3 ಕೋ.ರೂ.ಮೊತ್ತದ ಸಾಮಾಜಿಕ ಕಾರ್ಯಯೋಜನೆಗೆ ಚಾಲನೆ
Team Udayavani, Sep 27, 2017, 12:15 PM IST
ಮಂಗಳೂರು : ಸಾಮಾಜಿಕ ಕ್ರಾಂತಿಯ ಮೂಲಕ ಗುರುತಿಸಿಕೊಂಡಿರುವ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಹೊಸದಾಗಿ 3 ಕೋ. ರೂ.ಮೊತ್ತದ ಆರೋಗ್ಯ ನಿಧಿ, ವಿದ್ಯಾನಿಧಿ ಹಾಗೂ ಸಾಮೂಹಿಕ ವಿವಾಹ ಯೋಜನೆಗಳಿಗೆ ಮಂಗಳವಾರ ಶ್ರೀ ಕ್ಷೇತ್ರದಲ್ಲಿ ಚಾಲನೆ ನೀಡಲಾಯಿತು.
ದ.ಕ. ಜಿಲ್ಲಾಧಿಕಾರಿ ಡಾ|ಕೆ.ಜಿ. ಜಗದೀಶ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಬ್ರಹ್ಮಶ್ರೀ ನಾರಾಯಣ ಗುರುಗಳು ಸಾಮಾಜಿಕ ಜಾಗೃತಿ ಮೂಡಿಸುವ ಜತೆಗೆ, ಸಮಾಜದ ಅಭಿವೃದ್ಧಿಗಾಗಿ ವಿವಿಧ ರೀತಿಯಲ್ಲಿ ದುಡಿದಿದ್ದಾರೆ. ಅವರ ಚಿಂತನೆಗಳು ನಮ್ಮೆಲ್ಲರಿಗೆ ಮಾದರಿ. ಈ ನಿಟ್ಟಿನಲ್ಲಿ ವಿವಿಧ ಸಮಾಜಮುಖೀ ಕಾರ್ಯಕ್ರಮಗಳಿಗೆ ಚಾಲನೆ ನೀಡಿರುವುದು ಶ್ಲಾಘನೀಯ ಎಂದರು.
ದಾನಿಗಳಾದ ರಂಜನ್ ಉಡುಪಿ, ಬದ್ರಿನಾಥ್ ಕಾಮತ್, ದೇವು ಎನ್.ಕರ್ಕೇರ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಆರೋಗ್ಯ ನಿಧಿ, ವಿದ್ಯಾನಿಧಿ ಯೋಜನೆಗೆ ನೆರವಿನ ಚೆಕ್ ವಿತರಿಸಿದರು.
ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಲು ವಿದ್ಯಾನಿಧಿ ಯೋಜನೆ, ಅಶಕ್ತರಿಗೆ ಆರೋಗ್ಯನಿಧಿ, ದೇಗುಲದಲ್ಲಿ ವರ್ಷಕ್ಕೊಮ್ಮೆ ಸಾಮೂಹಿಕ ವಿವಾಹದ ದೇವಾಲಯದಲ್ಲಿ ವರ್ಷಕ್ಕೊಮ್ಮೆ ಸಾಮೂಹಿಕ ವಿವಾಹ ಕಾರ್ಯಕ್ರಮ ಹಮ್ಮಿಕೊಳ್ಳಲು ನೂತನ ಯೋಜನೆಯಡಿ ತೀರ್ಮಾನಿಸಲಾಗಿದೆ.
ಇದೇ ಸಂದರ್ಭ ಶೈಕ್ಷಣಿಕ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸಮ್ಮಾನಿಸಲಾಯಿತು. ಅಪರ ಜಿಲ್ಲಾಧಿಕಾರಿ ಕುಮಾರ್, ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಜಯ ಸಿ.ಸುವರ್ಣ, ಎಚ್.ಎಸ್.ಸಾಯಿರಾಂ, ಮಾಧವ ಸುವರ್ಣ, ರವಿಶಂಕರ ಮಿಜಾರ್, ದೇವೇಂದ್ರ, ರಾಘವೇಂದ್ರ ಕೂಳೂರು, ಮಹೇಶ್ಚಂದ್ರ, ರಮಾನಾಥ ಕಾರಂದೂರು, ಡಾ|ಬಿ.ಜಿ.ಸುವರ್ಣ, ಅನಸೂಯ, ಲೀಲಾಕ್ಷ ಕರ್ಕೆರ ಮುಂತಾದವರು ಉಪಸ್ಥಿತರಿದ್ದರು.
ಹರಿಕೃಷ್ಣ ಬಂಟ್ವಾಳ್ ಸ್ವಾಗತಿಸಿದರು. ಕೋಶಾಧಿಕಾರಿ ಪದ್ಮರಾಜ್ ವಂದಿಸಿದರು. ವಿಜಯ್ ಕೋಟ್ಯಾನ್ ಸಮ್ಮಾನಿತರ ಪರಿಚಯ ಓದಿದರು. ಕೀರ್ತಿ ಕಾರ್ಯಕ್ರಮ ನಿರೂಪಿಸಿದರು.
ಆರೋಗ್ಯ ನಿಧಿ, ವಿದ್ಯಾನಿಧಿ ಹಾಗೂ ಸಾಮೂಹಿಕ ವಿವಾಹ ಯೋಜನೆಗೆ ಕುದ್ರೋಳಿ ಕ್ಷೇತ್ರದಲ್ಲಿ ಚಾಲನೆ ನೀಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
“ಪ್ರೇತ’ ಮದುವೆಗೆ ಕೊನೆಗೂ ಸಿಕ್ಕಿದ “ವರ’! ಆಟಿಯಲ್ಲಿ ನಡೆಯಲಿದೆ “ಪ್ರೇತ ಮದುವೆ’
Mangaluru University; ಪದವಿ 3 ವರ್ಷಕ್ಕೆ; ಪಠ್ಯಕ್ರಮ ಬದಲಾವಣೆಗೆ ವಿ.ವಿ. ನಿರ್ಧಾರ
Kerala “ವೆಸ್ಟ್ನೈಲ್’ ಜ್ವರದ ಆತಂಕ; ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ
ನೈಋತ್ಯ ಕ್ಷೇತ್ರ; ಬಿಜೆಪಿ- ಜೆಡಿಎಸ್ ಒಮ್ಮತದ ಅಭ್ಯರ್ಥಿಗೆ ಗೆಲುವು: ಡಾ| ಧನಂಜಯ ಸರ್ಜಿ
Mulki ಪ್ರೇಯಸಿ ಆತ್ಮಹತ್ಯೆ ಬೆನ್ನಲ್ಲೇ ಪ್ರಿಯತಮನೂ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
IPL ಮುಂದಿನ ವರ್ಷವೂ ಧೋನಿ ಆಡುತ್ತಾರಾ..?; ರಾಯುಡು ಹೇಳಿದ್ದೇನು?
Farrukhabad; ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತದಾನ ಮಾಡಿದ ವ್ಯಕ್ತಿ; ವಿಡಿಯೋ ವೈರಲ್
Ebrahim Raisi; ಹೆಲಿಕಾಪ್ಟರ್ ದುರಂತದಲ್ಲಿ ಕೊನೆಯುಸಿರೆಳೆದ ಇರಾನ್ ಅಧ್ಯಕ್ಷ ರೈಸಿ
Unemployment; ಭಾರತದ ಯುವಕರಿಗೆ ಕೆಲಸ ಸಿಗಬೇಕಾದರೆ ಮೋದಿ ನಿವೃತ್ತಿಯಾಗಬೇಕು: ರಾಹುಲ್ ಗಾಂಧಿ
IPL 2024; ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ