ಡ್ರೋನ್ ಬಳಕೆ: ಕಮಿಷನರ್ ಎಚ್ಚರಿಕೆ
Team Udayavani, Jan 19, 2021, 2:34 AM IST
ಮಂಗಳೂರು: ಮಂಗಳೂರು ಪೊಲೀಸ್ ಕಮಿಷನರೆಟ್ ವ್ಯಾಪ್ತಿಯಲ್ಲಿ ಅನುಮತಿ ಪಡೆಯದೆ ಡ್ರೋನ್ ಬಳಕೆ ಮಾಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಆಯುಕ್ತ ಎನ್. ಶಶಿಕುಮಾರ್ ಎಚ್ಚರಿಕೆ ನೀಡಿದ್ದಾರೆ.
ನಗರದಲ್ಲಿ ಕೈಗಾರಿಕೆ, ಪ್ರವಾಸಿ ತಾಣ, ಧಾರ್ಮಿಕ, ವಿದ್ಯಾ ಸಂಸ್ಥೆಗಳು, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಬಂದರು, ತೈಲ ಸಂಗ್ರಹಣ ಕೇಂದ್ರ ಹಾಗೂ ಇನ್ನಿತರ ಸೂಕ್ಷ್ಮ ಪ್ರದೇಶಗಳಿದ್ದು ಅವುಗಳ ಭದ್ರತೆ ಹಾಗೂ ಸಾರ್ವಜನಿಕ ಸುರಕ್ಷತೆ ಕಾಪಾಡುವ ಉದ್ದೇಶದಿಂದ ಡಿಜಿಸಿಎ ಮಾರ್ಗಸೂಚಿಯಂತೆ ಎಲ್ಲ ವರ್ಗದ ಡ್ರೋನ್ ಬಳಕೆಗೆ ಅನುಮತಿ ಪಡೆಯಬೇಕು. ಅನುಮತಿಯನ್ನು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಉಪಪೊಲೀಸ್ ಆಯುಕ್ತರ ಕಚೇರಿಯಿಂದ ಪಡೆದುಕೊಳ್ಳಬಹುದು. ಡ್ರೋನ್ ಹಾರಿಸುವಾಗ ಏನಾದರೂ ಘಟನೆ/ ಅಪಘಾತ ಸಂಭವಿಸಿದರೆ ಮೂರನೇ ವ್ಯಕ್ತಿಗೆ ಆಗುವ ಹಾನಿಯನ್ನು ಭರಿಸಲು ಆಪರೇಟರ್ಗಳು ಹೊಣೆಗಾರಿಕೆಯೊಂದಿಗೆ ವಿಮೆ ಹೊಂದಿರಬೇಕು ಎಂದು ಆಯುಕ್ತರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್
Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್ ಸೋಂಕು ಅಂಟಿಕೊಂಡೀತು ಹುಷಾರು!
CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ
Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ
Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ