‘ಶೇ. 85ಕ್ಕೂ ಹೆಚ್ಚು ಮತದಾನವಾಗಲು ಶ್ರಮಿಸಿ’


Team Udayavani, Apr 19, 2018, 11:35 AM IST

19-April-6.jpg

ಬೆಳ್ತಂಗಡಿ: ತಾ|ನಲ್ಲಿ ಈ ಬಾರಿ ಶೇ. 85ಕ್ಕಿಂತಲೂ ಹೆಚ್ಚು ಮತ ದಾನವಾಗಲು ಮತದಾನ ಜಾಗೃತಿ ಸಮಿತಿ ಸದಸ್ಯರು ಶ್ರಮಿಸಬೇಕು. ಪ್ರತಿ ಮತಗಟ್ಟೆಗಳಲ್ಲಿ ಮತದಾರರು ಭಾಗವಹಿಸಿ ಮತದಾನ ಮಾಡುವಂತೆ ಪ್ರೇರೇಪಿಸುವ ಕಾರ್ಯ ಮಾಡಬೇಕಿದೆ ಎಂದು ಜಿಲ್ಲಾ ಸ್ವೀಪ್‌ ಸಮಿತಿ ಅಧ್ಯಕ್ಷ ಹಾಗೂ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ| ಎಂ.ಆರ್‌. ರವಿ ಹೇಳಿದರು.

ಅವರು ಚುನಾವಣೆ ಪ್ರಯುಕ್ತ ಗುರುವಾಯನಕೆರೆ ನಮ್ಮ ಮನೆ ಹವ್ಯಕ ಭವನದಲ್ಲಿ ಭಾರತ ಚು.ಆಯೋಗ, ದ.ಕ. ಜಿಲ್ಲಾ ಸ್ವೀಪ್‌ ಸಮಿತಿ, ಸೆಕ್ಟರ್‌ ಅಧಿಕಾರಿಗಳು, ತಾ| ಆರೋಗ್ಯಾಧಿಕಾರಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ, ಕ್ಷೇತದ ಎಲ್ಲ ಬಿಎಲ್‌ಒಗಳು ಹಾಗೂ ಬ್ಯಾಗ್‌ ತಂಡದ ಸದಸ್ಯರಿಗೆ ಹಮ್ಮಿಕೊಂಡಿದ್ದ ಬನ್ನಿ ಮತದಾನ ಕೇಂದ್ರಕ್ಕೆ ಇವಿಎಂ ಹಾಗೂ ವಿವಿ ಪ್ಯಾಟ್‌ ಬಳಕೆ ಪ್ರಾತ್ಯಕ್ಷಿಕೆ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ತಾಲೂಕಿನಲ್ಲಿ ಹೆಚ್ಚಿನ ಮತದಾನ ನಡೆಯುವಂತೆ ಮಾಡಲು ಬಿಎಲ್‌ ಒಗಳು ಸಹಿತ ಬ್ಯಾಗ್‌ ಸಮಿತಿ ಸದಸ್ಯರು ಶ್ರಮಿಸಬೇಕು. ಮುಖ್ಯವಾಗಿ ಚುನಾವಣೆಗೂ ಮುನ್ನವೇ ಅಣಕು ಮತದಾನ ಮಾಡುವ ಮೂಲಕ ಜನರು ಮತದಾನ ಧೈರ್ಯವಾಗಿ ಮಾಡಲು ಪ್ರೇರಣೆ ನೀಡಬೇಕು. ಜನರು ಹೆಚ್ಚಾಗಿ ಸೇರುವ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಮತದಾನದ ಆರಿವು ಮೂಡಿಸಬೇಕು. ಜಾತ್ರೆ, ಸಭೆ, ಸಮಾರಂಭಗಳಲ್ಲಿ ಅರಿವು ಮೂಡಿಸುವ ಕಾರ್ಯ ನಡೆಸಬೇಕು. ಹಿರಿಯರು, ಅಂಗವಿಕಲರು ಮತಗಟ್ಟೆಗೆ ಆಗಮಿಸಿದಲ್ಲಿ ವಿಶೇಷ ಕಾಳಜಿ ವಹಿಸಿ ಅವರಿಗೆ ಪ್ರಥಮ ಪ್ರಾತಿನಿಧ್ಯ ನೀಡಬೇಕು. ಸಂವಿಧಾನಬದ್ಧ ಹಕ್ಕುಯಾವುದೇ ಕಾರಣಕ್ಕೂ ಕಳೆದುಕೊಳ್ಳಬಾರದು ಎಂದರು.

ಆತುರ ತೋರದಿರಿ
ಮತಯಂತ್ರದ ಬಗ್ಗೆ ಅಪಸ್ವರ ಕೇಳಿಬಂದ ಹಿನ್ನೆಲೆ ವಿವಿ ಪ್ಯಾಟ್‌ ಯಂತ್ರ ಈ ಬಾರಿ ಚುನಾವಣೆಯಲ್ಲಿ ಉಪಯೋಗಿಸಲಾಗುತ್ತಿದೆ. ಇದು ಮುದ್ರಣ ಯಂತ್ರದಂತೆ ಕಾರ್ಯ ನಿರ್ವಹಿಸಲಿದೆ. ಮತದಾನ ವೇಳೆ ಯಾರೂ ಆತುರ ತೋರಬಾರದು. ಇವಿಎಂ ಯಂತ್ರದಲ್ಲಿ ಮತ ಹಾಕಿದ ಬಳಿಕ ವಿವಿ ಪ್ಯಾಟ್‌ನಲ್ಲಿ ಮತ ಚಲಾಯಿಸಿದ ದೃಢೀಕರಣ ಲಭಿಸುತ್ತದೆ. 7 ಸೆಕುಂಡುಗಳ ದೃಢೀಕರಣ ಮತದಾರರಿಗೆ ಕಾಣಲಿದ್ದು, ಬಳಿಕ ಪೆಟ್ಟಿಗೆಯೊಳಗೆ ಮುದ್ರಣಗೊಂಡು ಶೇಖರಣೆಯಾಗಲಿದೆ. ಮತದಾನ ಪ್ರಕ್ರಿಯೆ ಮುಗಿದ ಬಳಿಕ ಯಾವುದಾದರೂ ಒಂದು ಬೂತ್‌ನ ಮತದಾನದ ಕುರಿತು ಪರಿಶೀಲಿಸುವ ಕಾರ್ಯವೂ ನಡೆಯಲಿದೆ ಎಂದರು. 

ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ಇಲಾಖೆ ಉಪನಿರ್ದೇಶಕ ಸುಂದರ ಪೂಜಾರಿ, ಚುನಾವಣಾಧಿಕಾರಿ ಎಚ್‌.ಆರ್‌. ನಾಯ್ಕ, ಇಒ ಬಸವರಾಜ ಅಯ್ಯಣ್ಣನವರ್‌, ಮಾಸ್ಟರ್‌ ಟ್ರೈನರ್‌ ಧರಣೇಂದ್ರ ಕುಮಾರ್‌ ಜೈನ್‌, ತಾ.ಪಂ. ಸಹಾಯಕ ನಿರ್ವಹಣಾಧಿಕಾರಿ ಕುಸುಮಾಕರ್‌, ಆರೋಗ್ಯಾಧಿಕಾರಿ ಡಾ| ಕಲಾಮಧು ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಚುನಾವಣೆ ಪ್ರಕ್ರಿಯೆಯಲ್ಲಿ ಭಾಗವಹಿಸಲು ವಿವಿಧೆಡೆಗಳಿಂದ ಅಧಿಕಾರಿಗಳು ಚುನಾವಣೆ ಹಿಂದಿನ ದಿನ ಮತಗಟ್ಟೆಗೆ ಆಗಮಿಸಲಿದ್ದಾರೆ. ಜತೆಗೆ ಬಿಲ್‌ಒ ಸಹಿತ ಇತರ ಸಿಬಂದಿಯ ಅನುಕೂಲಕ್ಕೆ ಊಟದ ವ್ಯವಸ್ಥೆ ಮಾಡಲಾಗುತ್ತದೆ. ಅಕ್ಷರ ದಾಸೋಹ ಸಿಬಂದಿ ಇದರ ಜವಾಬ್ದಾರಿ ವಹಿಸಲಿದ್ದಾರೆ ಎಂದು ಡಾ| ಎಂ.ಆರ್‌. ರವಿ ತಿಳಿಸಿದರು.

ಟಾಪ್ ನ್ಯೂಸ್

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

1-dubey

Increase of Muslims; ಝಾರ್ಖಂಡ್‌,ಪಶ್ಚಿಮ ಬಂಗಾಲ ಕೇಂದ್ರಾಡಳಿತ ಪ್ರದೇಶವಾಗಿಸಿ: ದುಬೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.