ಮಿನಿವಿಧಾನಸೌಧದ ಆವರಣದಲ್ಲಿ ಡಂಪಿಂಗ್‌ ಯಾರ್ಡ್‌:ಅವ್ಯವಸ್ಥೆಗೆ ಆಕ್ಷೇಪ


Team Udayavani, Aug 4, 2018, 11:41 AM IST

4-agust-5.jpg

ನಗರ : ಹಲವು ಸರಕಾರಿ ಕಚೇರಿಗಳು ಒಂದೆಡೆ ಇರುವ ಮಿನಿ ವಿಧಾನ ಸೌಧದಲ್ಲಿ ಕಸ ವಿಲೇವಾರಿಗೆ ಸಮರ್ಪಕ ವ್ಯವಸ್ಥೆಗಳಿಲ್ಲ. ಕಟ್ಟಡದ ಆವರಣದ ಒಂದು ಭಾಗದಲ್ಲಿ ಕಸವನ್ನು ರಾಶಿ ಹಾಕಿ ಸುಡುವ ಇಲ್ಲಿನ ಅವೈಜ್ಞಾನಿಕ ವ್ಯವಸ್ಥೆಗೆ ಸಾರ್ವಜನಿಕ ವಲಯದಿಂದ ಆಕ್ಷೇಪವೂ ವ್ಯಕ್ತವಾಗಿದೆ.

ನಗರಸಭೆ ಆಡಳಿತವು ಸ್ವಚ್ಛ  ಪುತ್ತೂರು ಮಾಡುವ ನಿಟ್ಟಿನಲ್ಲಿ ಪ್ರಯತ್ನಗಳನ್ನು ನಡೆಸುತ್ತಿದ್ದರೂ ಸರಕಾರಿ ಕಚೇರಿಗಳೇ ಸ್ಪಂದನೆ ನೀಡುತ್ತಿಲ್ಲ. ಇದಕ್ಕೆ ಮಿನಿ ವಿಧಾನಸೌಧದ ಪಕ್ಕದಲ್ಲಿ ರಾಶಿ ಬಿದ್ದಿರುವ ಕಸದ ರಾಶಿ ಹಾಗೂ ಇದರ ಅವೈಜ್ಞಾನಿಕ ವಿಲೇವಾರಿ ಸಾಕ್ಷಿ ಎಂದು ಚಿಕ್ಕಮುಟ್ನೂರು ಕಲಿಯುಗ ಸೇವಾ ಸಮಿತಿ ಆರೋಪಿಸಿದೆ. 

ಕಸವನ್ನು ರಾಶಿ ಹಾಕಿ ಬೆಂಕಿ ಹಾಕುವುದು, ಪ್ಲಾಸ್ಟಿಕ್‌ ಬಾಟ್ಲಿ, ಇತರ ಪ್ಲಾಸ್ಟಿಕ್‌ ತ್ಯಾಜ್ಯಗಳನ್ನು ಕಸದ ರಾಶಿಯಲ್ಲಿ ಹಾಕಿ ಸುಡಲಾಗುತ್ತಿದೆ. ಈ ಹಿಂದೆ ಸಹಾಯಕ ಕಮಿಷನರ್‌ಗೆ ದೂರು ನೀಡಲಾಗಿದ್ದು, ಸ್ಥಳ ಪರಿಶೀಲನೆ ನಡೆಸುವ ಮತ್ತು ಕಾನೂನು ಬಾಹಿರ ಕೃತ್ಯಗಳಿಗೆ ಅವಕಾಶ ನೀಡದಂತೆ ವ್ಯವಸ್ಥೆ ಕಲ್ಪಿಸುವ ಭರವಸೆಯನ್ನು ನೀಡಿದ್ದರು.

ಸಹಾಯಕ ಆಯುಕ್ತರ ಕಚೇರಿಯಿಂದ ತಹಶೀಲ್ದಾರ್‌ಗೆ ನೊಟೀಸ್‌ ಜಾರಿ ಮಾಡಿ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಸೂಚಿಸಲಾಗಿತ್ತು. ಹಲವಾರು ಸಂಘಟನೆಗಳು ವಿಧಾನಸೌಧದಲ್ಲಿನ ತ್ಯಾಜ್ಯ ವಿಲೇವಾರಿ ವ್ಯವಸ್ಥೆಗೆ ಆಕ್ಷೇಪ ವ್ಯಕ್ತಪಡಿಸಿದ್ದವು. ಆದರೂ ಇಲ್ಲಿನ ಅವ್ಯವಸ್ಥೆಗಳು ಯಥಾ ಸ್ಥಿತಿಯಲ್ಲಿ ಮುಂದುವರಿದುಕೊಂಡು ಬಂದಿದೆ ಎಂದು ಸಮಿತಿ ಆರೋಪಿಸಿದೆ.

ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ತೆರೆದ ಸ್ಥಳಗಳಲ್ಲಿ ಕಸ ಸುಡುವುದನ್ನು ನಿಷೇಧಿಸಿದೆ ಮತ್ತು ಇಂತಹ ಕೃತ್ಯಗಳಿಗೆ ದಂಡ ವಿಧಿಸಲು ಸೂಚಿಸಿದೆ. ವಿದ್ಯಾವಂತರೆನಿಸಿಕೊಂಡವರು, ಸರಕಾರಿ ಕಚೇರಿಯಲ್ಲಿನ ಸಿಬಂದಿ ಇಂತಹ ಕೃತ್ಯ ನಡೆಸದೆ ಸ್ವಚ್ಛ ಭಾರತ ಆಂದೋಲನದಲ್ಲಿ ಸಹಕರಿಸಬೇಕು ಎಂದು ಸಮಿತಿ ಆಗ್ರಹಿಸಿದೆ.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.