ಪುತ್ತೂರಿನಲ್ಲಿ  ಡ್ರಗ್ಸ್‌  ಜಾಲದ ಕರಿನೆರಳು


Team Udayavani, Apr 11, 2017, 12:27 PM IST

drugs.jpg

ಪುತ್ತೂರು: ನಗರದಲ್ಲಿ ವಿದ್ಯಾರ್ಥಿಗಳನ್ನು ಗುರಿಯಾಗಿಸಿ ಮಾದಕ ದ್ರವ್ಯ ಮಾರಾಟ ಜಾಲ ವ್ಯವಹರಿಸುತ್ತಿದೆ ಎಂದು ಕಳೆದ ಕೆಲವು ವರ್ಷಗಳಿಂದ ವ್ಯಕ್ತವಾಗಿರುವ ಅನುಮಾನಕ್ಕೆ ಗಾಂಜಾ ಸೇವನೆ ಪ್ರಕರಣಗಳು ಪುಷ್ಟಿ ನೀಡಿವೆ.  ನೂರಾರು ವಿದ್ಯಾರ್ಥಿಗಳು ಅಮಲು ಪದಾರ್ಥ ಸೇವನೆ ಚಟಕ್ಕೆ ಬಿದ್ದಿರುವ ಅನುಮಾನ ದಟ್ಟವಾಗಿದೆ.

ಕೆಲವು ದಿನಗಳ ಹಿಂದೆ ಹುಟ್ಟುಹಬ್ಬದ ಪಾರ್ಟಿಯಲ್ಲಿ ಗಾಂಜಾ ಸೇವಿಸಿ ವಿಚಿತ್ರವಾಗಿ ವರ್ತಿಸುತ್ತಿದ್ದ ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದರು. ಕಳೆದ ವರ್ಷ ನಗರದ ಕಾಲೇಜೊಂದರ ಪರಿಸರದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ವಿದ್ಯಾರ್ಥಿಗಳೇ ಹಿಡಿದು ಪೊಲೀಸರಿಗೊಪ್ಪಿಸಿದ್ದರು. ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಗಾಂಜಾ ಸಾಗಾಟ ನಡೆಸುತ್ತಿದ್ದ 15ಕ್ಕೂ ಅಧಿಕ ಪ್ರಕರಣಗಳು ಪತ್ತೆಯಾಗಿದ್ದವು.

ಆರೋಪಿಗಳಿಗಿಲ್ಲ  ಭಯ
ಈ ಡ್ರಗ್ಸ್‌ ಜಾಲದಲ್ಲಿ ಬಂಧಿತರಾಗುವ ಆರೋಪಿಗಳನ್ನು ಜಾಮೀನಿನಲ್ಲಿ ಬಿಡುಗಡೆಗೊಳಿಸಲಾಗುತ್ತದೆ. ಆದರೆ ಪ್ರಕರಣದ ಗಂಭೀರತೆ ಅರಿತು ಡ್ರಗ್ಸ್‌ನ ಮೂಲ ಎಲ್ಲಿಯದ್ದು ಎಂಬ ತನಿಖೆ ನಡೆದಿದ್ದರೆ ಸತ್ಯಾಂಶ ಹೊರ ಬರುತ್ತಿತ್ತು. ಜಾಮೀನು ಸಿಗುತ್ತದೆ ಎಂಬ ಕಾರಣಕ್ಕೆ ಆರೋಪಿಗಳೂ ತಲೆ ಕೆಡಿಸಿಕೊಳ್ಳುವುದಿಲ್ಲ. ಹೀಗಾಗಿ ಅಮಲು ಪದಾರ್ಥ ಸಾಗಾಟ, ಪೂರೈಕೆ ಎಗ್ಗಿಲ್ಲದೆ ಸಾಗಿದೆ. ಹದಿಹರೆಯದವರು ಬಲಿಯಾಗುತ್ತಿದ್ದಾರೆ. ಇಷ್ಟಾದರೂ ಪೊಲೀಸ್‌ ಇಲಾಖೆ ಮಾತ್ರ ಮಾರಾಟವನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ಪೋಷಕರು ಸೇರಿದಂತೆ ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸ್ಥಾನದಲ್ಲಿಯೇ ವಿಲೇ!
ನಗರದ ಮುಖ್ಯ ಬಸ್‌ ನಿಲ್ದಾಣದ ಬಳಿ, ನೆಲ್ಲಿಕಟ್ಟೆ ಹಳೆ ಶಾಲಾ ಕಟ್ಟಡದ ಸಮೀಪ ಗಾಂಜಾ ವ್ಯವಹಾರ ನಡೆಸಿ ವಿದ್ಯಾರ್ಥಿಗಳನ್ನು ಖೆಡ್ಡಾಕ್ಕೆ ಬೀಳಿಸಲಾಗುತ್ತಿದೆ ಎನ್ನುವ ಆತಂಕಕಾರಿ ವಿಚಾರಗಳು ಹರಿದಾಡುತ್ತಿವೆ. ಅನುಮಾನಕ್ಕೆ ಸಾಕ್ಷಿಯೆಂಬಂತೆ ನೆಲ್ಲಿಕಟ್ಟೆಯಲ್ಲಿ ಕುಸಿಯುವ ಹಂತಕ್ಕೆ ತಲುಪಿರುವ ಹಳೆ ಕಟ್ಟಡದೊಳಗೆ ಅಮಲು ಪದಾರ್ಥ, ಸಿಗರೇಟು ತುಂಡುಗಳು ಕಂಡುಬಂದಿವೆ. ಈ ಕಟ್ಟಡದ ಸುತ್ತ ರಾತ್ರಿ ವೇಳೆ ಪೊಲೀಸ್‌ ರಕ್ಷಣೆ ಒದಗಿಸುವಂತೆ ಸಾರ್ವಜನಿಕರು ಮನವಿ ಮಾಡಿದ್ದರು. ನಿರ್ಜನವಾಗಿರುವ ಈ ಕಟ್ಟಡದೊಳಗೆ ಅಕ್ರಮ ವ್ಯವಹಾರ ನಡೆಯುವ ಬಗ್ಗೆ ಈ ಹಿಂದೆಯೇ ಅನುಮಾನ ವ್ಯಕ್ತವಾಗಿತ್ತು.

ವಿದ್ಯಾರ್ಥಿಗಳೇ ಗುರಿ
ವಿದ್ಯಾರ್ಥಿಗಳನ್ನು ಗುರಿಯಾಗಿಸಿ ಅಮಲು ಪದಾರ್ಥ ಪೂರೈಸಲಾಗುತ್ತಿದೆ. ವಾರದ ನಿರ್ದಿಷ್ಟ ದಿನ, ಸಮಯದಲ್ಲಿ ಕಾಲೇಜು ಪರಿಸರ, ಪಿ.ಜಿ. ಮೊದಲಾದೆಡೆ ಮಾರಾಟ ಮಾಡಲಾಗುತ್ತಿದೆ. ನಗರದಲ್ಲಿ ಅನಧಿಕೃತವಾಗಿ ಕಾರ್ಯಾಚರಿಸುತ್ತಿರುವ ಕೆಲವು ಪೇಯಿಂಗ್‌ ಗೆಸ್ಟ್‌ಗಳ ಬಳಿ ಡ್ರಗ್ಸ್‌ ಮಾರಾಟ ಸುರಕ್ಷಿತವೆನಿಸಿದೆ. ಕಾಲೇಜು ಪರಿಸರ, ಪಿ.ಜಿ.ಗಳ ಬಳಿ ಮಾರಾಟ ಮಾಡಿದರೆ, ಅದು ಪೊಲೀಸರ ಗಮನಕ್ಕೂ ಬರುವುದಿಲ್ಲ ಅನ್ನುವುದು ಡ್ರಗ್ಸ್‌ ಮಾರಾಟದಾರರಿಗೂ ಚೆನ್ನಾಗಿ ಅರಿವಿದೆ.

ಹೊರರಾಜ್ಯದಿಂದ ಪೂರೈಕೆ?
ಅಮಲು ಪದಾರ್ಥದ ಬಹು ದೊಡ್ಡ ಜಾಲವೇ ಹಬ್ಬಿದೆ. ಕೇರಳ- ಪುತ್ತೂರು ಕೇಂದ್ರೀಕೃತವಾಗಿ ಸಾಗಾಟ ನಡೆಸುತ್ತಿರುವ ಅನುಮಾನ ಮೂಡಿದೆ. ದರ್ಬೆ, ಕೂರ್ನಡ್ಕ, ನೆಲ್ಲಿಕಟ್ಟೆ, ಬೊಳುವಾರು, ನೆಹರೂನಗರ ಸೇರಿದಂತೆ ಆಯ್ದ ಭಾಗವನ್ನು ಗುರಿಯಾಗಿಸಿ ಡ್ರಗ್ಸ್‌ ಪೂರೈಸಲಾಗುತ್ತಿದೆ ಎನ್ನಲಾಗಿದೆ.

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಶಂಭೂರು: ಕಾರು-ಬೈಕ್‌ ಢಿಕ್ಕಿ; ಸವಾರ ಗಾಯ

Road Mishap ಶಂಭೂರು: ಕಾರು-ಬೈಕ್‌ ಢಿಕ್ಕಿ; ಸವಾರ ಗಾಯ

Bantwal ರಸ್ತೆ ದಾಟಲು ನಿಂತಿದ್ದ ಮಹಿಳೆಗೆ ರಿಕ್ಷಾ ಢಿಕ್ಕಿ; ಗಾಯ

Bantwal ರಸ್ತೆ ದಾಟಲು ನಿಂತಿದ್ದ ಮಹಿಳೆಗೆ ರಿಕ್ಷಾ ಢಿಕ್ಕಿ; ಗಾಯ

udAgricultural ಪಂಪ್‌ಸೆಟ್‌ ಕಳವು: ಕಳ್ಳರ ಚಹರೆ ಕೆಮರಾದಲ್ಲಿ ಸೆರೆ

Agricultural ಪಂಪ್‌ಸೆಟ್‌ ಕಳವು: ಕಳ್ಳರ ಚಹರೆ ಕೆಮರಾದಲ್ಲಿ ಸೆರೆ

Bantwal ಸಂಬಂಧಿ ಯುವತಿಯ ಮೇಲೆ ಅತ್ಯಾಚಾರ: ಆರೋಪಿ ಬಂಧನ

Bantwal ಸಂಬಂಧಿ ಯುವತಿಯ ಮೇಲೆ ಅತ್ಯಾಚಾರ: ಆರೋಪಿ ಬಂಧನ

Sullia: ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ 2ವರ್ಷ: ಈವರೆಗೂ 7ಮಂದಿಯ ಪತ್ತೆಯೇ ಆಗಿಲ್ಲ!

Sullia: ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ 2ವರ್ಷ: ಈವರೆಗೂ 7ಮಂದಿಯ ಪತ್ತೆಯೇ ಆಗಿಲ್ಲ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.