ಇ-ಕೆವೈಸಿ ಪ್ರಕ್ರಿಯೆ: ಜ.10ರಿಂದ ಪುನರಾರಂಭ

2.76 ಲಕ್ಷ ಕುಟುಂಬಗಳು ಬಯೋಮೆಟ್ರಿಕ್‌ ನೀಡಲು ಬಾಕಿ

Team Udayavani, Jan 8, 2020, 6:06 AM IST

15

ಮಹಾನಗರ: ಸರ್ವರ್‌ ಸಮಸ್ಯೆ ಹಾಗೂ ಹೆಚ್ಚುವರಿ ಸರ್ವರ್‌ಗಳ ಜೋಡಣೆ ಕಾರಣದಿಂದ ಮೂರು ದಿನಗಳಿಂದ ಸ್ಥಗಿತಗೊಂಡಿದ್ದ ಪಡಿತರ ಚೀಟಿಯ ಇ-ಕೆವೈಸಿ ಪ್ರಕ್ರಿಯೆಯು ಜ. 10ರಂದು ಮಂಗಳೂರು ಸಹಿತ ದ.ಕ. ಜಿಲ್ಲಾದ್ಯಂತ ಪುನರಾರಂಭವಾಗಲಿದೆ.

ಪಡಿತರ ಚೀಟಿಗೆ ಆಧಾರ್‌ ಜೋಡಣೆ ಸಹಿತ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣ ಗೊಳಿಸುವುದಕ್ಕೆ ಅರ್ಹ ಫಲಾ ನುಭವಿಗಳಿಗೆ ಈ ಹಿಂದೆ ಜ. 31ರ ಅಂತಿಮ ಗಡುವು ನೀಡಲಾಗಿತ್ತು. ಆದರೆ, ದ.ಕ. ಜಿಲ್ಲೆಯಲ್ಲಿ ಶೇ.60ಕ್ಕೂ ಹೆಚ್ಚು ಕುಟುಂಬ ಇನ್ನೂ ಇ-ಕೆವೈಸಿ ಮಾಡಲು ಬಾಕಿಯಿದೆ. ಅಲ್ಲದೆ, ಅಂತಿಮ ಗಡುವು ಸಮೀಪಿ ಸುತ್ತಿದ್ದಂತೆ ಇ-ಕೆವೈಸಿ ಪ್ರಕ್ರಿಯೆಗೆ ಫಲಾನುಭವಿಗಳ ಒತ್ತಡ ಜಾಸ್ತಿಯಾದ ಕಾರಣದಿಂದಲೂ ಸರ್ವರ್‌ ಸಮಸ್ಯೆ ಎದುರಾಗಿತ್ತು. ಈ ಎಲ್ಲ ಕಾರಣಗಳಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಹೆಚ್ಚುವರಿ ಸರ್ವರ್‌ ಜೋಡಣೆ ಕಾರಣ ನೀಡಿ ರಾಜ್ಯಾದ್ಯಂತ ಜ. 5ರಿಂದ 7ರ ವರೆಗೆ ಇ-ಕೆವೈಸಿ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿತ್ತು. ಅಲ್ಲದೆ, ಈ ಇ-ಕೆವೈಸಿ ಪ್ರಕ್ರಿಯೆ ಗಡುವು ಅನ್ನು ಮಾ. 31ರ ವರೆಗೆ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ.

ರಾಜ್ಯಾದ್ಯಂತ ನಾಲ್ಕು ವರ್ಷಗಳ ಅವಧಿಯಲ್ಲಿ ಸುಮಾರು 10 ಲಕ್ಷಕ್ಕೂ ಹೆಚ್ಚು ಮಂದಿ ಪಡಿತರ ಚೀಟಿ ಫಲಾನುಭವಿಗಳು ಮೃತಪಟ್ಟಿದ್ದರೂ ಅವರ ಹೆಸರಿನಲ್ಲಿ ಪಡಿತರ ಪಡೆಯುತ್ತಿರುವ ಪ್ರಕರಣಗಳು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ರೇಷನ್‌ ಕಾರ್ಡ್‌ಗೆ ಆಧಾರ್‌ ಜೋಡಿಸುವ ಇ- ಕೆವೈಸಿ ನಿಯಮವನ್ನು ರಾಜ್ಯ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಜಾರಿಗೆ ತಂದಿತ್ತು. ವರ್ಷಗಳಿಂದೀಚೆಗೆ ಕಾರ್ಡ್‌ ಮಾಡಿಸಿ  ಕೊಂಡ ವರನ್ನು ಹೊರತು ಪಡಿಸಿ, ಉಳಿದ ಎಲ್ಲ ಪಡಿತರ ಚೀಟಿದಾರರಿಗೆ ಬಯೋ ಮೆಟ್ರಿಕ್‌ ಮೂಲಕ ಇ- ಕೆವೈಸಿ ಪ್ರಕ್ರಿಯೆ ಮಾಡಲು ಇಲಾಖೆ ಜ. 31ರ ಗಡುವು ನೀಡಿತ್ತು. ಗಡುವು ಸಮೀಪಿ  ಸುತ್ತಿರುವವರೆಗೂ ಬಯೋಮೆಟ್ರಿಕ್‌ಗೆ ಬಾರದ ಜನ, ಏಕಾ ಏಕೀ ಬರತೊಡಗಿದ್ದರಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಸರ್ವರ್‌ ಸಮಸ್ಯೆ ಕಾಣಿಸಿಕೊಂಡಿದೆ. ಹೆಚ್ಚುವರಿ ಸರ್ವರ್‌ಗಳ ಜೋಡಣೆ ಮಾಡುವುದಕ್ಕೆ ಸರಕಾರ ತೀರ್ಮಾನಿಸಿತ್ತು. ಅಧಿಕಾರಿಗಳ ಪ್ರಕಾರ, ಜ. 10ರಿಂದ ಇ-ಕೆವೈಸಿ ಪುನರಾರಂಭವಾಗಲಿದೆ.

ನ್ಯಾಯಬೆಲೆ ಅಂಗಡಿಯಲ್ಲೇ ಪ್ರಕ್ರಿಯೆ
ಇ-ಕೆವೈಸಿ ಪ್ರಕ್ರಿಯೆಯನ್ನು ಪಡಿತರ ಚೀಟಿದಾರರು ನ್ಯಾಯಬೆಲೆ ಅಂಗಡಿಗಳಲ್ಲೇ ಮಾಡಬೇಕು. ಪಡಿತರ ಚೀಟಿಯಲ್ಲಿರುವ ಎಲ್ಲ ಸದಸ್ಯರೂ ಬಯೋಮೆಟ್ರಿಕ್‌ ನೀಡಬೇಕಾಗುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರ ಮತ್ತು ಆಧಾರ್‌ ಕಾರ್ಡ್‌ ಪ್ರತಿಯನ್ನು ನೀಡಬೇಕು. ಉಳಿದವರು ಆಧಾರ್‌ ಕಾರ್ಡ್‌ ಪ್ರತಿಯನ್ನು ಬಯೋಮೆಟ್ರಿಕ್‌ ವೇಳೆ ನೀಡಬೇಕು. ಈ ನಿಯಮಕ್ಕೆ ಒಳಪಡದವರ ರೇಷನ್‌ ವಿತರಣೆಯನ್ನು ಗಡುವು ಮೀರಿದ ನಂತರ ತಡೆ ಹಿಡಿಯಲಾಗುತ್ತದೆ ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಕಳೆದೊಂದು ವರ್ಷಗಳಿಂದೀಚೆಗೆ ರೇಷನ್‌ ಕಾರ್ಡ್‌ ಮಾಡಿಸಿಕೊಂಡವರು ಇ-ಕೆವೈಸಿ ಮಾಡುವ ಅಗತ್ಯವಿಲ್ಲ. ಅವರ ವಿವರಗಳು ಸ್ವಯಂಚಾಲಿತವಾಗಿ ಅಪ್ಲೋಡ್‌ ಆಗಿರುತ್ತದೆ. ಆದರೆ, ಈ ಬಗ್ಗೆ ನ್ಯಾಯಬೆಲೆ ಅಂಗಡಿಗಳಲ್ಲಿ ಖಚಿತಪಡಿಸಿಕೊಳ್ಳಬೇಕು.

2,76,196 ಕುಟುಂಬ ಬಾಕಿ
ಜಿಲ್ಲೆಯಲ್ಲಿ ಶನಿವಾರದವರೆಗೆ ಸುಮಾರು ಶೇ. 38.76ರಷ್ಟು ಕುಟುಂಬಗಳ ಸದಸ್ಯರು ಬಯೋಮೆಟ್ರಿಕ್‌ ನೀಡಿದ್ದರು. ಒಟ್ಟು 4,30,665 ಕುಟುಂಬಗಳ ಪೈಕಿ ಪ್ರಸ್ತುತ 1,54,469 ಮಂದಿಯಷ್ಟೇ ಇ-ಕೆವೈಸಿ ಮಾಡಿಸಿಕೊಂಡಿದ್ದಾರೆ. ಇದರಲ್ಲಿ 23,209 ಅಂತ್ಯೋದಯ ಕುಟುಂಬಗಳ ಪೈಕಿ 4,311 ಕುಟುಂಬ, 2,48,385 ಬಿಪಿಎಲ್‌ ಕುಟುಂಬಗಳ ಪೈಕಿ 1,08,840 ಕುಟುಂಬ ಮತ್ತು 1,59,061 ಎಪಿಎಲ್‌ ಕುಟುಂಬಗಳ ಪೈಕಿ 41,318 ಕುಟುಂಬ ಇ-ಕೆವೈಸಿ ಪ್ರಕ್ರಿಯೆಯಡಿ ಬಯೋಮೆಟ್ರಿಕ್‌ ನೀಡಿವೆ.

ತಾಲೂಕುವಾರು ವಿವರ
ಬೆಳ್ತಂಗಡಿಯಲ್ಲಿ 3,362 ಅಂತ್ಯೋದಯ ಕುಟುಂಬಗಳ ಪೈಕಿ 611 ಕುಟುಂಬ, 44,755 ಬಿಪಿಎಲ್‌ ಕುಟುಂಬಗಳ ಪೈಕಿ 17,743 ಕುಟುಂಬ, 13,205 ಎಪಿಎಲ್‌ ಕುಟುಂಬಗಳ ಪೈಕಿ 4,001 ಕುಟುಂಬ; ಬಂಟ್ವಾಳದ 5,978 ಅಂತ್ಯೋದಯ ಕುಟುಂಬಗಳ ಪೈಕಿ 1,359 ಕುಟುಂಬ, 55,841 ಬಿಪಿಎಲ್‌ ಕುಟುಂಬಗಳ ಪೈಕಿ 24,607 ಕುಟುಂಬ, 22,013 ಎಪಿಎಲ್‌ ಕುಟುಂಬಗಳ ಪೈಕಿ 5,367 ಕುಟುಂಬ; ಮಂಗಳೂರಿನಲ್ಲಿ 8,316 ಅಂತ್ಯೋದಯ ಕುಟುಂಬಗಳ ಪೈಕಿ 1,146 ಕುಟುಂಬ, 88,185 ಬಿಪಿಎಲ್‌ ಕುಟುಂಬ ಗಳ ಪೈಕಿ 39,091 ಕುಟುಂಬ, 87,254 ಎಪಿಎಲ್‌ ಕುಟು ಂಬಗಳ ಪೈಕಿ 21,841 ಕುಟುಂಬ; ಪುತ್ತೂರಿನಲ್ಲಿ 3,999 ಅಂತ್ಯೋ ದಯ ಕುಟುಂಬಗಳ ಪೈಕಿ 857 ಕುಟುಂಬ, 40,440 ಬಿಪಿಎಲ್‌ ಕುಟುಂಬಗಳ ಪೈಕಿ 19,117 ಕುಟುಂಬ, 25,692 ಎಪಿಎಲ್‌ ಕುಟುಂಬಗಳ ಪೈಕಿ 6,808 ಕುಟುಂಬ; ಸುಳ್ಯದಲ್ಲಿ 1,554 ಅಂತ್ಯೋದಯ ಕುಟುಂಬಗಳ ಪೈಕಿ 338 ಮಂದಿ, 19,164 ಬಿಪಿ ಎಲ್‌ ಕುಟುಂಬಗಳ ಪೈಕಿ 8,282 ಕುಟುಂಬ, 10,897 ಎಪಿಎಲ್‌ ಕುಟುಂಬಗಳ ಪೈಕಿ 30,301 ಕುಟುಂಬ ಇ-ಕೆವೈಸಿ ಮಾಡಿಸಿಕೊಂಡಿವೆ.

ಬಯೋಮೆಟ್ರಿಕ್‌ ಮಾಡಿಸಿಕೊಳ್ಳಿ
ಕಳೆದೊಂದು ವರ್ಷಗಳಿಂದ ಪಡಿತರ ಚೀಟಿಗೆ ಅರ್ಜಿ ಹಾಕುವಾಗಲೇ ಬಯೋ ಮೆಟ್ರಿಕ್‌ ಕಡ್ಡಾಯ ತೆಗೆದುಕೊಳ್ಳಲಾಗುತ್ತದೆ. ಹಾಗಾಗಿ, ಅಂಥಹವರು ಮತ್ತೆ ಬಯೋಮೆಟ್ರಿಕ್‌ ಕೊಡಬೇಕಾಗಿಲ್ಲ. ಆದರೆ, ಹಿಂದೆ ಚೀಟಿ ಮಾಡಿಸಿ ಕೊಂಡವರು ಕಡ್ಡಾಯವಾಗಿ ಬಯೋ ಮೆಟ್ರಿಕ್‌ ಕೊಡಲೇಬೇಕು. ಜನ ಇದರ ಆವಶ್ಯಕತೆ ಅರಿತು ಮಾ. 31ರೊಳಗೆ ಬಯೋಮೆಟ್ರಿಕ್‌ ಮಾಡಿಸಿಕೊಳ್ಳಬೇಕು.
 - ಡಾ| ಮಂಜುನಾಥನ್‌, ಜಂಟಿ ನಿರ್ದೇಶಕರು, ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆ

ಟಾಪ್ ನ್ಯೂಸ್

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.