ಡ್ರೋನ್‌ ಮೂಲಕ ಅಡಿಕೆಗೆ ಔಷಧ: ಸುಳ್ಯದಲ್ಲಿ ಪ್ರಥಮ ಪ್ರಯೋಗ


Team Udayavani, Jan 8, 2023, 7:40 AM IST

ಡ್ರೋನ್‌ ಮೂಲಕ ಅಡಿಕೆಗೆ ಔಷಧ: ಸುಳ್ಯದಲ್ಲಿ ಪ್ರಥಮ ಪ್ರಯೋಗ

ಸುಳ್ಯ: ಕರಾವಳಿಯ ಪ್ರಮುಖ ವಾಣಿಜ್ಯ ಬೆಳೆ ಅಡಿಕೆ ಸದ್ಯ ಹಳದಿ ಎಲೆ ರೋಗ, ಎಲೆ ಚುಕ್ಕಿ ರೋಗಕ್ಕೆ ತುತ್ತಾಗಿ ಕೃಷಿ ತೋಟವೇ ನಲುಗಿದೆ. ಇದರ ನಿವಾರಣೆಗೆ ಔಷಧ ಸಿಂಪಡನೆ ಅನಿವಾರ್ಯ. ಇದೀಗ ಡ್ರೋನ್‌ ಮೂಲಕ ಸಿಂಪಡನೆ ತಂತ್ರಜ್ಞಾನ ಬಂದಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮವಾಗಿ ಸುಳ್ಯದಲ್ಲಿ ನಡೆಯುತ್ತಿದೆ.

ಎಲೆಚುಕ್ಕಿ ರೋಗ ವ್ಯಾಪಕವಾಗಿದ್ದು ಅಡಿಕೆ ಕೃಷಿಕರು ಆತಂಕಕ್ಕೆ ಒಳಗಾಗಿದ್ದಾರೆ. ಔಷಧ ಸಿಂಪಡನೆಗೆ ಕಾರ್ಮಿಕರ ಕೊರತೆಯೂ ಎದುರಾಗುತ್ತಿರುವ ಸಂದರ್ಭದಲ್ಲಿ ಸುಧಾರಿತ ತಂತ್ರಜ್ಞಾನ ನೆರವಿಗೆ ಬರುತ್ತಿದೆ. ಕಳಂಜ ಗ್ರಾಮದ ಗಿರಿಕೃಪಾ ಫಾರ್ಮ್ನ ಸುದರ್ಶನ ಕೋಟೆ ಅವರು ಡ್ರೋನ್‌ ಪ್ರಾಯೋಗಿಕ ಬಳಕೆಗೆ ಮುಂದಾಗಿರುವ ಕೃಷಿಕ.

ಕಾರ್ಯಾಚರಣೆ
ಮಲ್ಟಿಪ್ಲೆಕ್ಸ್‌ ಎಂ ಸಂಸ್ಥೆಯವರ ಡ್ರೋನ್‌ ಬಳಕೆಯಾಗುತ್ತಿದ್ದು, 10 ಲೀಟರ್‌ ಸಾಮರ್ಥ್ಯದ ಟ್ಯಾಂಕ್‌ ಹೊಂದಿದೆ. ಔಷಧ ತುಂಬಿದ ಬಳಿಕ ಒಟ್ಟು ತೂಕ 25 ಕೆ.ಜಿ. ಇರಲಿದೆ. 10 ಲೀಟರ್‌ ಔಷಧವನ್ನು ಅರ್ಧ ಎಕ್ರೆ ತೋಟಕ್ಕೆ 15 ನಿಮಿಷಗಳಲ್ಲಿ ಸಿಂಪಡಿಸಬಹುದಾಗಿದೆ. ಡ್ರೋನ್‌ ಅಡಿಕೆ ಮರಗಳ ಮೇಲ್ಭಾಗಕ್ಕೆ ತೆರಳಿ ಎಲೆಗಳ ಮೇಲೆ ಔಷಧ ಸಿಂಪಡಿಸು ತ್ತದೆ. ಶೃಂಗೇರಿ ಮೊದಲಾದೆಡೆ ಈಗಾಗಲೇ ಔಷಧ ಸಿಂಪಡಣೆಗೆ ಡ್ರೋನ್‌ ಬಳಸಲಾಗಿದೆ.

ಸುಧಾರಣೆ ಅಗತ್ಯ
ಪ್ರಸ್ತುತ ಇರುವ ಡ್ರೋನ್‌ ಅಡಿಕೆ ಎಲೆಗೆ ಔಷಧ ಸಿಂಪಡಿಸಲಷ್ಟೇ ಸಹಕಾರಿ. ಸಿಂಗಾರ, ಗೊಂಚಲಿಗೆ ಸಿಂಪಡಿಸಲು ಸಾಧ್ಯವಾಗುತ್ತಿಲ್ಲ. ಸುಧಾರಣೆ ಕಂಡಲ್ಲಿ ಕೃಷಿಕರಿಗೆ ಇನ್ನಷ್ಟು ಸಹಕಾರಿಯಾಗಲಿದೆ. ಡ್ರೋನ್‌ ಮೂಲಕ ಸಿಂಪಡಿಸಿರುವ ಔಷಧದ ಪರಿಣಾಮ ಇನ್ನಷ್ಟೇ ತಿಳಿದುಬರಬೇಕು. ಆದರೂ ಈ ವಿಧಾನ ಪ್ರಯೋಜನಕಾರಿ ಎನ್ನುತ್ತಾರೆ ಕೃಷಿಕರು.

ಪ್ರಯೋಜನಗಳು
ಡ್ರೋನ್‌ ಮೂಲಕ ಔಷಧ ಸಿಂಪಡನೆ ಕಡಿಮೆ ಖರ್ಚು, ಕಡಿಮೆ ಸಮಯದಲ್ಲಿ ಆಗುತ್ತಿದೆ. ಆದ್ದರಿಂದ ಇದಕ್ಕೆ ಬೇಡಿಕೆ ವ್ಯಕ್ತವಾಗಿದ್ದು, ಸಂಸ್ಥೆಯವರು ಜಿಲ್ಲೆಗೆ 3 ಡ್ರೋನ್‌ ನೀಡಲಿದ್ದಾರೆ ಎನ್ನಲಾಗಿದೆ. ಸುಳ್ಯ ತಾಲೂಕಿನ ಕಳಂಜ, ಅಮರಮುಟ್ನೂರು, ಅಮರಪಟ್ನೂರು, ಮರ್ಕಂಜ, ದೊಡ್ಡತೋಟ, ಪಂಜ, ಬಳ್ಪ, ಯೇನೆಕಲ್ಲು, ಸುಬ್ರಹ್ಮಣ್ಯ ಭಾಗದ ಕೃಷಿಕರೂ ಈಗಾಗಲೇ ಔಷಧ ಸಿಂಪಡಣೆಗೆ ಡ್ರೋನ್‌ ಕಾದಿರಿಸಿದ್ದಾರೆ.

ನಾನು ನಮ್ಮ 8 ಎಕ್ರೆ ಅಡಿಕೆ ತೋಟಕ್ಕೆ 180 ಲೀಟರ್‌ ಔಷಧವನ್ನು ಡ್ರೋನ್‌ ಮೂಲಕ ಸಿಂಪಡಿಸಿದ್ದೇನೆ. ಫ‌ಲಿತಾಂಶವನ್ನು ಈಗಲೇ ಹೇಳಲಾಗದು. ಆದರೂ ಇದು ಕೃಷಿಕರಿಗೆ ಪೂರಕವಾದ ಪ್ರಯೋಗ. ಅಡಿಕೆ ಸಿಂಗಾರ, ಗೊಂಚಲಿಗೆ ಔಷಧ ಸಿಂಪಡಿಸುವ ಡ್ರೋನ್‌ ಬಂದರೆ ಉತ್ತಮ.
– ಸುದರ್ಶನ ಕೋಟೆ, ಕೃಷಿಕ

ಟಾಪ್ ನ್ಯೂಸ್

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.