“ಜಾಗತಿಕ ಮಾರುಕಟ್ಟೆಗೂ ರಸಗೊಬ್ಬರ ರಫ್ತಿಗೆ ಯತ್ನ’
Team Udayavani, Nov 17, 2018, 8:57 AM IST
ಪುತ್ತೂರು: ದೇಶದಲ್ಲಿ 10 ಲಕ್ಷ ಮೆಟ್ರಿಕ್ ಟನ್ಗಳಷ್ಟು ರಸಗೊಬ್ಬರದ ಕೊರತೆ ಇದೆ. ಇತ್ತೀಚೆಗೆ ಉತ್ಪಾದನೆ ಗಣನೀಯ ಏರಿಕೆಯಾಗಿದ್ದು, ಎರಡು ವರ್ಷಗಳಲ್ಲಿ ಜಾಗತಿಕ ಮಾರುಕಟ್ಟೆಗೆ ರಸಗೊಬ್ಬರ ರಫ್ತು ಮಾಡುವ ನಿಟ್ಟಿನಲ್ಲಿ ಪ್ರಯತ್ನಗಳು ನಡೆಯುತ್ತಿವೆ ಎಂದು ಕೇಂದ್ರ ಸಾಂಖೀಕ, ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ. ಸದಾನಂದ ಗೌಡ ಹೇಳಿದ್ದಾರೆ.
ಶುಕ್ರವಾರ ಪುತ್ತೂರಿನಲ್ಲಿ ಪತ್ರಕರ್ತರ ಜತೆ ಮಾತನಾಡಿ, ಅನಂತ್ ಕುಮಾರ್ ಈ ಖಾತೆಯಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದು, ಯೂರಿಯಾ ಬಳಕೆಯಲ್ಲಿ ಅಕ್ರಮ ತಡೆಯಲು ಬೇವು ಲೇಪನ ಕ್ರಾಂತಿಕಾರಿ ಹೆಜ್ಜೆ ಎಂದರು. ಅಡಿಕೆ ಕೊಳೆರೋಗಕ್ಕೆ ಪರಿಹಾರ ರಾಜ್ಯ ಸರಕಾರದ ಕೆಲಸ. ಕೇಂದ್ರ ಸರಕಾರವು ಧಾರಣೆ ಕುಸಿಯದಂತೆ ಮಾರುಕಟ್ಟೆ ವ್ಯವಸ್ಥೆಗೆ ಉತ್ತೇಜನವನ್ನು ನೀಡಬಹುದು. ಅಡಿಕೆ ನಿಷೇಧದ ಆತಂಕ ದೂರ ಮಾಡುವ ನಿಟ್ಟಿನಲ್ಲಿ ತಜ್ಞರು, ಕೇಂದ್ರಗಳ ಮೂಲಕ ಸಂಶೋಧನೆ ನಡೆಸಿದ್ದು, ಸುಪ್ರೀಂ ಕೋರ್ಟ್ಗೆ ಸಲ್ಲಿಸಲಿದ್ದೇವೆ ಎಂದರು.
ಪುತ್ತೂರು ಜಿಲ್ಲೆಗೆ ಸಹಕಾರ
ಪುತ್ತೂರು ಜಿಲ್ಲೆಗಾಗಿ ಹೋರಾಟ ಆರಂಭವಾಗಿರುವ ಬಗ್ಗೆ ಪ್ರತಿಕ್ರಿಯಿಸಿದ ಸದಾನಂದ ಗೌಡ, ಪುತ್ತೂರು ಜಿಲ್ಲೆ ಹೋರಾಟ ಆರಂಭ ಮಾಡಿದ್ದೇ ನಾವು.ಸಮಿತಿ ಮಾಡಿದ್ದೆವು ಮತ್ತು ವಿಧಾನಸಭೆಯಲ್ಲಿಯೂ ವಿಷಯ ಪ್ರಸ್ತಾಪಿಸಿದ್ದೆವು. ಪುತ್ತೂರು ಜಿಲ್ಲಾ ಕೇಂದ್ರ ಆಗುವುದರಿಂದ ಹೆಚ್ಚು ಅನುದಾನ ಬರುತ್ತದೆ. ಇದಕ್ಕೆ ನನ್ನ ಸಂಪೂರ್ಣ ಸಹಕಾರ ಇದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ