ಕಾರ್ಯಕರ್ತ ಪರಿಶ್ರಮ ಸಂಘಟನೆಯ ಯಶಸ್ಸಿಗೆ ಕಾರಣ


Team Udayavani, Mar 28, 2017, 11:20 AM IST

28-SUDINA-9.jpg

ನಗರ: ದಲಿತ್‌ ಸೇವಾ ಸಮಿತಿ ಸಂಘಟನೆ ಆರಂಭಿಸಿದಾಗ ಬೆರಳೆಣಿಕೆ ಸದಸ್ಯರಿದ್ದರು. ಈಗ ಜಿಲ್ಲಾ ಮಟ್ಟದಲ್ಲಿ ಬಲಿಷ್ಠ ಸಂಘಟನೆಯಾಗಿ ರೂಪುಗೊಂಡಿದೆ. ಕಾರ್ಯಕರ್ತರ ಅವಿರತ ಪರಿಶ್ರಮವೇ ಸಂಘಟನೆಯ ಬೆಳವಣಿಗೆಗೆ ಕಾರಣ ಎಂದು ದ.ಕ. ಜಿಲ್ಲಾ ದಲಿತ್‌ ಸೇವಾ ಸಮಿತಿ ಜಿಲ್ಲಾಧ್ಯಕ್ಷ ಬಿ.ಕೆ. ಸೇಸಪ್ಪ ಬೆದ್ರಕಾಡು ಹೇಳಿದರು.

ಪುರಭವನದಲ್ಲಿ ದ.ಕ. ಜಿಲ್ಲಾ ದಲಿತ್‌ ಸೇವಾ ಸಮಿತಿ ಪುತ್ತೂರು ತಾಲೂಕು ಸಮಿತಿಯ 3ನೇ ವಾರ್ಷಿಕ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಸಮಾಜದ, ಸಮುದಾಯದ ಜನರಿಗೆ ತೊಂದರೆ ಆದಾಗ, ಕಾನೂನಿನ ಪರಿಮಿತಿ ಯೊಳಗೆ ಹೋರಾಟ ಮಾಡಬೇಕು. ನ್ಯಾಯ ಮಾರ್ಗದಲ್ಲಿ ಹೋರಾಟ ನಡೆಸಿ ದರೆ, ಸಂಘಟನೆಯು ಬೆಳೆಯುತ್ತದೆ. ಸಮಾಜಕ್ಕೂ ಒಳಿತಾಗುತ್ತದೆ ಎಂದರು.

ದೌರ್ಜನ್ಯದ ವಿರುದ್ಧ ಹೋರಾಟ
ಸಭಾ ಅಧ್ಯಕ್ಷತೆ ವಹಿಸಿದ್ದ ದಲಿತ್‌ ಸೇವಾ ಸಮಿತಿ ತಾಲೂಕು ಅಧ್ಯಕ್ಷ ಗಿರಿಧರ ನಾಯ್ಕ ಮಾತನಾಡಿ, ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ ವಿಚಾರಧಾರೆಯನ್ನು ಇಟ್ಟುಕೊಂಡು, ಸಮಾಜದ ಏಳಿಗಾಗಿ ಹೋರಾಟ ನಡೆಸುತ್ತಿದ್ದೇವೆ. ದಲಿತರ ಮೇಲಿನ ಶೋಷಣೆ, ದೌರ್ಜನ್ಯದ ವಿರುದ್ಧ ಧ್ವನಿ ಎತ್ತಿ ನ್ಯಾಯ ಒದಗಿಸುವ ಪ್ರಾಮಾಣಿಕ ಪ್ರಯತ್ನ ಸಂಘಟನೆಯ ಮೂಲಕ ನಡೆಯಲಿದೆ ಎಂದರು.

ಕಾಲನಿಗಳಲ್ಲಿ ಸ್ವತ್ಛತಾ ಅಭಿಯಾನ ಹಮ್ಮಿಕೊಳುವ ಉದ್ದೇಶ ಹೊಂದಲಾಗಿದೆ. ಸ್ವತ್ಛತೆ ತೋರಿಕೆಗೆ ಇರದೇ, ಅದು ನೈಜ ರೂಪದಲ್ಲಿ ಮಾಡಿ ತೋರಿಸುವ ಉದ್ದೇಶ ಹೊಂದಲಾಗಿದೆ ಎಂದು ಹೇಳಿದರು. ದಲಿತ್‌ ಸೇವಾ ಸಮಿತಿ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಚಂದ್ರಾವತಿ ಎಂ. ಮಾಣಿಲ ಮಾತನಾಡಿ, ದಲಿತ ಸಂಘಟನೆ ಯಲ್ಲಿ ಮಹಿಳಾ ಸಂಘಟನೆ ಬಲಶಾಲಿ ಯಾಗಬೇಕಿದೆ. ಅದಕ್ಕಾಗಿ ತಾಲೂಕಿನಲ್ಲಿ ಸಂಘಟನೆಯ ನೇತೃತ್ವ ವಹಿಸಿಕೊಳ್ಳಲು ಮುಂದೆ ಬರಬೇಕು ಎಂದರು.

ನಂದಕುಮಾರ್‌ ಮಾತನಾಡಿ, ಸಂಪಾ ದನೆಯ ಒಂದು ಭಾಗವನ್ನು ಸಮಾ ಜಕ್ಕೆ ಮೀಸಲಿಡುವ ಗುಣ ನಮ್ಮಲ್ಲಿ ಇರಬೇಕು. ನಿರ್ಗತಿಕರ ಉದ್ಧಾರಕ್ಕಾಗಿ ಕಿಂಚಿತ್‌ ಸೇವೆ ಮಾಡಬೇಕು. ಸಂಸ್ಕಾರಯುತ ಬದುಕು ನಮ್ಮದಾಗಬೇಕು ಎಂದು ಹೇಳಿದರು.

ಗೌರವಾರ್ಪಣೆ
ದಲಿತ್‌ ಸೇವಾ ಸಮಿತಿ ಆಲಂಕಾರು ಗ್ರಾಮ ಸಮಿತಿ ಕಾರ್ಯದರ್ಶಿ ಹರ್ಷಿತಾ ನಗ್ರಿ ಅವರಿಗೆ ಸಂಘಟನೆಯ ಗುರುತಿನ ಚೀಟಿ ನೀಡಲಾಯಿತು. ವಿವಿಧ ರೀತಿಯಲ್ಲಿ ಸಹಕರಿಸಿದ  ಸುರೇಶ್‌, ವಿಟಲ, ಸುರೇಂದ್ರ, ಧನಂಜಯ, ಅನಿಲ್‌ ನಾಯ್ಕ, ಜಯ ರಾಮ, ಹರೀಶ್‌ ನಾಯ್ಕ, ಉಮೇಶ್‌ ತ್ಯಾಗರಾಜ, ಪ್ರಮೋದ್‌ ತಿಂಗಳಾಡಿ, ಆಶಾಲತಾ ಸೊರಕೆ, ಬ್ರಹ್ಮನಗರ ಕಾಲ ನಿಯ ಮಾರಿಯಮ್ಮ ಸೇವಾ ಸಮಿತಿ ಸದಸ್ಯರನ್ನು ಗೌರವಿಸಲಾಯಿತು.

ನಗರ ಪೊಲೀಸ್‌ ಠಾಣೆಯ ಉಪ ನಿರೀಕ್ಷಕಿ ಒಮನ ಮತ್ತಿತರರು ಉಪಸ್ಥಿತ ರಿದ್ದರು. ಅಖೀಲಾ ತಿಂಗಳಾಡಿ ಪ್ರಾರ್ಥಿಸಿ, ಪ್ರಮೋದ್‌ ಸ್ವಾಗತಿಸಿ, ವಂದಿಸಿದರು. ಸಭಾ ಕಾರ್ಯಕ್ರಮದ ಬಳಿಕ ವಿಟಲ ನಾಯಕ್‌ ಮತ್ತು ಬಳಗದವರಿಂದ  ಗೀತಾ ಸಾಹಿತ್ಯ ಕಾರ್ಯಕ್ರಮ ನಡೆಯಿತು. ಸಭಾ ಕಾರ್ಯಕ್ರಮದ ಆರಂಭದಲ್ಲಿ ದರ್ಬೆಯಿಂದ ಪುರಭವನದ ತನಕ ಕಾಲ್ನಡಿಗೆ ಜಾಥಾ ನಡೆಯಿತು.

ದುರ್ಬಳಕೆ ತಡೆಯಬೇಕು
ಮಾಹಿತಿ ಹಕ್ಕು ಹೋರಾಟಗಾರ ಬಾಲಚಂದ್ರ ಸೊರಕೆ ಮಾತನಾಡಿ, ದಲಿತ ಪದದ ದುರ್ಬಳಕೆ ಮಾಡುವ ಹುನ್ನಾರ ನಡೆಯುತ್ತಿದೆ. ಈ ಹಿಂದೆ ಕಂದಾಯ ಇಲಾಖೆಯ ಇಬ್ಬರು ಅಧಿಕಾರಿಗಳು ಸರಕಾರಿ ಕೆಲಸಕ್ಕಾಗಿ ದಲಿತರೆಂದು ಸುಳ್ಳು ಪ್ರಮಾಣ ಪತ್ರ ಪಡೆದಿರುವುದು ಇದೆ. ಪ್ರಕರಣ ಬಯಲಾಗುವ ಹೆದರಿಕೆಯಿಂದ ಸ್ವಯಂ ನಿವೃತ್ತಿ ಪಡೆದಿದ್ದಾರೆ. ಇಂತಹ ನೂರಾರು ಉದಾಹರಣೆಗಳಿದ್ದು, ದಲಿತ ಸಮುದಾಯ ಜಾಗೃತಿಗೊಂಡು ದುರ್ಬಳಕೆ ತಡೆಯಬೇಕು ಎಂದರು.

ಟಾಪ್ ನ್ಯೂಸ್

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.