ಫ್ಲೈಓವರ್ ವಿಳಂಬಕ್ಕೆ ಕಾಂಗ್ರೆಸ್ ಕಡತ ಬಾಕಿಯಿರಿಸಿದ್ದು ಕಾರಣ
Team Udayavani, Mar 7, 2019, 12:30 AM IST
ಮಂಗಳೂರು: ಪಂಪ್ವೆಲ್ ಮೇಲ್ಸೇತುವೆ ಕಾಮಗಾರಿ ವಿಳಂಬಕ್ಕೆ ಮಂಗಳೂರು ಮಹಾನಗರ ಪಾಲಿಕೆಯ ಕಾಂಗ್ರೆಸ್ ಆಡಳಿತದಲ್ಲಿ ಮಹಾವೀರ ವೃತ್ತ ಸ್ಥಳಾಂತರಿಸುವ ಕಡತವನ್ನು ವಿಲೇವಾರಿ ಮಾಡದಿರುವುದೇ ಪ್ರಮುಖ ಕಾರಣ ಎಂದು ವಿಪಕ್ಷ ಬಿಜೆಪಿ ಗಂಭೀರ ಆರೋಪ ಮಾಡಿದೆ.
ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಇದಕ್ಕೆ ಸಂಬಂಧಿಸಿದ ದಾಖಲೆಬಿಡುಗಡೆಗೊಳಿಸಿದ ಪಾಲಿಕೆ ವಿಪಕ್ಷನಾಯಕ ಪ್ರೇಮಾನಂದ ಶೆಟ್ಟಿ ಮಾತನಾಡಿ, ಫ್ಲೈಓವರ್ ನಿರ್ಮಾಣ ಸಂಬಂಧ ಸಂಸದ ನಳಿನ್ ಕುಮಾರ್ ಕಟೀಲು ಅವರನ್ನು ಗುರಿಯನ್ನಾಗಿಸಿ ಕಾಂಗ್ರೆಸ್ ಪದೇ ಪದೇ ಟೀಕಿಸು ತ್ತಿದೆ. ಆದರೆ ಫ್ಲೈಓವರ್ ನಿರ್ಮಾಣ ಸಂಬಂಧ 2014ರ ಕಡತವೊಂದನ್ನು ಕಾಂಗ್ರೆಸ್ ಆಡಳಿತದ ಮಹಾನಗರ ಪಾಲಿಕೆ ಇನ್ನೂ ವಿಲೇವಾರಿ ಮಾಡಿಲ್ಲ.ಆ ಮೂಲಕ ಕಾಮಗಾರಿ ವಿಳಂಬಕ್ಕೆ ಅವರೇ ಕಾರಣಕರ್ತರು ಎಂದರು.
ಮನಪಾಕ್ಕೆ ಅತ್ಯಧಿಕ ಅನುದಾನ
ಪಾಲಿಕೆಗೆ ರಾಜ್ಯದಲ್ಲಿ ಬಿಜೆಪಿ ಸರಕಾರ ಮತ್ತು ಕೇಂದ್ರದಲ್ಲಿ ಮೋದಿ ಸರಕಾರದಿಂದ ಮಾತ್ರ ಹೆಚ್ಚಿನ ಅನುದಾನ ಬಂದಿದೆ. ಆದರೆ ಮನಪಾಕ್ಕೆ ಕೇಂದ್ರದಿಂದ ಅನುದಾನ ಬಂದಿಲ್ಲ ಎಂದು ಆರೋಪಿಸುತ್ತಿರುವುದು ಸರಿ ಯಲ್ಲ. ಸ್ವತ್ಛ ಭಾರತ್ ಯೋಜನೆಯಲ್ಲಿ ಶೌಚಗೃಹ ನಿರ್ಮಾಣಕ್ಕೆ 88 ಲಕ್ಷ ರೂ., ಘನತ್ಯಾಜ್ಯ ವಿಲೇವಾರಿಗೆ 14 ಕೋಟಿ ರೂ. ಅನುದಾನ ಬಂದಿದೆ. ಅಮೃತ್ ಯೋಜನೆ, ಸ್ಮಾರ್ಟ್ ಸಿಟಿ ಕೇಂದ್ರದ ಯೋಜನೆಗಳಾಗಿವೆ. 13ನೇ ಹಣಕಾಸು ಯೋಜನೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರದ ಅವಧಿಯಲ್ಲಿ ಮನಪಾಕ್ಕೆ 54.52 ಕೋಟಿ ರೂ. ಅನುದಾನ ಬಂದಿದ್ದರೆ, ಬಿಜೆಪಿ ನೇತೃತ್ವದ ಎನ್ಡಿಎ ಸರಕಾರದ ಈ ಅವಧಿಯಲ್ಲಿ 89.21 ಕೋಟಿ ರೂ. ಅನುದಾನ ಬಂದಿದೆ. ಇನ್ನೂ ಪರ್ಫಾರ್ಮೆನ್ಸ್ ಆಧಾರದಲ್ಲಿ 20 ಕೋಟಿ ರೂ. ಬರಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ