ಅಗೆದು ಹಾಕಿದ ರಸ್ತೆ: ದುರಸ್ತಿ ಕಾಮಗಾರಿ ಅರ್ಧದಲ್ಲೇ ಬಾಕಿ


Team Udayavani, Jan 24, 2018, 4:33 PM IST

24-Jan-24.jpg

ಸುಬ್ರಹ್ಮಣ್ಯ : ಗುತ್ತಿಗಾರು – ಕಮಿಲ – ಬಳ್ಪ ರಸ್ತೆ ದುರಸ್ತಿಗಾಗಿ 10 ವರ್ಷಗಳಿಂದ ಜನರು ಒತ್ತಾಯಿಸುತ್ತಿದ್ದರು. ಕೊನೆಗೂ ಅನುದಾನ ದೊರೆತು ಅಭಿವೃದ್ಧಿ ಕಾಮಗಾರಿ ಆರಂಭಗೊಂಡಿತು. ಅದೀಗ ಆಮೆಗತಿಯಲ್ಲಿ ಸಾಗುತ್ತಿದೆ.

ರಸ್ತೆಯ ಅಭಿವೃದ್ಧಿ ಕೆಲಸ ನಡೆಯುತ್ತಿದೆ. ಆದರೆ ಸಮರ್ಪಕವಾಗಿಲ್ಲ. ಅಲ್ಲಲ್ಲಿ ಅಗೆದು ಹಾಕಿದ ರಸ್ತೆಯಿಂದ ಸಾರ್ವಜನಿಕರಿಗೆ ಸಂಚಾರಕ್ಕೆ ಅಡ್ಡಿ ಉಂಟಾಗುತ್ತಿದೆ. ಗುತ್ತಿಗೆದಾರರು, ಇಲಾಖೆ ಅಧಿಕಾರಿಗಳನ್ನು ಇಲ್ಲಿನ
ಜನ ಶಪಿಸುತ್ತಿದ್ದಾರೆ.

ತೇಪೆ ಕಾರ್ಯವಾಗಿಲ್ಲ
ಬಳ್ಪ – ಕಮಿಲ – ಗುತ್ತಿಗಾರು ರಸ್ತೆ ಎರಡು ರಾಜ್ಯ ಹೆದ್ದಾರಿಗಳನ್ನು ಸಂಪರ್ಕಿಸುವ ಪ್ರಮುಖ ರಸ್ತೆ. ದಿನವೂ ನೂರಾರು ವಾಹನಗಳು ಈ ರಸ್ತೆಯ ಮೂಲಕ ಓಡಾಡುತ್ತವೆ. 5.4 ಕಿ.ಮೀ. ದೂರದ ಈ ರಸ್ತೆ ದುರಸ್ತಿಗೆ 10 ವರ್ಷಗಳಿಂದ ಒತ್ತಾಯವಿತ್ತು. ಎರಡು ವರ್ಷದ ಹಿಂದೆ 1 ಕಿ.ಮೀ. ರಸ್ತೆಯನ್ನು ಸಂಪೂರ್ಣ ಕಿತ್ತು ಮರು ಡಾಮರೀಕರಣ ಮಾಡಲಾಗಿತ್ತು. ಆದರೆ ಅದು ಒಂದೇ ಮಳೆಗಾಲದಲ್ಲಿ ಅಲ್ಲಲ್ಲಿ ಎದ್ದು ಹೋಗಿತ್ತು. ಬಳಿಕ ಜನತೆ ಆಕ್ರೋಶ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ತೇಪೆ ಕಾರ್ಯ ಮಾಡಿದ್ದರು. ಮಳೆಗಾಲದ ಸಂದರ್ಭ ಮತ್ತೆ ಹೊಂಡಗಳು ಬಿದ್ದಿದ್ದವು. ಇದನ್ನು ಮಳೆಗಾಲದ ನಂತರ ದುರಸ್ತಿ ಮಾಡಲಾಗುವುದು ಎಂದು ಇಲಾಖೆ ಪತ್ರದ ಮೂಲಕ ತಿಳಿಸಿದ್ದರೂ ಇದುವರೆಗೂ ತೇಪೆ ಕಾರ್ಯವಾಗಿಲ್ಲ ಎಂಬುದು ಸ್ಥಳೀಯರ ಆರೋಪ.

ಕಮಿಲ ಪೇಟೆಯಿಂದ ಮುಂದೆ 40 ಮೀಟರ್‌ ಅಗೆದು ಹಾಕಲಾಗಿದ್ದು, ಈಗ ಎಸ್ಟಿಮೇಟಿನಲ್ಲಿ ಸೇರಿಲ್ಲ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಜನಪ್ರತಿನಿಧಿಗಳೂ ಮಾತನಾಡುತ್ತಿಲ್ಲ. ಈ 40 ಮೀಟರ್‌ ಗೆ ಕಾಂಕ್ರೀಟ್‌ ಕಾಮಗಾರಿ ಅಗತ್ಯವಾಗಿದೆ. ಪ್ರತೀ ಬಾರಿ ಮಳೆಗಾಲ ಈ ಪ್ರದೇಶದಲ್ಲಿ ರಸ್ತೆ ತೀರಾ ಹದಗೆಡುತ್ತದೆ, ಹೀಗಾಗಿ ಅಗೆದು ಹಾಕಿದ ಭಾಗದಲ್ಲಿ ಕಾಂಕ್ರೀಟು ರಸ್ತೆ ಮಾಡಬೇಕೆಂದು ಜನತೆ ಒತ್ತಾಯಿಸಿದ್ದರು. ನಬಾರ್ಡ್‌ ಅನುದಾನದಲ್ಲಿ ಇದೆಲ್ಲ ಪೂರ್ತಿಯಾಗುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದರು. ಕಳೆದ 10 ವರ್ಷದಲ್ಲಿ ನಡೆಯದ ಕಾಮಗಾರಿಗಳು ಈಗ ನಬಾರ್ಡ್‌ ಮೂಲಕ ನಡೆಯುತ್ತವೆಯೇ ಎಂಬ ಸಂಶಯ ಸ್ಥಳಿಯರಲ್ಲಿದೆ.

ಈಗ ರಸ್ತೆಯಲ್ಲಿ ವಾಹನ ಸಂಚಾರ ಬಂದ್‌ ಮಾಡಿ ಕಾಮಗಾರಿ ನಡೆಯುತ್ತಿದೆ. ಕಳೆದ ಬಾರಿ ಡಾಮರು ಹಾಕುವ ಕಾಮಗಾರಿಯನ್ನು ರಸ್ತೆಯಲ್ಲಿ ವಾಹನ ಸಂಚಾರ ಬಂದ್‌ ಮಾಡಿಯೇ ನಡೆಸಲಾಗಿತ್ತು. ಈಗ ರಸ್ತೆ ಸಂಚಾರ ಬಂದ್‌ ಮಾಡಿರುವ ಸಂದರ್ಭದಲ್ಲೇ ಅಗೆದು ಹಾಕಿರುವ ರಸ್ತೆಗೆ ಕಾಂಕ್ರೀಟೀಕರಣ ಅಥವಾ ವ್ಯವಸ್ಥಿತ ರೀತಿಯ ಕಾಮಗಾರಿ ನಡೆಸಬೇಕು. ಮುಂದೆ ಈ 40 ಮೀಟರ್‌ ಕಾಮಗಾರಿಗೆ ಇಡೀ ರಸ್ತೆಯಲ್ಲಿ ವಾಹನ ಸಂಚಾರ ಬಂದ್‌ ಮಾಡುವುದು ಸರಿಯಲ್ಲ. ಕಮಿಲ – ಬಳ್ಪ ರಸ್ತೆಯಲ್ಲಿ ದೇವಸ್ಯದಿಂದ ಮುಂದೆ ಗುತ್ತಿಗಾರುವರಗೆ 2 ಕಿ.ಮೀ. ರಸ್ತೆ ಹದಗೆಟ್ಟಿದೆ, ಅಲ್ಲಲ್ಲಿ ರಸ್ತೆ ಹೊಂಡ ಬಿದ್ದಿದೆ. ಇದಕ್ಕೆ ತೇಪೆ ಕಾರ್ಯ ಮಾಡಬೇಕು ಎಂದು ಜನರು ಒತ್ತಾಯಿಸಿದ್ದಾರೆ.

ತೋಚಿದಲ್ಲಿ ಕೆಲಸ
ಕಮಿಲದಿಂದ 1.5 ಕಿ.ಮೀ. ದೂರದ ರಸ್ತೆಯ ಕಾಮಗಾರಿ ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆಯ ಅಡಿ ಈಗ ಆರಂಭಗೊಂಡಿದೆ. ಇಲ್ಲಿಯೂ ಕಾಮಗಾರಿ ಬಗ್ಗೆ ಜನತೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕಾಮಗಾರಿಯಲ್ಲಿ 1
ಕಿ.ಮೀ. ಡಾಮರೀಕರಣ ಹಾಗೂ ಉಳಿದ 500 ಮೀಟರ್‌ ಕಾಂಕ್ರೀಟೀಕರಣ ಎಂದು ಅಧಿಕಾರಿಗಳು ಅಂದಾಜುಪಟ್ಟಿ ತಯಾರಿಸಿ ಕೆಲಸ ಆರಂಭಿಸಿದ್ದರು. ಆದರೆ ಕಾಂಕ್ರೀಟು ಎಲ್ಲಿ ಬೇಕಾಗಿತ್ತೋ ಅಲ್ಲಿ ಮಾಡದೆ ಅಧಿಕಾರಿಗಳಿಗೆ ತೋಚಿದ ಕಡೆ ಮಾಡುತ್ತಿದ್ದಾರೆ ಎಂದು ಜನರು ಜಿಲ್ಲಾಧಿಕಾರಿಗಳ ಸಹಿತ ಮುಖ್ಯಮಂತ್ರಿ ಕಚೇರಿ ವರೆಗೆ ದೂರು ನೀಡಿದ್ದಾರೆ.

ತತ್‌ಕ್ಷಣ ದುರಸ್ತಿಯಾಗಲಿ
ಗುತ್ತಿಗಾರು – ಕಮಿಲ – ಬಳ್ಪ ರಸ್ತೆ ತೀರಾ ಹದಗೆಟ್ಟಿದೆ. ಈಗ ತೇಪೆ ಕಾರ್ಯ ಕೂಡ ಸರಿಯಾಗಿ ನಡೆದಿಲ್ಲ, ಇಡೀ ರಸ್ತೆಯ ಅಲ್ಲಲ್ಲಿ ಗುಂಡಿಗಳು ಇವೆ. ಇದು ಕೂಡಾ ತತ್‌ಕ್ಷಣವೇ ದುರಸ್ತಿಯಾಗಬೇಕಿದೆ.
– –ಸೂರ್ಯನಾರಾಯಣ ಕಮಿಲ
   ಸ್ಥಳೀಯ ನಿವಾಸಿ

ಬೇಕಾದಲ್ಲಿ ಕಾಂಕ್ರೀಟ್‌ ಹಾಕಿಲ್ಲ
ಅನೇಕ ವರ್ಷಗಳಿಂದ ಕಮಿಲದಿಂದ ಮುಂದೆ ಮಳೆಗಾಲದಲ್ಲಿ ರಸ್ತೆ ಹದಗೆಡುತ್ತದೆ. ಇಲ್ಲಿ ಕಾಂಕ್ರೀಟ್‌ ರಸ್ತೆ ಈಗ ಆಗಬೇಕಿತ್ತು. ಆದರೆ ಆವಶ್ಯಕವಿರುವ ಸ್ಥಳ ಬಿಟ್ಟು ಬೇರೆಡೆಗೆ ಸ್ಥಳಾಂತರಿಸಿದ್ದಾರೆ.
 – ಶೂರಪ್ಪ ಕಮಿಲ
   ರಸ್ತೆ ಫ‌ಲಾನುಭವಿ

 ಬಾಲಕೃಷ್ಣ ಭೀಮಗುಳಿ

ಟಾಪ್ ನ್ಯೂಸ್

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

vJune 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

June 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

Belthangady ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ: ಕೋಟ

Belthangady ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ: ಕೋಟ

Belthangady ವಿದ್ಯುತ್‌ ತಂತಿ ಮೇಲೆ ಬಿದ್ದ ಮರ; ವ್ಯಕ್ತಿಗೆ ಗಾಯ

Belthangady ವಿದ್ಯುತ್‌ ತಂತಿ ಮೇಲೆ ಬಿದ್ದ ಮರ; ವ್ಯಕ್ತಿಗೆ ಗಾಯ

1-asdsad

Bantwal; ರಿಕ್ಷಾ ಪಲ್ಟಿಯಾಗಿ ರಸ್ತೆಗೆ ಎಸೆಯಲ್ಪಟ್ಟ ಯುವಕ ಮೃತ್ಯು

1wewqewq

Bantwal; ಮಂಚಿಯಲ್ಲಿ ಹಿಟ್ ಆ್ಯಂಡ್ ರನ್: ಸ್ಕೂಟರ್ ಸವಾರ ಮೃತ್ಯು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.