬೇಕಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್ ಸಾವು
Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!
Mangaluru: ಕುಡಿಯುವ ನೀರಿನ ಕೊರತೆ, ಬೋಟ್, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ
MUST WATCH
ಹೊಸ ಸೇರ್ಪಡೆ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!