ರಸ್ತೆ ಮಧ್ಯೆ ಬಸ್ ನಿಲ್ಲಿಸಿದರೆ ಡ್ರೈವರ್ ಲೈಸನ್ಸ್ ರದ್ದು: ಎಚ್ಚರ
Team Udayavani, Aug 8, 2017, 8:20 AM IST
ಮಂಗಳೂರು: ಎಲ್ಲೆಂದರಲ್ಲಿ ಪ್ರಯಾಣಿಕರನ್ನು ಇಳಿಸಲು ಮತ್ತು ಹತ್ತಿಸಲು ಬಸ್ ನಿಲ್ಲಿಸಿದರೆ ಕಠಿನ ಕ್ರಮ ಕೈಗೊಳ್ಳುವುದಾಗಿ ಸಾರಿಗೆ ಪ್ರಾಧಿಕಾರ ಎಚ್ಚರಿಕೆ ನೀಡಿದೆ.
ನಿರ್ದಿಷ್ಟ ಪ್ರದೇಶದಲ್ಲಿ ಬಸ್ ನಿಲ್ದಾಣಗಳಿದ್ದರೂ ಕೆಲವೊಂದು ಬಸ್ಗಳವರು ಕೈ ತೋರಿಸಿದಲ್ಲಿ ಅಥವಾ ಪ್ರಯಾಣಿಕರನ್ನು ಕಂಡಲ್ಲಿ ಹಠಾತ್ ಆಗಿ ನಿಲ್ಲಿಸುವುದರಿಂದ ಅಪಘಾತಗಳಿಗೆ ಕಾರಣವಾಗುತ್ತಿದೆ. ಆದುದರಿಂದ ಪ್ರಯಾಣಿಕರನ್ನು ಹತ್ತಿಸಲು ಹಾಗೂ ಇಳಿಸಲು ನಿಗದಿತ ಬಸ್ ತಂಗುದಾಣಗಳಲ್ಲಿಯೇ ಬಸ್ಗಳನ್ನು ನಿಲ್ಲಿಸಬೇಕು. ಹೆದ್ದಾರಿ ಸಹಿತ ಯಾವುದೇ ಪ್ರದೇಶದಲ್ಲಿ ಬಸ್ ನಿಲ್ದಾಣ ಹೊರತುಪಡಿಸಿ ಬೇರೆ ಪ್ರದೇಶದಲ್ಲಿ ಬಸ್ಗಳನ್ನು ನಿಲುಗಡೆಗೊಳಿಸುವುದು ಕಂಡುಬಂದಲ್ಲಿ ಬಸ್ ಚಾಲಕರ ಡ್ರೈವಿಂಗ್ ಲೈಸನ್ಸನ್ನೇ ರದ್ದುಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾಧಿಕಾರ ತಿಳಿಸಿದೆ.
ಬಸ್ನ ಚಾಲಕ/ನಿರ್ವಾಹಕರು ಸಮವಸ್ತ್ರವನ್ನು ತಪ್ಪದೇ ಧರಿಸಬೇಕು. ಸುರಕ್ಷತಾ ದೃಷ್ಟಿಯಿಂದ ಪ್ರಯಾಣಿಕರು ಬಸ್ ಬೇ/ ತಂಗುದಾಣದಲ್ಲಿಯೇ ಬಸ್ ಹತ್ತಬೇಕು ಹಾಗೂ ಇಳಿಯಬೇಕು. ಯಾವುದೇ ಕಾರಣಕ್ಕೂ ಚಲಿಸುತ್ತಿರುವ ಬಸ್ ಅನ್ನು ಹತ್ತುವುದು ಅಥವಾ ಇಳಿಯುವುದು ಮಾಡಬಾರದು ಎಂದು ಆರ್ಟಿಒ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ
Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!
ಅಧಿಕಾರಕ್ಕಾಗಿ ಪಿಎಫ್ಐಯ ರಾಜಕೀಯ ಮುಖವಾದ ಎಸ್ಡಿಪಿಐ ಜತೆ ಕಾಂಗ್ರೆಸ್ ಹೊಂದಾಣಿಕೆ: ನಳಿನ್
Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ
Captain Brijesh Chowta ಚುನಾವಣ ವೆಚ್ಚಕ್ಕೆ ಪಿಂಚಣಿ ದುಡ್ಡು ದೇಣಿಗೆ
MUST WATCH
ಹೊಸ ಸೇರ್ಪಡೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್ ಕಾಲೇಜು: ಜಯಪ್ರಕಾಶ್ ಹೆಗ್ಡೆ
Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ