ದಿಡುಪೆ-ಸಂಸೆ ರಸ್ತೆ: ಮುಕ್ತಾಯ ಹಂತದಲ್ಲಿ ಸರ್ವೇ
Team Udayavani, Oct 24, 2021, 6:10 AM IST
ಬೆಳ್ತಂಗಡಿ: ತಾಲೂಕು ವ್ಯಾಪ್ತಿಯ ಕುದುರೆಮುಖ ರಾಷ್ಟ್ರೀಯ ಉದ್ಯಾನವನವಾಗಿ ಹಾದು ಹೋಗುವ ಬಹುಕಾಲದ ಬೇಡಿಕೆಯ ದಿಡುಪೆ-ಎಳನೀರು-ಸಂಸೆ ರಸ್ತೆ ನಿರ್ಮಾಣಕ್ಕೆ ಸರ್ವೇ ಕಾರ್ಯ ನಡೆಯುತ್ತಿದ್ದು, ಬಹುತೇಕ ಮುಕ್ತಾಯದ ಹಂತದಲ್ಲಿದೆ.
ಅನೇಕ ವರ್ಷಗಳ ಹೋರಾಟದ ಫಲವಾಗಿ ಅರಣ್ಯ ಇಲಾಖೆಯ ವನ್ಯ ಜೀವಿ ವಿಭಾಗವು ಲೋಕೋಪಯೋಗಿ ಇಲಾಖೆಯ ಬೆಳ್ತಂಗಡಿ ಸಹಾಯಕ ಕಾರ್ಯ ಪಾಲಕ ಅಭಿಯಂತರಿಗೆ ಸರ್ವೇ ಕಾರ್ಯಕ್ಕೆ ಒಪ್ಪಿಗೆ ಸೂಚಿಸಿದ್ದು, ವನ್ಯಜೀವಿ ಮೀಸಲು ಅರಣ್ಯಕ್ಕೊಳಪಟ್ಟಿರುವ 6 ಕಿ.ಮೀ. ಮತ್ತು ಕಂದಾಯ ಇಲಾಖೆಗೆ ಒಳಪಟ್ಟಿರುವ 9 ಕಿ.ಮೀ. ವ್ಯಾಪ್ತಿಯಲ್ಲಿ ಸರ್ವೇ ನಡೆಯುತ್ತಿದೆ.
ಅರಣ್ಯ ವ್ಯಾಪ್ತಿಯಲ್ಲಿ 6 ಅಡಿ ರಸ್ತೆ
ಬ್ರಿಟಿಷ್ ಸರಕಾರ 1939ರಲ್ಲಿ ನಡೆಸಿದ್ದ ಅರಣ್ಯ ಸರ್ವೇಯಂತೆ ಜನ – ಜಾನುವಾರುಗಳ ಕಾಲ್ನಡಿಗೆಗೆಂದು ಕಾಲು ದಾರಿಯನ್ನಷ್ಟೇ ಕಲ್ಪಿಸಿತ್ತು. ಅದರಂತೆ 6 ಕಿ.ಮೀ. ಅರಣ್ಯ ವ್ಯಾಪ್ತಿಯಲ್ಲಿ 6 ಅಡಿ ಸರ್ವಋತು ಕಾಂಕ್ರೀಟ್ ಅಥವಾ ಡಾಮರು ರಸ್ತೆ, ಉಳಿದ 9 ಕಿ.ಮೀ.ಯಲ್ಲಿ 12 ಅಡಿ ಅಗಲದ ರಸ್ತೆ ನಿರ್ಮಿಸುವಂತೆ ಯೋಜನೆ ರೂಪಿಸಲಾಗಿದೆ.
ದಿಡುಪೆ-ಸಂಸೆ ರಸ್ತೆ ಸರ್ವೇ ಕಾರ್ಯ ಮುಕ್ತಾಯ ಹಂತದಲ್ಲಿದೆ. ವನ್ಯಜೀವಿ ಮೀಸಲು ಅರಣ್ಯ ವ್ಯಾಪ್ತಿಯಲ್ಲಿ 6 ಅಡಿ ಅಗಲದ ಸರ್ವಋತು ರಸ್ತೆ, ಉಳಿದೆಡೆ 12 ಅಡಿ ಅಗಲದ ರಸ್ತೆ ನಿರ್ಮಿಸುವ ಕುರಿತು ಸಮಗ್ರ ಯೋಜನಾ ವರದಿ (ಡಿಪಿಆರ್) ರಚಿಸಿ ಸರಕಾರಕ್ಕೆ ಸಲ್ಲಿಸಲಾಗುವುದು.
ಇದನ್ನೂ ಓದಿ:ಅಕ್ರಮ ಚಟುವಟಿಕೆಗಳಿಗೆ ಕಡಿವಾಣ: ಕಮಲ್ ಪಂತ್
ಜೀವಮಾನದ ಸಂಪರ್ಕ ರಸ್ತೆ
ದಿಡುಪೆ-ಸಂಸೆ ರಸ್ತೆಯಾದಲ್ಲಿ ಪರ್ಯಾಯ ರಸ್ತೆಯ ಜತೆಗೆ ಅತೀ ಕಡಿಮೆ ಅಂದಾಜು 7 ಕಿ.ಮೀ.ಗಳಷ್ಟೇ ಘಾಟಿ ಪ್ರದೇಶ ಕ್ರಮಿಸುವ ಅಂತರ ವಾಗಲಿದೆ. ನೂತನ ರಸ್ತೆಗೆ ಯಾವುದೇ ದೊಡ್ಡ ಸೇತುವೆಗಳ ಆವಶ್ಯಕತೆಯಿಲ್ಲ. ಕಾಂಕ್ರೀಟ್ ಮೋರಿಗಳಷ್ಟೇ ಸಾಕು. ರಸ್ತೆ ನಿರ್ಮಾಣ ವಾದಲ್ಲಿ ರಾಷ್ಟ್ರೀಯ ಹೆದ್ದಾರಿ-73 ಚಾರ್ಮಾಡಿ ಘಾಟಿ ರಸ್ತೆಗೆ ಪರ್ಯಾಯವಾಗಲಿದೆ. ಅಷ್ಟೇ ಅಲ್ಲದೆ 500ಕ್ಕೂ ಅಧಿಕ ಜನಸಂಖ್ಯೆ ಯಿರುವ ಎಳನೀರು ಪ್ರದೇಶದ ಜನರಿಗೆ ಆರೋಗ್ಯ, ಶಿಕ್ಷಣ ಇತ್ಯಾದಿಗಾಗಿ ತಾಲೂಕು ಕೇಂದ್ರ ನಿಕಟವಾಗಲಿದೆ. ಜತೆಗೆ ಅದು ಅಲ್ಲಿನ ಜನತೆಗೆ ಜೀವಮಾನದ ಸಂಪರ್ಕ ರಸ್ತೆಯಾಗಲಿದೆ.
ದಿಡುಪೆ-ಸಂಸೆ ರಸ್ತೆ ಸರ್ವೇ ಕಾರ್ಯ ಮುಕ್ತಾಯ ಹಂತದಲ್ಲಿದೆ. ವನ್ಯಜೀವಿ ಮೀಸಲು ಅರಣ್ಯ ವ್ಯಾಪ್ತಿಯಲ್ಲಿ 6 ಅಡಿ ಅಗಲದ ಸರ್ವಋತು ರಸ್ತೆ, ಉಳಿದೆಡೆ 12 ಅಡಿ ಅಗಲದ ರಸ್ತೆ ನಿರ್ಮಿಸುವ ಕುರಿತು ಸಮಗ್ರ ಯೋಜನಾ ವರದಿ (ಡಿಪಿಆರ್) ರಚಿಸಿ ಸರಕಾರಕ್ಕೆ ಸಲ್ಲಿಸಲಾಗುವುದು..
– ಶಿವಪ್ರಸಾದ್ ಅಜಿಲ,
ಸಹಾಯಕ ಕಾರ್ಯಪಾಲಕ ಅಭಿಯಂತ,
ಲೋಕೋಪಯೋಗಿ ಇಲಾಖೆ ಬೆಳ್ತಂಗಡಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್